Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ: ಬೈಕ್‌ನಲ್ಲಿ ಬಂದ ತಂಡದಿಂದ...

ಉಳ್ಳಾಲ: ಬೈಕ್‌ನಲ್ಲಿ ಬಂದ ತಂಡದಿಂದ ಯುವಕನಿಗೆ ಚೂರಿ ಇರಿತ; ತಡೆಯಲು ಯತ್ನಿಸಿದ ಸಹೋದರನಿಗೂ ಕೈಗೆ ಇರಿತ

ವಾರ್ತಾಭಾರತಿವಾರ್ತಾಭಾರತಿ9 March 2017 6:50 PM IST
share
ಉಳ್ಳಾಲ: ಬೈಕ್‌ನಲ್ಲಿ ಬಂದ ತಂಡದಿಂದ ಯುವಕನಿಗೆ ಚೂರಿ ಇರಿತ; ತಡೆಯಲು ಯತ್ನಿಸಿದ ಸಹೋದರನಿಗೂ ಕೈಗೆ ಇರಿತ

ಉಳ್ಳಾಲ, ಮಾ.9: ಉಳ್ಳಾಲ ಠಾಣಾ ವ್ಯಾಪ್ತಿಯ ಮಾಸ್ತಿಕಟ್ಟೆಯಲ್ಲಿ ಸಹೋದರನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಶಮೀರ್(26)ಎಂಬವರಿಗೆ ಎರಡು ಬೈಕ್‌ಗಳಲ್ಲಿ ಬಂದ ಐದು ಜನರ ತಂಡವು ಚೂರಿಯಿಂದ ಇರಿದು ಪರಾರಿಯಾದ ಘಟನೆ ಗುರುವಾರ ಸಂಜೆ ನಡೆದಿದ್ದು, ಘಟನೆಯಲ್ಲಿ ಚೂರಿ ಇರಿತವನ್ನು ತಡೆಯಲು ಯತ್ನಿಸಿದ ಸಹೋದರ ಸಿರಾಜ್ ಎಂಬವರಿಗೂ ದುಷ್ಕರ್ಮಿಗಳು ಚೂರಿಯಿಂದ ಇರಿದಿದ್ದಾರೆ.

ಉಳ್ಳಾಲ ಹಿಲೇರಿಯಾನಗರ ಶಮೀರ್ ಕಲ್ಲಾಪಿನಿಂದ ಉಳ್ಳಾಲಕ್ಕೆ ಬೈಕ್‌ನಲ್ಲಿ ಸಹೋದರ ಸಿರಾಜ್‌ನನ್ನು ಕುಳ್ಳಿರಿಸಿ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

 ಉಳ್ಳಾಲದ ಟಾರ್ಗೆಟ್ ತಂಡದ ಇಲ್ಯಾಸ್ ಮತ್ತು ಆತನ ಸಹಚರರಾದ ಸುರ್ಮ ಇಮ್ರಾನ್, ಅಲ್ತಾಫ್ ಕಾಟಿಪಳ್ಳ, ಹಂಝ ಹಾಗೂ ಇನ್ನೊರ್ವ ಸೇರಿ ಇರಿದಿದ್ದಾರೆಂದು ಎಂದು ಆರೋಪಿಸಲಾಗಿದೆ. ಶಮೀರ್ ಸೌದಿ ಅರೇಬಿಯಾದಲ್ಲಿ ನೆಲೆಸಿದ್ದು ಹದಿನೈದು ದಿನಗಳ ಹಿಂದೆಯಷ್ಟೇ ಊರಿಗೆ ಹಿಂದಿರುಗಿದ್ದರು. ಶಮೀರ್ ಕುಟುಂಬವು ಇತ್ತೀಚೆಗೆ ಹಿಲೇರಿಯಾ ನಗರದಿಂದ ಸ್ಥಳಾಂತರಗೊಂಡು ಕಲ್ಲಾಪಿನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.

ಗುರುವಾರ ಸಂಜೆ ಶಮೀರ್ ಕಲ್ಲಾಪುವಿನಿಂದ ಉಳ್ಳಾಲಕ್ಕೆ ತನ್ನ ಸಹೋದರ ಸಿರಾಜ್‌ನನ್ನು ಬೈಕ್‌ನಲ್ಲಿ ಕುಳ್ಳಿರಿಸಿ ತೆರಳುತ್ತಿದ್ದ ವೇಳೆ ಬೈಕ್‌ನಲ್ಲಿ ಹಿಂಬಾಳಿಸಿದ ಮೂವರ ತಂಡವು ಮಾಸ್ತಿಕಟ್ಟೆಯಲ್ಲಿ ಕಾಯುತ್ತಿದ್ದ ಇಬ್ಬರ ಜೊತೆ ಸೇರಿ ಶಮೀರ್ ಮೇಲೆ ಎರಗಿದ್ದಾರೆ. ಈ ಸಂದರ್ಭದಲ್ಲಿ ತಡೆಯಲು ಹೋದ ಶಮೀರ್ ಸಹೋದರ ಸಿರಾಜ್‌ಗೂ ದುಷ್ಕರ್ಮಿಗಳು ಕೈಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ.

ಹಳೆ ದ್ವೇಷವೇ ಕಾರಣ:

ವಿದೇಶಕ್ಕೆ ತೆರಳುವ ಮುನ್ನ ಶಮೀರ್ ಉಳ್ಳಾಲದಲ್ಲಿ ತಂಡವೊಂದು ನಡೆಸುತ್ತಿದ್ದ ಹಫ್ತಾ ವ್ಯವಹಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರೆನ್ನಲಾಗಿದ್ದು, ಹದಿನೈದು ದಿನಗಳ ಹಿಂದೆಯಷ್ಟೇ ಶಮೀರ್ ವಿದೇಶದಿಂದ ಮಂಗಳೂರು ವಿಮಾನ ಬಂದಿದ್ದಾಗ ಆರೋಪಿ ಇಲ್ಯಾಸ್ ಜೀವ ಬೆದರಿಕೆ ನೀಡಿದ್ದ ಎನ್ನಲಾಗಿದೆ.

ಚೂರಿ ಇರಿತದಿಂದ ಎದೆ ಹಾಗೂ ಪಕ್ಕೆಲುಬಿಗೆ ಗಂಭೀರ ಗಾಯಗೊಂಡ ಶಮೀರ್ ಉಳ್ಳಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಎಸಿಪಿ ಶೃತಿ, ಇನ್‌ಸ್ಪೆಕ್ಟರ್ ಗೋಪಿಕೃಷ್ಣ, ಸಿಸಿಬಿ ಪಿಸಿಐ ಶಾಮ್‌ಸುಂದರ್ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X