Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ...

ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ: ಏ.3ಕ್ಕೆ ಕಾಯ್ದಿರಿಸಿದ ಆದೇಶ

ವಾರ್ತಾಭಾರತಿವಾರ್ತಾಭಾರತಿ7 March 2017 7:46 PM IST
share
ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ: ಏ.3ಕ್ಕೆ ಕಾಯ್ದಿರಿಸಿದ ಆದೇಶ

ಮಡಿಕೇರಿ ಮಾ.7 : ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ನಡೆದಿದ್ದ ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ತಂದೆ, ತಾಯಿ, ಸಹೋದರ ಮತ್ತು ಸಹೋದರಿಯನ್ನು ಪಿರ್ಯಾದಿದಾರರನ್ನಾಗಿ ಪರಿಗಣಿಸಬೇಕೆಂದು ನಗರದ ಪ್ರಿನ್ಸಿಪಲ್ ಸಿವಿಲ್ ಜಡ್ಜ್ (ಜೂನಿಯರ್ ಡಿವಿಷನ್) ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಾದ ಮಂಡನೆಯಾಗಿದೆ. ಈ ಸಂಬಂಧದ ಆದೇಶವನ್ನು ಏ.3ಕ್ಕೆ ಕಾಯ್ದಿರಿಸಲಾಗಿದೆ.

ಡಿವೈಎಸ್ಪಿ ಗಣಪತಿ ಅವರ ತಂದೆ ಕುಶಾಲಪ್ಪ, ತಾಯಿ ಪೊನ್ನಮ್ಮ, ಸಹೋದರ ಮಾಚಯ್ಯ ಮತ್ತು ಸಹೋದರಿ ಸಬಿತಾ ಅವರ ಪರವಾಗಿ ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯವಾದಿಗಳಾದ ಎಚ್. ಪವನ್ ಚಂದ್ರ ಶೆಟ್ಟಿ ಅವರು ಅಗತ್ಯ ದಾಖಲೆಗಳ ಸಹಿತ ತಮ್ಮ ವಾದವನ್ನು ಮಂಡಿಸಿದರು. ಇದನ್ನು ಆಲಿಸಿದ ನ್ಯಾಯಾಧೀಶರಾದ ಅನ್ನಪೂಣೇಶ್ವರಿ ಅವರು, ಈ ಸಂಬಂಧದ ತಮ್ಮ ಆದೇಶ ನೀಡಲು ಮುಂದಿನ ಏ.3 ನ್ನು ನಿಗದಿಪಡಿಸಿದರು.

ವಾದಮಂಡನೆಗೆ ಸಂಬಂಧಿಸಿದಂತೆ ವಕೀಲ ಪವನ್ ಚಂದ್ರ ಶೆಟ್ಟಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ ಸಾಲಿನ ಜು.7 ರಂದು ಡಿವೈಎಸ್ಪಿ ಗಣಪತಿ ಅವರು ಕೆಲವರ ವಿರುದ್ಧ ಆರೋಪಗಳನ್ನು ಮಾಡಿ ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ನ್ಯಾಯಾಲಯದ ಸೂಚನೆ ಮೇರೆ ಪ್ರಕರಣ ದಾಖಲಾಗುವುದರೊಂದಿಗೆ, ಸಿಐಡಿ ತನಿಖೆಯೂ ನಡೆದಿತ್ತು.

 ತನಿಖೆ ನಡೆಸಿದ ಸಿಐಡಿ ಬಿವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಈ ಸಂದರ್ಭ ಡಿವೈಎಸ್‌ಪಿ ಗಣಪತಿ ಅವರ ಪುತ್ರ ನೇಹಾಲ್ ಗಣಪತಿ ಅವರು, ತಮ್ಮ ಶಿಕ್ಷಣಕ್ಕೆ ತೊಂದರೆಯಾಗುವ ವಿಚಾರವನ್ನು ತಿಳಿಸಿ ಪ್ರಕರಣದಿಂದ ಹಿಂದಕ್ಕೆ ಸರಿದಿದ್ದರು. ಆದರೆ ಪ್ರಕರಣದಲ್ಲಿ ಮುಂದುವರಿಯಲು ಅವಕಾಶ ನೀಡುವಂತೆ ಡಿವೈಎಸ್‌ಪಿ ಗಣಪತಿ ಅವರ ತಂದೆ, ತಾಯಿ, ಸಹೋದರ ಮತ್ತು ಸಹೋದರಿ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದನ್ನು ಅವರು ಉಲ್ಲೇಖಿಸಿದರು.

