Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಡರೆನ್ ಸಮ್ಮಿ ‘ಥರ್ಡ್ ಕ್ಲಾಸ್’ ಆಟಗಾರ:...

ಡರೆನ್ ಸಮ್ಮಿ ‘ಥರ್ಡ್ ಕ್ಲಾಸ್’ ಆಟಗಾರ: ಇಮ್ರಾನ್ ಖಾನ್

ಪಾಕ್ ಕ್ರಿಕೆಟ್ ದಂತಕತೆ ವಿರುದ್ಧ ಅಭಿಮಾನಿಗಳ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ8 March 2017 3:04 PM IST
share
ಡರೆನ್ ಸಮ್ಮಿ ‘ಥರ್ಡ್ ಕ್ಲಾಸ್’ ಆಟಗಾರ: ಇಮ್ರಾನ್ ಖಾನ್

 ಕರಾಚಿ, ಮಾ.8: ದೇಶದಲ್ಲಿ ಭದ್ರತೆಯ ಭೀತಿಯಿರುವ ಹೊರತಾಗಿಯೂ ಪಿಸಿಬಿ ಆಯೋಜಿಸಿದ್ದ ಪಾಕಿಸ್ತಾನ ಸೂಪರ್ ಲೀಗ್(ಪಿಎಸ್‌ಎಲ್) ಫೈನಲ್ ಪಂದ್ಯವನ್ನು ಲಾಹೋರ್‌ನ ಗಡ್ಡಾಫಿ ಸ್ಟೇಡಿಯಂನಲ್ಲಿ ಆಡಿದ್ದ ಅಂತಾರಾಷ್ಟ್ರೀಯ ಆಟಗಾರರು ‘ಥರ್ಡ್‌ಕ್ಲಾಸ್’ ಹಾಗೂ ಅಷ್ಟೇನೂ ಪ್ರಸಿದ್ಧಿಯಲ್ಲಿಲ್ಲದವರು ಎಂದು ಪಾಕಿಸ್ತಾನ ಕ್ರಿಕೆಟ್ ದಂತಕತೆ ಇಮ್ರಾನ್ ಖಾನ್ ಹೇಳಿರುವ ವೀಡಿಯೊವೊಂದು ಸೋರಿಕೆಯಾಗಿದೆ.

ಇಮ್ರಾನ್ ಖಾನ್ ಹೇಳಿಕೆಯನ್ನು ಮೊಬೈಲ್ ಫೋನ್‌ನಲ್ಲಿ ಸೆರೆ ಹಿಡಿದಿದ್ದ ಸ್ಥಳೀಯ ಪತ್ರಕರ್ತರೊಬ್ಬರು ವೀಡಿಯೊವನ್ನು ಆನ್‌ಲೈನ್‌ನಲ್ಲಿ ಹಾಕಿದ್ದರು. ಆ ವಿಡಿಯೋ ವೈರಲ್ ಆಗಿದ್ದು, ಇಮ್ರಾನ್ ಖಾನ್ ಬೆಂಬಲಿಗರು ಸೇರಿದಂತೆ ಎಲ್ಲ ಕ್ರಿಕೆಟ್ ಪ್ರೇಮಿಗಳಿಂದ ತೀವ್ರ ಆಕ್ರೋಶವ್ಯಕ್ತವಾಗಿದೆ.

 ಪ್ರಧಾನಮಂತ್ರಿ ನವಾಝ್ ಶರೀಫ್‌ರನ್ನು ಕಟುವಾಗಿ ಟೀಕಿಸುತ್ತಿರುವ ಪ್ರಮುಖ ರಾಜಕೀಯ ಪಕ್ಷವನ್ನು ಮುನ್ನಡೆಸುತ್ತಿರುವ 64ರ ಹರೆಯದ ಖಾನ್ ಪಿಎಸ್‌ಎಲ್ ಟ್ವೆಂಟಿ-20 ಟೂರ್ನಿಯ ಫೈನಲ್‌ನ್ನು ಭದ್ರತೆ ಭೀತಿಯಿರುವ ಲಾಹೋರ್‌ನ ಬದಲಿಗೆ ಲೀಗ್, ಸೆಮಿಫೈನಲ್‌ ಆಯೋಜಿಸಿದ್ದ ಯುಎಇನಲ್ಲಿ ಆಯೋಜಿಸಬೇಕೆಂದು ಒತ್ತಾಯಿಸಿದ್ದರು.

