Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲಂಚಾವತಾರದಲ್ಲಿ ಭಾರತ ನಂ.1 : ಸಮೀಕ್ಷೆ...

ಲಂಚಾವತಾರದಲ್ಲಿ ಭಾರತ ನಂ.1 : ಸಮೀಕ್ಷೆ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ7 March 2017 8:40 PM IST
share
ಲಂಚಾವತಾರದಲ್ಲಿ  ಭಾರತ ನಂ.1 : ಸಮೀಕ್ಷೆ ಬಹಿರಂಗ

ಬರ್ಲಿನ್,ಮಾ.7: ಏಶ್ಯ ಪೆಸಿಫಿಕ್ ರಾಷ್ಟ್ರಗಳಲ್ಲೇ ಭಾರತದಲ್ಲಿ ಲಂಚಾವತಾರವು ಅತ್ಯಧಿಕವಾಗಿದೆಯೆಂಬ ಕಳವಳಕಾರಿ ವಿಷಯವನ್ನು ಅಂತಾರಾಷ್ಟ್ರೀಯ ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಸಾರ್ವಜನಿಕ ಸೇವೆಗಳನ್ನು ಪಡೆದುಕೊಳ್ಳುವುದಕ್ಕಾಗಿ ಮೂರನೆ ಎರಡರಷ್ಟು ಭಾರತೀಯರು ಸರಕಾರಿ ಉದ್ಯೋಗಿಗಳಿಗೆ ‘ಚಹಾ ಕುಡಿಯಲು ಹಣ’ ಮತ್ತಿತರ ರೂಪಗಳಲ್ಲಿ ಲಂಚವನ್ನು ನೀಡುತ್ತಿರುವ ಬಗ್ಗೆ ಅದು ಬೆಳಕು ಚೆಲ್ಲಿದೆ.

 ಅಂತಾರಾಷ್ಟ್ರೀಯ ಲಂಚ ವಿರೋಧಿ ಹಕ್ಕುಗಳ ಸಂಘಟನೆ ‘ಟ್ರಾನ್ಸ್‌ಪರೆನ್ಸಿ ಇಂಟರ್‌ನ್ಯಾಶನಲ್’ ಆಯೋಜಿಸಿದ್ದ ಈ ಸಮೀಕ್ಷೆಯಲ್ಲಿ ಪಾಲ್ಗೊಂಡ ಶೇ.69 ಮಂದಿ ಭಾರತೀಯರು ತಾವು ವಿವಿಧ ಕಾರಣಗಳಿಗಾಗಿ ಲಂಚವನ್ನು ನೀಡಿರುವುದಾಗಿ ಹೇಳಿದ್ದಾರೆ. ಲಂಚಗುಳಿತನದಲ್ಲಿ ವಿಯೆಟ್ನಾಂನಲ್ಲಿ ಎರಡನೆ ಸ್ಥಾನದಲ್ಲಿದ್ದು, ಅಲ್ಲಿ ಶೇ.65 ಮಂದಿಗೆ ಲಂಚ ನೀಡಿದ ಅನುಭವವಾಗಿದೆ. ಚೀನಾದಲ್ಲಿ ಅತ್ಯಂತ ಕಡಿಮೆ ಭ್ರಷ್ಟಾಚಾರವಿದ್ದು, ಶೇ.26 ಮಂದಿ ಮಾತ್ರವೇ ಲಂಚಾವತಾರದಿಂದ ಬಾಧಿತರಾಗಿದ್ದಾರೆ. ನೆರೆಯ ರಾಷ್ಟ್ರವಾದ ಪಾಕಿಸ್ತಾನದಲ್ಲಿ ಶೇ.40 ಮಂದಿ ಲಂಚವನ್ನು ನೀಡಿರುವುದಾಗಿ ಹೇಳಿದ್ದಾರೆಂದು ಸಮೀಕ್ಷೆ ಹೇಳಿದೆ.

