Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಮಿಳುನಾಡಿನ ಉಚಿತ ಪಡಿತರ ರಾಜ್ಯದಲ್ಲಿ...

ತಮಿಳುನಾಡಿನ ಉಚಿತ ಪಡಿತರ ರಾಜ್ಯದಲ್ಲಿ ಅಕ್ರಮವಾಗಿ ಮಾರಾಟ

ನಾ.ಅಶ್ವಥ್ ಕುಮಾರ್ನಾ.ಅಶ್ವಥ್ ಕುಮಾರ್7 March 2017 6:58 PM IST
share
ತಮಿಳುನಾಡಿನ ಉಚಿತ ಪಡಿತರ ರಾಜ್ಯದಲ್ಲಿ ಅಕ್ರಮವಾಗಿ ಮಾರಾಟ

ಚಾಮರಾಜನಗರ. ಮಾ.7: : ತಮಿಳುನಾಡು ಸರಕಾರ ಅಲ್ಲಿನ ಬಡಜನರಿಗೆ ಉಚಿತವಾಗಿ ನೀಡುತ್ತಿರುವ ಪಡಿತರ ಅಕ್ಕಿ ರಾಜ್ಯದ ಹನೂರು ಭಾಗದಲ್ಲಿ ಕಳೆದ ಒಂದು ವಾರದಿಂದ ಅಕ್ರಮವಾಗಿ ಮಾರಾಟವಾಗುತ್ತಿದೆ.

ತಮಿಳುನಾಡು ಸರಕಾರ ಅಲ್ಲಿನ ಬಡ ಕುಟುಂಬಗಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಗೃಹೋಪಯೋಗಿ ವಸ್ತುಗಳಾದ ಟಿ.ವಿ, ಫ್ಯಾನ್, ಮಿಕ್ಸಿ ಹಾಗೂ ಗ್ರೈಂಡರ್‌ಗಳನ್ನು ಉಚಿತವಾಗಿ ನೀಡಿದೆಯಲ್ಲದೇ ಪಡಿತರವನ್ನು ನೀಡುತ್ತಿದೆ. ಆದರೆ ತಮಿಳುನಾಡಿನ ಗಡಿಯಂಚಿನ ಕೊಳತ್ತೂರು, ಮೇಟೂರು, ಕಾವೇರಿಪುರಂ, ಭವಾನಿಸಾಗರ ಹಾಗೂ ಈ ಭಾಗದ ಇನ್ನಿತರ ಗ್ರಾಮಗಳ ಕುಟುಂಬಗಳಿಂದ ದಲ್ಲಾಳಿಗಳು ಪಡಿತರ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿ ಮಾಡಿ ರಾಜ್ಯದ ಹನೂರು ಭಾಗದಲ್ಲಿ ಕಳೆದ ಒಂದು ವಾರದಿಂದ ಮಾರಾಟಮಾಡುತ್ತಿರುವುದು ಕಂಡು ಬರುತ್ತಿದೆ.

ಸರಕಾರದ ಸೌಲಭ್ಯ ದುರ್ಬಳಕೆ:

