Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಕ್ಫ್ ಭೂ ಹಗರಣದ ತನಿಖೆಗೆ ಮಹಾರಾಷ್ಟ್ರ...

ವಕ್ಫ್ ಭೂ ಹಗರಣದ ತನಿಖೆಗೆ ಮಹಾರಾಷ್ಟ್ರ ಶಾಸಕರಿಬ್ಬರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ8 March 2017 11:04 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ವಕ್ಫ್ ಭೂ ಹಗರಣದ ತನಿಖೆಗೆ ಮಹಾರಾಷ್ಟ್ರ ಶಾಸಕರಿಬ್ಬರ ಆಗ್ರಹ

ಮುಂಬೈ,ಮಾ.8: ಮುಘಲ್ ಚಕ್ರವರ್ತಿ ಶಹಾಜಹಾನ್ ನಾಸಿಕ ಜಿಲ್ಲೆಯ ಮಸೀದಿಯೊಂದಕ್ಕೆ ಉಂಬಳಿಯಾಗಿ ನೀಡಿದ್ದ ಭೂಮಿಯ ಒಂದು ಭಾಗವನ್ನು ಪುಣೆಯ ರಿಯಲ್ ಎಸ್ಟೇಟ್ ಉದ್ಯಮಿಯೋರ್ವನ ಲಾಭಕ್ಕಾಗಿ ‘ವಕ್ಫೇತರ’ ಎಂದು ಘೋಷಿಸಲಾಗಿದೆ ಎಂದು ಶಾಸಕರಾದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ನಸೀಮ್ ಖಾನ್ ಮತ್ತು ಸಮಾಜವಾದಿ ಪಕ್ಷದ ನಾಯಕ ಅಬು ಅಸೀಮ್ ಆಜ್ಮಿ ಅವರು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಆಪಾದಿಸಿದ್ದಾರೆ. ಇದೊಂದು 2,500 ಕೋ.ರೂ.ಗಳ ಹಗರಣವೆಂದು ಬಣ್ಣಿಸಿರುವ ಅವರು ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದಾರೆ.

ಕಳೆದ ತಿಂಗಳು ಔರಂಗಾಬಾದ್‌ನಲ್ಲಿರುವ ಮಹಾರಾಷ್ಟ್ರ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷೆ ನಸೀಮಾ ಬಾನೊ ಪಟೇಲ್ ಅವರನ್ನು 2015ರಲ್ಲಿ ವಕ್ಫ್ ಮಂಡಳಿಯ ಸಿಇಒ ಆಗಿ ಹೆಚ್ಚುವರಿ ಅಧಿಕಾರ ವಹಿಸಿಕೊಂಡಾಗಿನಿಂದ ಅಧಿಕಾರ ದುರುಪಯೋಗದ ಆರೋಪದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಅಮಾನತುಗೊಳಿಸಿದ್ದರು. ಈ ಬಗ್ಗೆ ತನಿಖೆಗೂ ಸರಕಾರವು ಆದೇಶಿಸಿತ್ತು.

ರಾಜ್ಯ ಸರಕಾರವು ಪಾರದರ್ಶಕತೆಯ ಮಾತನ್ನಾಡುತ್ತಿದೆ. ಆದರೆ ಅದರ ಮೂಗಿನ ಕೆಳಗೇ ಹಗರಣ ನಡೆದರೂ ಅದಕ್ಕೆ ಗೊತ್ತಾಗುತ್ತಿಲ್ಲ ಎಂದು ಹೇಳಿದ ಖಾನ್, ಈ ಬಗ್ಗೆ ಬಾಂಬೆ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ನಾಸಿಕ್ ಜಿಲ್ಲೆಯ ಬೋರವಾಡಿಯ ಮಸ್ಜಿದ್ ದೂಧದರಿ ಕಟ್ರಾಕ್ಕೆ ಶಹಾಜಹಾನ್ 85 ಎಕರೆ ಭೂಮಿಯನ್ನು ದಾನವಾಗಿ ನೀಡಿದ್ದು, ಈ ಪೈಕಿ 55 ಎಕರೆಯನ್ನು ಈಗ ವಕ್ಫ್‌ಗೆ ಸೇರಿರದ ಭೂಮಿಯೆಂದು ಘೋಷಿಸಲಾಗಿದೆ ಎಂದ ಖಾನ್, ಪುಣೆಯ ರಿಯಲ್ ಎಸ್ಟೇಟ್ ಉದ್ಯಮಿ ಕಳೆದ ವರ್ಷ ಈ ವಕ್ಫ್ ಆಸ್ತಿಯ ಮೇಲೆ ಹಕ್ಕು ಮಂಡಿಸಿದ್ದ ಎಂದು ತಿಳಿಸಿದರು.

ಈ ಬಗ್ಗೆ ವಿಚಾರಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯವು ಆಗ ವಕ್ಫ್ ಸಿಇಒ ಆಗಿದ್ದ ನಸೀಮಾ ಬಾನೊ ಪಟೇಲ್‌ಗೆ ಸೂಚಿಸಿತ್ತಾದರೂ, ಹಾಗೆ ಮಾಡಲು ತನಗೆ ಅಧಿಕಾರವಿಲ್ಲ ಎಂದು ಆಕೆ ಪ್ರಮಾಣಪತ್ರ ಸಲ್ಲಿಸಿದ್ದರು.

 ವಕ್ಫ್ ಪರ ವಕೀಲರು ಹೆಚ್ಚಿನ ಸಮಯಾವಕಾಶವನ್ನು ಕೋರಿದ್ದರು ಮತ್ತು ಬಳಿಕ ಆಸ್ತಿಯನ್ನು ‘ವಕ್ಫೇತರ ’ಎಂದು ವರ್ಗೀಕರಿಸಲಾಗಿತ್ತು. ಮಸೀದಿಗೆ ಹೊಂದಿಕೊಂಡಿರುವ 700 ಎಕರೆ ಜಾಗದಲ್ಲಿ ಬೃಹತ್ ಟೌನ್‌ಷಿಪ್ ಯೋಜನೆಯೊಂದು ತಲೆಯೆತ್ತುತ್ತಿದೆ ಮತ್ತು ಬಿಲ್ಡರ್‌ನ ಲಾಭಕ್ಕಾಗಿ 55 ಎಕರೆ ವಕ್ಫ್ ಭೂಮಿಯನ್ನು ‘ವಕ್ಫೇತರ ಭೂಮಿ’ ಎಂದು ಪರಿವರ್ತಿಸಲಾಗಿದೆ ಎಂದು ಖಾನ್ ಆರೋಪಿಸಿದರು.

 ಶಜಾಜಹಾನ್ ಕಾಲದಿಂದಲೂ ಇರುವ ರಾಜಮುದ್ರೆಯಿರುವ ಆಸ್ತಿ ದಾಖಲೆಗಳು, ಮರಾಠರ ಆಡಳಿತದಲ್ಲಿ ಲೀಸ್‌ನ್ನು ನವೀಕರಿಸಿದ ದಾಖಲೆ ಮತ್ತು ಆಸ್ತಿಯ ಪೂರ್ವಚರಿತ್ರೆಯನ್ನು ಪ್ರಮಾಣೀಕರಿಸಿರುವ 1927ರ ಬ್ರಿಟಿಷ್ ಸರಕಾರಿ ಗೆಝೆಟ್‌ಗಳು ಸರಕಾರದ ಬಳಿಯಲ್ಲಿವೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X