ಜಪಾನ್‌ನಲ್ಲಿ ಅತ್ಯಂತ ಕನಿಷ್ಠ ಮಟ್ಟದ ಅಂದರೆ ಶೇ.0.2ರಷ್ಟು ಭ್ರಷ್ಟಾಚಾರವಿದೆ.ದ.ಕೊರಿಯದಲ್ಲಿಯೂ ಕೇವಲ ಶೇ.3ರಷ್ಟು ಮಂದಿಗೆ ಲಂಚ ನೀಡಿದ ಅನುಭವವಾಗಿದೆ.

 ಆದಾಗ್ಯೂ ಚೀನಾದಲ್ಲಿ ಲಂಚ ನೀಡಿಕೆಯ ಪ್ರಮಾಣದಲ್ಲಿ ಅತ್ಯಧಿಕ ಏರಿಕೆ ಕಂಡುಬಂದಿದೆ. ಸಮೀಕ್ಷೆಯಲ್ಲಿ ಪಾಲ್ಗೊಂಡ ಶೇ.73 ಮಂದಿ ಚೀನಿಯರು ಕಳೆದ ಒಂದು ವರ್ಷದಲ್ಲಿ ತಮ್ಮ ದೇಶದಲ್ಲಿ ಲಂಚದ ಹಾವಳಿಯಲ್ಲಿ ಏರಿಕೆಯಾಗಿದೆಯೆಂದು ತಿಳಿಸಿದ್ದಾರೆ.

ಭ್ರಷ್ಟಾಚಾರದಿಂದ ಬಾಧಿತವಾದ ರಾಷ್ಟ್ರಗಳ ಪೈಕಿ ಭಾರತವು ಏಳನೇ ಸ್ಥಾನದಲ್ಲಿದ್ದು, ಇದು ಪಾಕಿಸ್ತಾನ, ಆಸ್ಟ್ರೇಲಿಯ, ಜಪಾನ್, ಮ್ಯಾನ್ಮಾರ್, ಶ್ರೀಲಂಕಾ ಹಾಗೂ ಥೈಲ್ಯಾಂಡ್‌ಗಿಂತ ಅಧಿಕವಾಗಿದೆ.

ಏಶ್ಯ-ಪೆಸಿಫಿಕ್ ಪ್ರದೇಶದ 16 ರಾಷ್ಟ್ರಗಳ 20 ಸಾವಿರ ಮಂದಿ ಈ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು.

    ಭ್ರಷ್ಟಾಚಾರದ ಪಿಡುಗು ವ್ಯಾಪಕವಾಗಿರುವ ಸಾರ್ವಜನಿಕ ಸೇವೆಗಳ ಪಟ್ಟಿಯಲ್ಲಿ ಪೊಲೀಸ್ ಇಲಾಖೆಯು ಮೊದಲ ಸ್ಥಾನದಲ್ಲಿದ್ದು, ಸಮೀಕ್ಷೆಯಲ್ಲಿ ಪಾಲ್ಗೊಂಡ ಶೇ.38ರಷ್ಟು ಮಂದಿ ತಾವು ಪೊಲೀಸರಿಗೆ ಲಂಚ ಪಾವತಿಸಿರುವುದಾಗಿ ತಿಳಿಸಿದ್ದಾರೆ.

    ದಾಖಲೆಗಳನ್ನು ಅಥವಾ ಸೇವೆಗನ್ನು ಪಡೆಯುವುದಕ್ಕಾಗಿ ಪೊಲೀಸರು, ನ್ಯಾಯಾಧೀಶರು, ಕೋರ್ಟ್ ಅಧಿಕಾರಿಗಳು, ಅಧ್ಯಾಪಕರು, ಆಸ್ಪತ್ರೆ ಸಿಬ್ಬಂದಿ ಅಥವಾ ಸರಕಾರಿ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕ ಸೇವೆಗಳ ಅಧಿಕಾರಿಗಳಿಗೆ ತಾವು ಎಷ್ಟು ಬಾರಿ ಲಂಚ ನೀಡಬೇಕಾಗಿ ಬಂತು, ಅವರಿಗೆ ನಗದು ಅಥವಾ ಉಡುಗೊರೆ ರೂಪದಲ್ಲಿ ಲಂಚ ನೀಡಿದ್ದೀರಾ ಎಂಬಿತ್ಯಾದಿ ಪ್ರಶ್ನೆಗಳನ್ನು ಸಮೀಕ್ಷೆಯಲ್ಲಿ ಪಾಲ್ಗೊಂಡವರಿಗೆ ಕೇಳಲಾಗಿತ್ತು.

