Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯದಲ್ಲಿ ಸಹಕಾರಿ ಸಂಘ ಬಲಿಷ್ಠ...

ರಾಜ್ಯದಲ್ಲಿ ಸಹಕಾರಿ ಸಂಘ ಬಲಿಷ್ಠ :ಎಂ.ಎನ್. ರಾಜೇಂದ್ರಕುಮಾರ್

'ಕನಕ ಸೌಧ' ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ7 March 2017 7:42 PM IST
share
ರಾಜ್ಯದಲ್ಲಿ ಸಹಕಾರಿ ಸಂಘ ಬಲಿಷ್ಠ :ಎಂ.ಎನ್. ರಾಜೇಂದ್ರಕುಮಾರ್

ಸುಳ್ಯ, ಮಾ.7: ರಾಷ್ಟ್ರೀಕೃತ ಬ್ಯಾಂಕ್ ಸೇವಾ ಸೌಲಭ್ಯದಷ್ಟೇ ಪ್ರಾಥಮಿಕ ಸಹಕಾರಿ ಸಂಸ್ಥೆಗಳು ಗ್ರಾಹಕರಿಗೆ ಸೇವೆ ನೀಡುತ್ತಿದ್ದು, ಗ್ರಾಹಕರೇ ನಮ್ಮ ಆಸ್ತಿಯಾಗಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ ಗಳು ಇತ್ತೀಚೆಗೆ ಸೇವಾ ಶುಲ್ಕವನ್ನು ವಿಧಿಸಲು ಆರಂಭಿಸಿದ್ದು, ನಾವು ನಮ್ಮ ಗ್ರಾಹಕರಿಗೆ ಸೇವಾ ಶುಲ್ಕ ವಿಧಿಸುವುದಿಲ್ಲ. ಸಹಕಾರಿ ಕೇಂದ್ರ ಬಲಿಷ್ಠವಾಗಿದ್ದು ಕೃಷಿಕರ ಆಶೋತ್ತರವನ್ನು ಈಡೇರಿಸುವಲ್ಲಿ ನಾವು ಸಫಲರಾಗಿದ್ದೇವೆ ಎಂದು ಮಂಗಳೂರು ಎಸ್.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಡಾ ರಾಜೇಂದ್ರಕುಮಾರ್ ಹೇಳಿದರು.

 ಅವರು ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಜಾಲ್ಸೂರು ಇದರ ನೂತನ ಕಟ್ಟಡ ಕನಕ ಸೌಧವನ್ನು ಉದ್ಘಾಟಿಸಿ ಮಾತನಾಡಿದರು.

ನೋಟು ಅಮಾನ್ಯದಿಂದ ಕೃಷಿ ಸಾಲ ಮರುಪಾವತಿ ಮಾಡಲು ತೊಡಕು ಉಂಟಾಗಿದೆ. ಇದನ್ನು ಮೂರು ತಿಂಗಳಿಗೆ ವಿಸ್ತರಿಸಬೇಕೆಂದು ವಿನಂತಿಸಿದ ಮೇರೆಗೆ ಎರಡು ತಿಂಗಳು ವಿಸ್ತರಣೆಯಾಗಿದೆ. ಇನ್ನೂ ಒಂದು ತಿಂಗಳು ವಿಸ್ತರಣೆಯಾಗಬೇಕು ಎಂದು ವಿನಂತಿಸುತ್ತೇವೆ. ಪುತ್ತೂರು-ಸುಳ್ಯ ಭಾಗದಲ್ಲಿ ಮಳೆ ಕಡಿಮೆಯಾಗಿ ಬರಗಾಲ ಎದುರಾಗಿದೆ. ಈ ನಿಟ್ಟಿನಲ್ಲಿ ಸುಳ್ಯ ಪುತ್ತೂರನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ಬರ ಪರಿಹಾರವನ್ನು ಈ ಭಾಗಕ್ಕೂ ವಿಸ್ತರಿಸಬೇಕೆಂದು ರಾಜೇಂದ್ರಕುಮಾರ್ ಒತ್ತಾಯಿಸಿದರು.

ಆಡಳಿತ ಕಚೇರಿಯನ್ನು ಶಾಸಕ ಎಸ್. ಅಂಗಾರ ಉದ್ಘಾಟಿಸಿ, ಶುಭಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಕೆ.ಎಸ್. ದೇವರಾಜ್ ಭದ್ರತಾ ಕೊಠಡಿಯನ್ನು ಉದ್ಘಾಟಿಸಿದರು.

ಸಂಸದ ನಳಿನ್‌ಕುಮಾರ್ ಕಟೀಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ನೋಟು ಅಮಾನ್ಯದಿಂದ ಎಲ್ಲರಿಗೆ ಸ್ವಲ್ಪ ತೊಂದರೆಯಾದರೂ ಕಪ್ಪು ಹಣವನ್ನು ಹೊರಗೆ ತರುವಲ್ಲಿ ಪ್ರಧಾನಿಯವರ ದಿಟ್ಟ ನಿರ್ಧಾರ ಭವ್ಯ ಭಾರತದ ಆರ್ಥಿಕ ಬೆಳವಣಿಗೆಗೆ ಪೂರಕವಾಗಿದೆ. ಸುಳ್ಯ ಮತ್ತು ಪುತ್ತೂರನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಮತ್ತು ಪುತ್ತೂರಿಗೆ ಬೋರ್‌ವೆಲ್ ಕೊರೆತ ನಿಷೇಧವಾಗಿರುವುದನ್ನು ತೆರವುಗೊಳಿಸುವಲ್ಲಿ ಪ್ರಯತ್ನಿಸುವುದಾಗಿ ಅವರು ತಿಳಿಸಿದರು.

