Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಿಐಎ ಗುತ್ತಿಗೆದಾರರಿಂದ ಸೋರಿಕೆ ಸಾಧ್ಯತೆ...

ಸಿಐಎ ಗುತ್ತಿಗೆದಾರರಿಂದ ಸೋರಿಕೆ ಸಾಧ್ಯತೆ : ಅಮೆರಿಕ ಅಧಿಕಾರಿಗಳ ಶಂಕೆ

ವಾರ್ತಾಭಾರತಿವಾರ್ತಾಭಾರತಿ9 March 2017 8:54 PM IST
share
ಸಿಐಎ ಗುತ್ತಿಗೆದಾರರಿಂದ ಸೋರಿಕೆ ಸಾಧ್ಯತೆ : ಅಮೆರಿಕ ಅಧಿಕಾರಿಗಳ ಶಂಕೆ

ವಾಶಿಂಗ್ಟನ್, ಮಾ. 9: ಸಿಐಎ ಬಳಸುತ್ತಿರುವ ಕನ್ನ (ಹ್ಯಾಕಿಂಗ್) ಸಾಧನಗಳ ಕುರಿತ ಮಾಹಿತಿಯನ್ನು ಸಿಐಎ ಗುತ್ತಿಗೆದಾರರು ವಿಕಿಲೀಕ್ಸ್‌ಗೆ ಸೋರಿಕೆ ಮಾಡಿರುವ ಸಾಧ್ಯತೆಯಿದೆ ಎಂದು ಅಮೆರಿಕದ ಗುಪ್ತಚರ ಮತ್ತು ಕಾನೂನು ಅನುಷ್ಠಾನ ಅಧಿಕಾರಿಗಳು ಬುಧವಾರ ‘ರಾಯ್ಟರ್ಸ್’ ಸುದ್ದಿ ಸಂಸ್ಥೆಗೆ ಹೇಳಿದ್ದಾರೆ.

ಈ ಮಾಹಿತಿ ಸೋರಿಕೆ ಬಗ್ಗೆ ಗುಪ್ತಚರ ಸಂಸ್ಥೆಗಳಿಗೆ ಕಳೆದ ವರ್ಷದ ಕೊನೆಯಿಂದಲೇ ಮಾಹಿತಿಯಿತ್ತು ಎಂದು ತಮ್ಮ ಗುರುತು ಬಹಿರಂಗಪಡಿಸಲು ನಿರಾಕರಿಸಿದ ಇಬ್ಬರು ಅಧಿಕಾರಿಗಳು ತಿಳಿಸಿದರು.

ಸಿಐಎಯ ವಿವಿಧ ಕನ್ನ ವಿಧಾನಗಳನ್ನು ಸೂಚಿಸುವ ಹಲವಾರು ದಾಖಲೆಗಳನ್ನು ‘ವಿಕಿಲೀಕ್ಸ್’ ಮಂಗಳವಾರ ಪ್ರಕಟಿಸಿರುವುದನ್ನು ಸ್ಮರಿಸಬಹುದಾಗಿದೆ.
ಸೆಂಟ್ರಲ್ ಇಂಟಲಿಜನ್ಸ್ ಏಜನ್ಸಿ (ಸಿಐಎ)ಯ ಕನ್ನಗಾರರು ತಮ್ಮ ಅತ್ಯಾಧುನಿಕ ಸಾಫ್ಟ್‌ವೇರ್‌ಗಳ ಮೂಲಕ ಆ್ಯಪಲ್‌ನ ಐಫೋನ್‌ಗಳು, ಗೂಗಲ್‌ನ ಆ್ಯಂಡ್ರಾಯ್ಡಾ ಚಾಲಿತ ಸ್ಮಾರ್ಟ್‌ಫೋನ್‌ಗಳು ಮತ್ತು ಇತರ ಉಪಕರಣಗಳನ್ನು ಪ್ರವೇಶಿಸಿ ಬರಹ ಮತ್ತು ಧ್ವನಿ ಸಂದೇಶಗಳು ಎನ್‌ಕ್ರಿಪ್ಟ್ (ಸಂಕೇತಾಕ್ಷರಗಳು) ಆಗುವ ಮೊದಲೇ ಓದುತ್ತಾರೆ ಎಂಬುದಾಗಿ ವಿಕಿಲೀಕ್ಸ್ ಹೇಳಿದೆ.

ಸಿಐಎಯ ಭದ್ರತಾ ಉಲ್ಲಂಘನೆ ಬಗ್ಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ‘ಅತೀವ ಕಳವಳ’ ಹೊಂದಿದ್ದಾರೆ ಎಂದು ಶ್ವೇತಭವನ ಬುಧವಾರ ಹೇಳಿದೆ.
‘‘ರಹಸ್ಯ ಮಾಹಿತಿಗಳನ್ನು ಸೋರಿಕೆ ಮಾಡುವವರಿಗೆ ಕಾನೂನು ಪ್ರಕಾರ ಅತ್ಯಂತ ಗರಿಷ್ಠ ಪ್ರಮಾಣದ ಶಿಕ್ಷೆ ನೀಡಲಾಗುವುದು’’ ಎಂದು ಶ್ವೇತಭವನದ ವಕ್ತಾರ ಸಿಯನ್ ಸ್ಪೈಸರ್ ನುಡಿದರು.

ಅಮೆರಿಕ ವಿರೋಧಿಗಳಿಗೆ ಸಹಾಯ: ಸಿಐಎ
 ತನ್ನ ಗುಪ್ತ ಮಾಹಿತಿ ಸಂಗ್ರಹ ವಿಧಾನಗಳನ್ನು ಸೋರಿಕೆ ಮಾಡುವ ಮೂಲಕ ವಿಕಿಲೀಕ್ಸ್ ಅಮೆರಿಕನ್ನರನ್ನು ಅಪಾಯಕ್ಕೆ ಗುರಿಪಡಿಸುತ್ತಿದೆ, ಅಮೆರಿಕದ ವಿರೋಧಿಗಳಿಗೆ ನೆರವು ನೀಡುತ್ತಿದೆ ಹಾಗೂ ಭಯೋತ್ಪಾದನೆ ಬೆದರಿಕೆ ವಿರುದ್ಧದ ಅಮೆರಿಕದ ಹೋರಾಟದಲ್ಲಿ ತಡೆಯೊಡ್ಡುತ್ತಿದೆ ಎಂದು ಸಿಐಎ ಬುಧವಾರ ಆರೋಪಿಸಿದೆ.

ಆದಾಗ್ಯೂ, ಮಂಗಳವಾರ ವಿಕಿಲೀಕ್ಸ್ ಪ್ರಕಟಿಸಿದ ದಾಖಲೆಗಳ ಸಿಂಧುತ್ವವನ್ನು ಖಚಿತಪಡಿಸಲು ಸಿಐಎ ವಕ್ತಾರೆ ಹೆದರ್ ಫ್ರಿಟ್ಝ್ ಹೊರ್ನಿಯಾಕ್ ನಿರಾಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X