ಏಶ್ಯಪೆಸಿಫಿಕ್ ಪ್ರದೇಶಾದ್ಯಂತ ರಾಷ್ಟ್ರಗಳಲ್ಲಿ ಭ್ರಷ್ಟಾಚಾರವನ್ನು ಬಯಲಿಗೆಳೆಯುವವರಿಗೆ ಕಾನೂನು ನಿರ್ಮಾತೃಗಳಿಂದ ಇನ್ನೂ ಹೆಚ್ಚಿನ ಬೆಂಬಲದ ಅವಶ್ಯಕತೆಯಿದೆ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಆಶ್ವಾಸನೆಗಳನ್ನು ಸರಕಾರವು ಉಳಿಸಿಕೊಳ್ಳಬೇಕಾಗಿದೆ ಎಂದು ಟ್ರಾನ್ಸ್‌ಪರೆನ್ಸಿ ಇಂಟರ್‌ನ್ಯಾಶನಲ್ ತಿಳಿಸಿದೆ.

ಇಂದು ಸಾರ್ವಜನಿಕ ಸೇವೆಗಳನ್ನು ಪಡೆಯಲು ಕೋಟ್ಯಂತರ ಮಂದಿ ಲಂಚ ನೀಡಬೇಕಾದ ಪರಿಸ್ಥಿತಿಯಿದೆ. ಇದರಿಂದಾಗಿ ಬಡವರು ತೀವ್ರವಾದ ಬಾಧೆಗೊಳಗಾಗಿದ್ದಾರೆಎಂದು ಟ್ರ್ಖಾನ್ಸ್‌ಪರೆನ್ಸಿ ಇಂಟರ್‌ನ್ಯಾಶನಲ್‌ನ ಅಧ್ಯಕ್ಷ ಜೋಸ್ ಉಗಾಝ್ ತಿಳಿಸಿದ್ದಾರೆ.

   ‘‘ಸಮರ್ಪಕವಾದ ಕಾನೂನು ಜಾರಿಯಾಗದೆ ಇದ್ದಲ್ಲಿ ಭ್ರಷ್ಟಾಚಾರವು ಉಲ್ಬಣಿಸುತ್ತಲೇ ಹೋಗುವುದು. ಲಂಚಗುಳಿತನವು ಸಣ್ಣ ಅಪಾರಾಧವೇನೂ ಅಲ್ಲ. ಆದು ಊಟದ ತಟ್ಟೆಯಲ್ಲಿರುವ ಆಹಾರವನ್ನು ಕಸಿಯುತ್ತದೆ, ಶಿಕ್ಷಣ ಪಡೆಯುವುದಕ್ಕೆ ತಡೆಯೊಡ್ಡುತ್ತದೆ. ಸಮರ್ಪಕ ಆರೋಗ್ಯಪಾಲನಾ ಸೌಲಭ್ಯಗಳನ್ನು ಪಡೆಯುವುದಕ್ಕೂ ಅಡ್ಡಿಯುಂಟು ಮಾಡುತ್ತದೆ. ಅಂತಿಮವಾಗಿ ಈ ಪಿಡುಗು ಮಾನವನನ್ನು ಕೊಲ್ಲಲೂಬಹುದು’’

 ಜೋಸ್ ಉಗಾಝ್, ಟ್ರಾನ್ಸ್‌ಪರೆನ್ಸಿ ಇಂಟರ್‌ನ್ಯಾಶನಲ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X