ಅರಣ್ಯ ಸಚಿವ ಬಿ. ರಮಾನಾಥ ರೈ ಅವರು ಪೂಜಾ ಸಂದರ್ಭದಲ್ಲಿ ಭಾಗವಹಿಸಿದ್ದರು .ನೂತನ ಸಭಾಭವನ ರೈತ ಭವನವನ್ನು ಹಾಗೂ ನಾಮಫಲಕವನ್ನು ಕೆ.ಎಂ.ಎಫ್. ನಿರ್ದೇಶಕ ಸೀತಾರಾಮ ರೈ ಅನಾವರಣಗೊಳಿಸಿದರು. ಗೋದಾಮು ಹಾಗೂ ದಿನಬಳಕೆ ವಸ್ತುಗಳ ಮಾರಾಟ ಮಳಿಗೆಯನ್ನು ಕ್ಯಾಂಪ್ಕೋ ಅಧ್ಯಕ್ಷ ಸತೀಶ್ಚಂದ್ರ ಎಸ್.ಆರ್. ಉದ್ಘಾಟಿಸಿದರು.

ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹರೀಶ್ ಆಚಾರ್ ಪಾಲು ಪತ್ರ ವಿತರಿಸಿದರು. ಸ್ಥಳದಾನಿಗಳಿಗೆ, ಮಾಜಿ ಅಧ್ಯಕ್ಷರುಗಳಿಗೆ, ನಿವೃತ್ತ ಕಾರ್ಯದರ್ಶಿಗಳಿಗೆ ಸುಳ್ಯ ಎ.ಪಿ.ಎಂ.ಸಿ. ಅಧ್ಯಕ್ಷ ಜಾಕೆ ಮಾಧವ ಗೌಡ ಗೌರವಾರ್ಪಣೆ ಮಾಡಿದರು. ಮುಖ್ಯ ಅತಿಥಿಗಳಾಗಿ ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಜಿಲ್ಲಾ ಜೇನು ಸಹಕಾರಿ ಸಂಘದ ಅಧ್ಯಕ್ಷ ಚಂದ್ರಾ ಕೋಲ್ಚಾರು, ಬೆಂಗಳೂರು ನಬಾರ್ಡ್ ಸಹಾಯಕ ಮುಖ್ಯ ವ್ಯವಸ್ಥಾಪಕ ರಮೇಶ್ ಎಸ್, ಸುಳ್ಯ ಸಹಕಾರಿ ಯೂನಿಯನ್ ಅಧ್ಯಕ್ಷ ಹರೀಶ್ ರೈ ಉಬರಡ್ಕ, ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ, ಜಿ.ಪಂ. ಸದಸ್ಯೆ ಶ್ರೀಮತಿ ಪುಷ್ಪಾವತಿ ಬಾಳಿಲ, ತಾ.ಪಂ. ಸದಸ್ಯ ತೀರ್ಥರಾಮ ಜಾಲ್ಸೂರು, ಕನಕಮಜಲು ಗ್ರಾ.ಪಂ. ಉಪಾಧ್ಯಕ್ಷ ಶ್ರೀಧರ ಕುತ್ಯಾಳ, ಜಾಲ್ಸೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶಶಿಕಲಾ ನಾಯಕ್, ಎ.ಪಿ.ಎಂ.ಸಿ. ಸದಸ್ಯ ಶಂಕರ ಪೆರಾಜೆ, ಸ್ಥಳದಾನಿ ಮುತ್ತಣ್ಣ ಗೌಡ ಮೂರ್ಜೆ, ಇಂಜಿನಿಯರ್ ಶ್ಯಾಂಪ್ರಸಾದ್ ಎ.ಡಿ. ಉಪಸ್ಥಿತರಿದ್ದರು.

ಸಹಕಾರಿ ಸಂಘದ ಉಪಾಧ್ಯಕ್ಷೆ ಶ್ರೀಮತಿ ಗೀತಾ ಕೆ.ಜಿ ಬೊಳುಬೈಲು, ನಿರ್ದೇಶಕರುಗಳಾದ ದಿವಾಕರ ಕಾಳಪ್ಪಜ್ಜನಮನೆ, ವಸಂತ ಮಳಿ, ಈಶ್ವರ ಕೊಂರ್ಬಡ್ಕ, ಶ್ರೀಮತಿ ವಿಜಯಲಕ್ಷ್ಮೀ ಎ. ಅಕ್ಕಿಮಲೆ, ಸತೀಶ್ ಕೆಮನಬಳ್ಳಿ, ಜಯಪ್ರಕಾಶ ಬೈತ್ತಡ್ಕ, ರಾಮಣ್ಣ ನಾಯ್ಕ ಬೊಳುಬೈಲು, ಶ್ರೀಮತಿ ರವಿಕಲಾ ರೈ ಕುರಿಯ, ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಪಿ, ಕಾನೂನು ಸಲಹೆಗಾರ ದೇವಿಪ್ರಸಾದ್ ಆಳ್ವ ಉಪಸ್ಥಿತರಿದ್ದರು.

ಸಹಕಾರಿ ಸಂಘದ ಅಧ್ಯಕ್ಷ ಹರೀಶ ಕೆ.ಯಂ ಮೂರ್ಜೆ ಸ್ವಾಗತಿಸಿದರು.  ದ.ಕ. ಕೃಷಿ ಅಭಿವೃದ್ಧಿ ಸಹಕಾರಿ ಸಂಘ ನಿರ್ದೇಶಕ ಕೆ. ಜಯರಾಮ ರೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲೋಹಿತ್‌ಕುಮಾರ್ ಕುದ್ಕುಳಿ ವಂದಿಸಿದರು. ದಾಮೋದರ ಕಣಜಾಲು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X