Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನೂತನ ಮುಸ್ಲಿಮ್ ನಿಷೇಧ ಆದೇಶವನ್ನು...

ನೂತನ ಮುಸ್ಲಿಮ್ ನಿಷೇಧ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ ಹವಾಯಿ

ವಾರ್ತಾಭಾರತಿವಾರ್ತಾಭಾರತಿ9 March 2017 7:57 PM IST
share
ನೂತನ ಮುಸ್ಲಿಮ್ ನಿಷೇಧ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ ಹವಾಯಿ

ವಾಶಿಂಗ್ಟನ್, ಮಾ. 9: ಆರು ಮುಸ್ಲಿಮ್ ಬಾಹುಳ್ಯದ ದೇಶಗಳ ನಿವಾಸಿಗಳು ಅಮೆರಿಕ ಪ್ರವೇಶಿಸುವುದನ್ನು ತಡೆಯುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಪರಿಷ್ಕೃತ ಆದೇಶವನ್ನು ಪ್ರಶ್ನಿಸಿ ಅಮೆರಿಕದ ರಾಜ್ಯ ಹವಾಯಿ ನ್ಯಾಯಾಲಯದ ಮೆಟ್ಟಿಲೇರಿದೆ.ಈ ಮೂಲಕ ನೂತನ ಆದೇಶವನ್ನು ಪ್ರಶ್ನಿಸಿದ ಅಮೆರಿಕದ ಮೊದಲ ರಾಜ್ಯವಾಗಿದೆ.

ಮೊದಲ ಆದೇಶದಲ್ಲಿರುವ ಕೆಲವು ಸಂಗತಿಗಳ ಬಗ್ಗೆ ನ್ಯಾಯಾಲಯಗಳು ಕಳವಳಗಳನ್ನು ವ್ಯಕ್ತಪಡಿಸಿದ್ದರೂ, ಪರಿಷ್ಕೃತ ಆದೇಶವು ಹೆಚ್ಚಾಗಿ ಮೊದಲಿನಂತೆಯೇ ಇದೆ ಎಂದು ರಾಜ್ಯದ ಅಟಾರ್ನಿ ಜನರಲ್ ಬುಧವಾರ ವಾದಿಸಿದರು.

ಟ್ರಂಪ್ ಸೋಮವಾರ ಸಹಿ ಹಾಕಿರುವ ಆದೇಶದ ಜಾರಿಯನ್ನು ತಡೆಯುವ ರಾಷ್ಟ್ರವ್ಯಾಪಿ ತಡೆಯಾಜ್ಞೆ ನೀಡಬೇಕೆಂದು ಹವಾಯಿ ನ್ಯಾಯಾಲಯವನ್ನು ಕೋರಿದೆ.

ನೂತನ ಆದೇಶವು 120 ದಿನಗಳ ಕಾಲ ನಿರಾಶ್ರಿತರಿಗೆ ಪ್ರವೇಶ ನೀಡುವುದನ್ನು ತಡೆಯುತ್ತದೆ ಹಾಗೂ ಸಿರಿಯ, ಇರಾನ್, ಲಿಬಿಯ, ಸೊಮಾಲಿಯ, ಯಮನ್ ಮತ್ತು ಸುಡಾನ್‌ಗಳ ನಿವಾಸಿಗಳಿಗೆ ನೂತನ ವೀಸಾಗಳನ್ನು ನೀಡುವುದನ್ನು ನಿಷೇಧಿಸುತ್ತದೆ.

ಟ್ರಂಪ್‌ರ ಮೊದಲ ನಿಷೇಧ ಪಟ್ಟಿಯಲ್ಲಿ ಇರಾಕನ್ನೂ ಸೇರಿಸಲಾಗಿತ್ತು. ಎರಡನೆ ಪಟ್ಟಿಯಿಂದ ಅದರ ಹೆಸರನ್ನು ಕೈಬಿಡಲಾಗಿದೆ. ಅದೇ ವೇಳೆ, ಕಾನೂನುಬದ್ಧ ಖಾಯಂ ನಿವಾಸಿಗಳು ಮತ್ತು ಸೂಕ್ತ ವೀಸಾ ಹೊಂದಿರುವವರನ್ನೂ ನಿಷೇಧ ವ್ಯಾಪ್ತಿಯಿಂದ ಹೊರಗಿರಿಸಲಾಗಿದೆ.

‘‘ಗಣನೀಯ ಬದಲಾವಣೆಯೇನೂ ಆಗಿಲ್ಲ. ಒಂದು ದೇಶವನ್ನು ಹೊರತುಪಡಿಸಿ, ಮುಸ್ಲಿಮ್ ಬಾಹುಳ್ಯದ ದೇಶಗಳ ನಿವಾಸಿಗಳ ಅಮೆರಿಕ ಪ್ರವೇಶಕ್ಕೆ ಹೇರಲಾಗಿರುವ ನಿಷೇಧ ಹಾಗೆಯೇ ಮುಂದುವರಿದಿದೆ’’ ಎಂದು ರಾಜ್ಯದ ಅಟಾರ್ನಿ ಜನರಲ್ ಡೌಗ್ ಚಿನ್ ಹೇಳಿಕೆಯೊಂದರಲ್ಲಿ ತಿಳಿಸಿದರು.

‘‘ನ್ಯಾಯಾಂಗವನ್ನು ಯಾಮಾರಿಸುವ ಸರಕಾರದ ಕೊನೆಯ ಪ್ರಯತ್ನವನ್ನು ನ್ಯಾಯಾಲಯಗಳು ಸಹಿಸಲಾರವು ಹಾಗೂ ಈ ಆದೇಶವನ್ನೂ ಅವುಗಳು ಬೆಂಬಲಿಸಬಾರದು’’ ಎಂದು ಚಿನ್ ಹೇಳಿದ್ದಾರೆ.

ಟ್ರಂಪ್‌ರ ಮೊದಲ ಮುಸ್ಲಿಮ್ ನಿಷೇಧ ಆದೇಶವು ಜಗತ್ತಿನಾದ್ಯಂತದ ವಿಮಾನ ನಿಲ್ದಾಣಗಳಲ್ಲಿ ಭಾರೀ ಗೊಂದಲವನ್ನು ಸೃಷ್ಟಿಸಿತ್ತು.ಆದೇಶ ಹೊರಬಿದ್ದ ಕೆಲವೇ ದಿನಗಳಲ್ಲಿ ಫೆಡರಲ್ ನ್ಯಾಯಾಲಯವೊಂದು ಅದಕ್ಕೆ ತಡೆಯಾಜ್ಞೆ ನೀಡಿತು ಹಾಗೂ ಬಳಿಕ ಮೇಲ್ಮನವಿ ನ್ಯಾಯಾಲಯವೊಂದು ತಡೆಯಾಜ್ಞೆಯನ್ನು ತೆರವುಗೊಳಿಸಲು ನಿರಾಕರಿಸಿತು.ಈಗ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X