ಸುಪ್ರಿಂ ಅಂಗಳದಲ್ಲಿದೆ ಪ್ರಕರಣ:

ಇದರೊಂದಿಗೆ ಡಿವೈಎಸ್ಪಿ ಗಣಪತಿ ಅವರ ತಂದೆ ಕುಶಾಲಪ್ಪ ಅವರು ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸರ್ವೋಚ್ಚ ನ್ಯಾಯಾಲಯವು, ಒಟ್ಟು ಪ್ರಕರಣವನ್ನು ಸಿಬಿಐಗೆ ವಹಿಸಿ ಕೊಡುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಡಿವೈಎಸ್ಪಿ ಗಣಪತಿ ಅವರ ತಂದೆ, ತಾಯಿ, ಸಹೋದರ ಸಹೋದರಿ ಅವರಿಗೆ ಪ್ರಕರಣವನ್ನು ಮುಂದುವರಿಸಲು ಅವಕಾಶ ನೀಡುವಂತೆ ಕೋರಿಕೊಳ್ಳುತ್ತಿರುವುದಾಗಿ ವಕೀಲ ಪವನ್ ಚಂದ್ರ ಶೆಟ್ಟಿ ತಿಳಿಸಿದರು.

ಸರ್ವೋಚ್ಚ ನ್ಯಾಯಾಲಯವು 2016 ರ ದಾರಿವಾಲ್ ಇಂಡಸ್ಟ್ರೀಸ್ ಮತ್ತು ಕಿಶೋರ್ ವಾದ್ ವಾಲ್ ಪ್ರಕರಣದ ತೀರ್ಪಿನಲ್ಲಿ, ನೊಂದ ಮಂದಿಗೆ ಪ್ರಕರಣವನ್ನು ನಡೆಸಲು ಅವಕಾಶ ನೀಡಬೇಕೆಂದು ಸ್ಪಷ್ಟವಾಗಿ ತಿಳಿಸಿದೆ. ಉಳ್ಳವರಿಂದ ಯಾವುದೇ ಕಾರಣಕ್ಕೂ ಸಾಮಾನ್ಯ ಜನರಿಗೆ ತೊಂದರೆ ಉಂಟಾಗದಂತೆ ಸಂವಿಧಾನದಲ್ಲಿ ಅವಕಾಶವನ್ನು ನೀಡಿದ್ದು, ಅದನ್ನು ನ್ಯಾಯಾಲಯ ಪರಿಗಣಿಸಿದೆ. ಇದೇ ಪ್ರಕಾರವಾಗಿ ಗಣಪತಿ ಅವರ ಪ್ರಕರಣವನ್ನು ಕೂಡ ಪರಿಗಣಿಸಬೇಕೆಂದು ನ್ಯಾಯಾಲಯದ ಮುಂದೆ ಮನವಿ ಮಾಡಿರುವುದಾಗಿ ವಕೀಲ ಪವನ್ ಚಂದ್ರ ಶೆಟ್ಟಿ ಹೇಳಿದರು.

 ಪ್ರಕರಣದ ವಾದಮಂಡನೆಯ ಸಂದರ್ಭ ಡಿವೈಎಸ್ಪಿ ಗಣಪತಿ ಅವರ ತಂದೆ ಕುಶಾಲಪ್ಪ, ಸಹೋದರ ಮಾಚಯ್ಯ ಅವರುಗಳಿದ್ದರು.
  ಮಾಚಯ್ಯ ಅವರು ಮಾತನಾಡಿ, ಪ್ರಕರಣದಲ್ಲಿ ತಮ್ಮನ್ನು ಅರ್ಜಿದಾರರನ್ನಾಗಿ ನ್ಯಾಯಾಲಯ ಪರಿಗಣಿಸುವ ವಿಶ್ವಾಸ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X