ತಮಿಳುನಾಡು ಸರಕಾರ ಅಲ್ಲಿನ ಜನತೆಗೆ ನಿತ್ಯ ಜೀವನಕ್ಕೆ ಅಗತ್ಯವಾದ ಪಡಿತರವನ್ನು ಉಚಿತವಾಗಿ ವಿತರಿಸುತ್ತಿದೆ. ಆದರೆ ಅಲ್ಲಿನ ಕೆಲವರು ಈ ಅಕ್ಕಿಯನ್ನು ಉಪಯೋಗಿಸುತ್ತಿಲ್ಲ. ಬದಲಾಗಿ ಕಡಿಮೆ ಬೆಲೆಗೆ ದಲ್ಲಾಳಿಗಳಿಗೆ ಮಾರಾಟ ಮಾಡುತ್ತಿದ್ದಾರೆ. ಅಕ್ಕಿಯನ್ನು ಖರೀದಿಸಿದವರು ತಮಿಳುನಾಡಿನಲ್ಲಿ ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ. ಅಲ್ಲದೇ, ಅಲ್ಲಿನ ಜನರು ಕೊಂಡುಕೊಳ್ಳಲು ತಯಾರಿಲ್ಲ. ಹೀಗಿರುವಾಗ ಇದರ ಪ್ರಯೋಜನವನ್ನು ಪಡೆದ ಕೆಲವರು ಗಡಿಯಂಚಿನ ಕೊಳತ್ತೂರು, ಮೇಟೂರು, ಭವಾನಿಸಾಗರ, ಕಾವೇರಿಪುರಂ ಹಾಗೂ ಈ ಭಾಗದ ಇನ್ನಿತರ ಗ್ರಾಮಗಳಿಂದ ಅಕ್ಕಿಯನ್ನು ಖರೀದಿಸಿ ರಾಜ್ಯದ ಹನೂರು ಭಾಗದ ಮಾರ್ಟಳ್ಳಿ, ರಾಮಾಪುರ, ಲೊಕ್ಕನಹಳ್ಳಿ, ಹನೂರು, ಮಂಗಲ, ಕಾಮಗೆರೆ, ಶಾಗ್ಯ, ಕೊಳ್ಳೇಗಾಲ ಹಾಗೂ ಈ ಭಾಗದ ಇನ್ನಿತರ ಗ್ರಾಮಗಳಲ್ಲಿ ಕಳೆದ ಒಂದು ವಾರದಿಂದ ಮಾರಾಟ ಮಾಡುವುದರಲ್ಲಿ ತಲ್ಲೀನರಾಗಿದ್ದಾರೆ.

ಒಂದು ಕೆಜಿ ಅಕ್ಕಿಗೆ 20-25ರೂ. ಗೆ ಮಾರಾಟ ಮಾಡಲಾಗುತ್ತಿರುವುದು ಹನೂರು ಕ್ಷೇತ್ರ ವ್ಯಾಪ್ತಿಯಲ್ಲಿ ಕಂಡು ಬರುತ್ತಿದೆ.

ಸೌಲಭ್ಯದ ಬಗ್ಗೆ ತಿಳಿವಳಿಕೆ:

ತಮಿಳುನಾಡಿನ ಮಧ್ಯವರ್ತಿಗಳು ಕಳೆದ ಒಂದು ವಾರದಿಂದ ಹನೂರು ಭಾಗದ ವಿವಿಧ ಗ್ರಾಮಗಳಲ್ಲಿ ಪಡಿತರ ಅಕ್ಕಿಯನ್ನು ಮಾರಾಟ ಮಾಡುತ್ತಿದ್ದಾರೆ. ಈ ಭಾಗದಲ್ಲಿನ ಕೆಲವರು ಕಡಿಮೆ ಬೆಲೆಗೆ ಸಿಕ್ಕಿತ್ತೆಂದು ಅಕ್ಕಿಯನ್ನು ಖರೀದಿಸಿದರೆ, ಪ್ರಜ್ಞಾವಂತ ನಾಗರಿಕರು ಅಕ್ಕಿಯನ್ನು ಕೊಂಡುಕೊಳ್ಳಲು ಮುಂದಾಗುತ್ತಿಲ್ಲ. ಬದಲಾಗಿ ತಮಿಳುನಾಡು ಸರಕಾರ ನೀಡುತ್ತಿರುವ ಸೌಲಭ್ಯಗಳನ್ನು ದುರ್ಬಳಕೆ ಮಾಡಿಕೊಳ್ಳಬೇಡಿ ಎಂದು ತಿಳಿವಳಿಕೆ ನೀಡುತ್ತಿದ್ದು, ಮಾರಾಟ ಮಾಡದಂತೆ ಎಚ್ಚರಿಕೆ ನೀಡುತ್ತಿದ್ದಾರೆ. ಆದರೆ ಇದಕ್ಕೆ ಕಿವಿಗೊಡದ ಮಧ್ಯವರ್ತಿಗಳು ಮಾರಾಟದಲ್ಲಿ ತಲ್ಲೀನರಾಗಿದ್ದಾರೆ.

