Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮಾನತೆಯ ಸಮಾಜಕ್ಕಾಗಿ ಮುನ್ನಡೆಯುವುದೇ...

ಸಮಾನತೆಯ ಸಮಾಜಕ್ಕಾಗಿ ಮುನ್ನಡೆಯುವುದೇ ಸ್ತ್ರೀವಾದ: ರಂಜನಾ ಪಾಡಿ

ಕೊಪ್ಪಳದಲ್ಲಿ ಮಹಿಳಾ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ8 March 2017 1:28 PM IST
share
ಸಮಾನತೆಯ ಸಮಾಜಕ್ಕಾಗಿ ಮುನ್ನಡೆಯುವುದೇ ಸ್ತ್ರೀವಾದ: ರಂಜನಾ ಪಾಡಿ

ಕೊಪ್ಪಳ, ಮಾ.8: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದಿಂದ ಕೊಪ್ಪಳದಲ್ಲಿ ಬುಧವಾರ ಮಹಿಳಾ ಸಮಾವೇಶ ನಡೆಯಿತು.

ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ದಿಲ್ಲಿಯ ಮಹಿಳಾಪರ ಹೋರಾಟಗಾರ್ತಿ ರಂಜನಾ ಪಾಡಿ, ಸ್ತ್ರೀವಾದ ಎಂದರೆ ಕೇವಲ ಮಹಿಳೆಯರಿಗೆ ಸಂಬಂಧಿಸಿದ್ದು ಎಂದು ಹಲವರು ಭಾವಿಸಿದ್ದಾರೆ. ವಾಸ್ತವವಾಗಿ ಸ್ತ್ರೀವಾದ ಎಂಬುವುದು ಹಸಿವಿನ ವಿರುದ್ಧ, ಯುದ್ಧದ ವಿರುದ್ಧ, ಅಸಮಾನತೆಯ ವಿರುದ್ಧ, ಎಲ್ಲಾ ರೀತಿಯ ಶೋಷಣೆಯ ವಿರುದ್ಧ ದನಿಯೆತ್ತುವುದು: ಸಮಾನತೆಯ ಸಮಾಜಕ್ಕಾಗಿ ಮುನ್ನಡೆಯುವುದೇ ಸ್ತ್ರೀವಾದ ಎಂದರು.

 ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘಟಕಿ ವಾಣಿ ಪೆರಿಯೋಡಿ, ನಮ್ಮ ಒಕ್ಕೂಟ ಒಂದು ದಾರ ಇದ್ದ ಹಾಗೆ. ನೂರಾರು ಸಂಘಟನೆ ಮತ್ತು ವ್ಯಕ್ತಿಗಳನ್ನು ಪೋಣಿಸುತ್ತಾ ಬರುತ್ತಿದ್ದೇವೆ. ಕೊನೆಗೆ ಇದೊಂದು ಒಂದು ವಿನ್ಯಾಸವಾಗುತ್ತದೆ. ಈ ಕೆಲಸ ಸುಲಭವಲ್ಲ.ಇದಕ್ಕೆ ಗಟ್ಟಿತನ, ನವಿರುತನ, ಮೃದುತನ ಎಲ್ಲವೂ ಬೇಕು. ಒಂದು ಹೆಚ್ಚು ಕಮ್ಮಿಯಾದರೂ ದಾರ ಕಿತ್ತುಹೋಗುತ್ತದೆ. ನಾವು ಎಲ್ಲವನ್ನು ಮೀರಿ ಒಂದು ಆಶಯದ ಸುತ್ತ ಇರುವ ಸಂಬಂಧ ವನ್ನು ಆಚರಿಸುತ್ತಿದ್ದೇವೆ ಎಂದರು.

ನಾವು ಪ್ರೀತಿ ರಾಜಕಾರಣ ಮಾಡುತ್ತೇವೆ. ನಮಗೆ ಯುದ್ಧ ದ್ವೇಷ ಮತ್ತು ಮನಸ್ತಾಪ ಏನೂ ಬೇಡ. ಜೊತೆಗೆ ನಾವು ಸಂಘರ್ಷ ಸಹ ಮಾಡುತ್ತೇವೆ. ಅದು ಪ್ರೀತಿಯ ಮೂಲಕ ಗೆಲ್ಲವು ಸಂಘರ್ಷದ ಪ್ರಕ್ರಿಯೆ ನಮ್ಮದು. ಇದು ಯಾರಿಗೂ ಕೆಡುಕು ಉಂಟು ಮಾಡಿವುದಿಲ್ಲ.

ಕೊಪ್ಪಳದಲ್ಲಿ ಈ ಸಮಾವೇಶ ಏರ್ಪಡಿಸುವಾಗಿನ ಪ್ರಕ್ರಿಯೆಯಲ್ಲಿ ಇಲ್ಲಿನ ಹೋರಾಟಗಳು, ಸಾಂಸ್ಕೃತಿಕ ಕ್ರಿಯೆ ಮುಂತಾದವುಗಳನ್ನು ಅರ್ಥ ಮಾಡಿಕೊಳ್ಳಲು ಅವಕಾಶವಾಯಿತು ಎಂದರು. ಬಹಳ ಜನ ಈ ಸಮಾವೇಶದಿಂದ ಪ್ರಯೋಜನವೇನು, ಯಾಕೆ ಈ ಸಮಾವೇಶ ಮಾಡುತ್ತೀರಿ ಎಂದು ಪದೇ ಪದೇ ಕೇಳುತ್ತಿದ್ದಾರೆ. ಇದಕ್ಕೆ ಸರಳವಾದ ಉತ್ತರ ‘‘ಈ ಸಮಾವೇಶ ಮಾಡೋದು ಯಾಕೆ’’ ಎಂದು ಕೇಳೋಕೆ ಮಾಡುತ್ತಿದ್ದೇವೆ.

ನಮ್ಮ ದನಿಯನ್ನು ಗಟ್ಟಿ ಮಾಡಿಕೊಳ್ಳಲು, ಅಸಮಾನತೆಯನ್ನು ಪ್ರಶ್ನೆ ಮಾಡಲಿಕ್ಕೆ. ದೌರ್ಜನ್ಯಗಳ ವಿರುದ್ಧ ಹೋರಾಡಲಿಕ್ಕೆ ಈ ಸಮಾವೇಶ ಬೇಕಾಗಿದೆ. ಈ ಸಮಾವೇಶ ಎರಡು ದಿನದ್ದು ಮಾತ್ರವಲ್ಲ. ಇದೊಂದು ಪ್ರಕ್ರಿಯೆ. ಇದೊಂದು ಜೀವಂತ ಅನುಭವಗಳಾಗಿವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X