 ಟ್ವಿಟರ್‌ನಲ್ಲಿ ತನ್ನ ನಿಲುವನ್ನು ಬದಲಿಸಿದ್ದ ಖಾನ್ ಲಾಹೋರ್‌ನಲ್ಲಿ ನಡೆದಿದ್ದ ಟೂರ್ನಿಯಲ್ಲಿ ಭಾಗವಹಿಸಿದ್ದವರಿಗೆ ಅಭಿನಂದನೆ ಸಲ್ಲಿಸಿದ್ದರು. ಪಾಕ್ 2009ರಲ್ಲಿ ಶ್ರೀಲಂಕಾ ತಂಡದ ಮೇಲೆ ಉಗ್ರಗಾಮಿಗಳು ದಾಳಿ ನಡೆಸಿದ ಬಳಿಕ ಲಾಹೋರ್‌ನಲ್ಲಿ ಯಾವುದೇ ಮುಖ್ಯ ಟೂರ್ನಿಯನ್ನು ಆಯೋಜಿಸಿರಲಿಲ್ಲ.

‘‘ಟೂರ್ನಿಯಲ್ಲಿ ಆಡಲು ಒಪ್ಪಿಕೊಂಡು ಪಾಕ್‌ಗೆ ಆಗಮಿಸಿದ್ದ 9 ವಿದೇಶಿ ಆಟಗಾರರ ಹೆಸರು ನನಗೆ ಗೊತ್ತಿಲ್ಲ. ನನ್ನ ಪ್ರಕಾರ ಅವರೆಲ್ಲರೂ ಥರ್ಡ್‌ಕ್ಲಾಸ್ ಆಟಗಾರರು. ಆಫ್ರಿಕ ಸಹಿತ ಇತರ ದೇಶಗಳಿಂದ ಕೆಲವು ಆಟಗಾರರನ್ನು ಕರೆದುಕೊಂಡು ಬಂದು ಅವರನ್ನು ವಿದೇಶಿ ಆಟಗಾರರೆಂದು ಬಿಂಬಿಸಲಾಗಿದೆ. ಕ್ರಿಸ್ ಗೇಲ್ ಹಾಗೂ ಕೆವಿನ್ ಪೀಟರ್ಸನ್ ಟೂರ್ನಿಯಲ್ಲಿ ಆಡಿದ್ದರೆ, ಅವರನ್ನು ಅಂತಾರಾಷ್ಟ್ರೀಯ ಆಟಗಾರರೆಂದು ನಾನು ಒಪ್ಪಿಕೊಳ್ಳುವೆ’’ ಎಂದು ಖಾನ್ ಹೇಳಿದ್ದಾರೆ.

ಖಾನ್ ಹೇಳಿಕೆಗೆ ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಪಾಕ್ ಅಭಿಮಾನಿಗಳು ಸ್ವಾರ್ಥಭರಿತ ನಾಯಕರಿಗಿಂತ ದೇಶದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮರಳಲು ಪ್ರಯತ್ನಪಟ್ಟಿರುವ ಆಟಗಾರರೇ ಎಷ್ಟೊ ವಾಸಿ ಎಂದು ರಬಿಯಾ ನವೀದ್ ಎಂಬಾ ಟ್ವೀಟ್ ಮಾಡಿದ್ದಾನೆ.

ನಾನು ನಿಮ್ಮ ಕಟ್ಟಾ ಅಭಿಮಾನಿ. ಆದರೆ, ನೀವು ಮಿಲಿಯನ್ ಜನರಿಗೆ ಮಾಡಿದಷ್ಟು ನೋವನ್ನು ನನಗೂ ಮಾಡಿದ್ದೀರಿ. ನಿಮ್ಮ ಬುದ್ದಿ ಎಲ್ಲಿದೆ ಎಂದು ಇನ್ನೋರ್ವ ಅಭಿಮಾನಿ ಟ್ವಿಟ್ ಮಾಡಿದ್ದಾನೆ.

 ವಿಂಡೀಸ್‌ಗೆ 2 ಬಾರಿ ಟ್ವೆಂಟಿ-20 ಚಾಂಪಿಯನ್‌ಶಿಪ್‌ನ್ನು ಗೆದ್ದುಕೊಟ್ಟಿರುವ ಡರೆನ್ ಸಮ್ಮಿ ಪೇಶಾವರ ಝೂಲ್ಮಿ ತಂಡ ಚಾಂಪಿಯನ್ ಆಗಲು ತಂಡಕ್ಕೆ ಮಾರ್ಗದರ್ಶನ ನೀಡಿದ್ದು, ಸಮ್ಮಿ ಉತ್ತಮ ಇಂಟರ್‌ನ್ಯಾಶನಲ್ ಆಟಗಾರರು ಎಂದು ಇಮ್ರಾನ್ ಹೇಳಿಕೆಗೆ ಕೆಲವು ಅಭಿಮಾನಿಗಳು ಆಕ್ಷೇಪಿಸಿದರು.

These #Phateechar players have put in more effort in restoring the international cricket than the so called selfless leader

— Rabiya Naveed (@Rabiyazhar) March 7, 2017

#Phateechar IK I am ur diehard fan but u made me upset like millions & am thinking whthr u r in ur senses or have lost ur mind? pic.twitter.com/xAF6JRXDe1

— Dr HK یوسف زیء (@Dr_sheffield123) March 7, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X