ಹಿಂದಿನ ಅನುಭವದ ರುಚಿ:

ತಮಿಳುನಾಡು ಸರಕಾರ ಅಲ್ಲಿನ ಬಡ ಜನರಿಗೆ ಉಚಿತವಾಗಿ ಟಿವಿ. ಫ್ಯಾನ್, ಮಿಕ್ಸಿ, ಗ್ರೈಂಡರ್ ಹಾಗೂ ಇನ್ನಿತರ ಗೃಹಪಯೋಗಿ ವಸ್ತುಗಳನ್ನು ನೀಡಿದೆ. ಮಧ್ಯವರ್ತಿಗಳು ಅವುಗಳನ್ನು ಕಡಿಮೆ ಬೆಲೆಗೆ ಖರೀದಿಸಿದ್ದು, ಕಳೆದ 2 ವರ್ಷದ ಹಿಂದೆ ಟಿವಿ, ಕಳೆದ ಆರು ತಿಂಗಳ ಹಿಂದೆ ಫ್ಯಾನ್, ಮಿಕ್ಸಿ ಹಾಗೂ ಗ್ರೈಂಡರ್ ಅನ್ನು ಹನೂರು ಭಾಗದಲ್ಲಿ ಮಾರಾಟ ಮಾಡಿದ್ದಾರೆ.

ಹನೂರು ಭಾಗದಲ್ಲಿ ಈ ವಸ್ತುಗಳು ಉತ್ತಮವಾಗಿ ಮಾರಾಟವಾಗಿವೆ. ಇದರ ಲಾಭದ ರುಚಿಯನ್ನು ಅರಿತ ತಮಿಳುನಾಡಿನ ಮದ್ಯವರ್ತಿಗಳು ಇದೀಗ ಪಡಿತರ ಅಕ್ಕಿಯನ್ನು ಮಾರಾಟ ಮಾಡುತ್ತಿದ್ದಾರೆ. ಈಹಿಂದೆ ಹನೂರು ಸುತ್ತಮುತ್ತಲ ಗ್ರಾಮಗಳಲ್ಲಿ ಟಿ.ವಿಯನ್ನು1,200-1,500ರೂ, ಫ್ಯಾನ್ ಅನ್ನು 600-800ರೂ, ಮಿಕ್ಸಿಗೆ 500-800ರೂ, ಗ್ರೈಂಡರ್ ಅನ್ನು1,200-1,600ರೂಗೆ ಮಾರಾಟ ಮಾಡಿದ್ದರು. ಇದೀಗ ಅಕ್ಕಿಯನ್ನು ಕೆಜಿಗೆ 20-25ರೂನಂತೆ ಮಾರಾಟ ಮಾಡುತ್ತಿದ್ದಾರೆ.

ಚೆಕ್ ಪೋಸ್ಟ್‌ಗಳಲ್ಲಿ ಸಮರ್ಪಕ ತಪಾಸಣೆ ಇಲ್ಲ:

ದಲ್ಲಾಳಿಗಳು ಅಕ್ಕಿಯ ಮೂಟೆಗಳನ್ನು ತಮಿಳುನಾಡಿನಿಂದ ಟಾಟಾಏಸ್ ಹಾಗೂ ಬಸ್ಸಿನ ಮೂಲಕ ನಿರಾಳವಾಗಿ ತರುತ್ತಿದ್ದಾರೆ. ಆದರೆ ಚೆಕ್‌ಪೋಸ್ಟ್‌ಗಳಲ್ಲಿ ಸರಿಯಾದ ತಪಾಸಣೆ ನಡೆಯುತ್ತಿಲ್ಲ ಎಂಬುದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

share
ನಾ.ಅಶ್ವಥ್ ಕುಮಾರ್
ನಾ.ಅಶ್ವಥ್ ಕುಮಾರ್
Next Story
X