Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚುನಾವಣೆಯ ಫಲಿತಾಂಶ ಕುತೂಹಲ: ಯಾವ ರಾಜ್ಯ...

ಚುನಾವಣೆಯ ಫಲಿತಾಂಶ ಕುತೂಹಲ: ಯಾವ ರಾಜ್ಯ ಯಾರ ಮಡಿಲಿಗೆ?

ಮತಗಟ್ಟೆ ಸಮೀಕ್ಷೆಯ ವಿವರಗಳಿಗೆ ಕ್ಲಿಕ್ ಮಾಡಿ

ವಾರ್ತಾಭಾರತಿವಾರ್ತಾಭಾರತಿ10 March 2017 3:40 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಚುನಾವಣೆಯ ಫಲಿತಾಂಶ ಕುತೂಹಲ: ಯಾವ ರಾಜ್ಯ ಯಾರ ಮಡಿಲಿಗೆ?

ಹೊಸದಿಲ್ಲಿ, ಮಾ.10: ಪಂಚರಾಜ್ಯ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮತಗಟ್ಟೆ ನಿರ್ಗಮನ ಸಮೀಕ್ಷೆ ಹಿನ್ನೆಲೆಯಲ್ಲಿ ಹೊಸ ರಾಜಕೀಯ ಲೆಕ್ಕಾಚಾರಗಳು ಗರಿಗೆದರಿವೆ. ಶನಿವಾರ ಫಲಿತಾಂಶ ಪ್ರಕಟವಾಗಲಿದ್ದು, ಗುರುವಾರ ನಡೆಸಿದ ಸಮೀಕ್ಷೆಗಳ ಪ್ರಕಾರ ಉತ್ತರ ಪ್ರದೇಶದಲ್ಲಿ ಬಿಜೆಪಿ ಸ್ಪಷ್ಟ ಮುನ್ನಡೆ ಸಾಧಿಸಲಿದೆ. ಪಂಜಾಬ್‌ನಲ್ಲಿ ಆಡಳಿತಾರೂಢ ಶಿರೋಮಣಿ ಅಕಾಲಿದಳ- ಬಿಜೆಪಿ ಮೈತ್ರಿಕೂಟಕ್ಕೆ ಸೋಲು ಕಟ್ಟಿಟ್ಟ ಬುತ್ತಿ. ಇಲ್ಲಿ ಅಧಿಕಾರಕ್ಕಾಗಿ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ನಡುವೆ ಹಣಾಹಣಿ ಏರ್ಪಡುವ ಸಾಧ್ಯತೆಯನ್ನು ಮತಗಟ್ಟೆ ಸಮೀಕ್ಷೆಗಳು ಅಂದಾಜು ಮಾಡಿವೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದ್ದು, ಸ್ಪಷ್ಟ ಬಹುಮತಕ್ಕೆ ಬೇಕಾದ 202 ಸ್ಥಾನಗಳ ಸನಿಹಕ್ಕೆ ಬರಲಿದೆ ಎಂದು ಐದು ಸಮೀಕ್ಷೆಗಳು ಅಂದಾಜು ಮಾಡಿವೆ. ಎರಡು ಸಮೀಕ್ಷೆಗಳು ಬಿಜೆಪಿಗೆ ಸ್ಪಷ್ಟ ಬಹುಮತ ಅಂದಾಜು ಮಾಡಿದ್ದು, 285 ಸ್ಥಾನ ಗಳಿಸುವ ನಿರೀಕ್ಷೆ ಇವೆ ಎಂದು ಹೇಳಿದೆ. ಎರಡನೇ ಸ್ಥಾನ ಕಾಂಗ್ರೆಸ್- ಎಸ್ಪಿ ಮೈತ್ರಿಕೂಟಕ್ಕೆ ಲಭ್ಯವಾಗಲಿದ್ದು, ಬಿಎಸ್ಪಿ ಹಿಂದುಳಿಯಲಿದೆ. 100ಕ್ಕಿಂತ ಕಡಿಮೆ ಸ್ಥಾನಗಳನ್ನು ಬಿಎಸ್ಪಿ ಗೆಲ್ಲುವ ಸಾಧ್ಯತೆ ಇದೆ. ಎರಡು ಮತಗಟ್ಟೆ ಸಮೀಕ್ಷೆಗಳು ಬಿಜೆಪಿ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ನಡುವೆ ಅಧಿಕಾರಕ್ಕೆ ನಿಕಟ ಸ್ಪರ್ಧೆ ಏರ್ಪಡುವ ಸಾಧ್ಯತೆಯನ್ನು ಅಂದಾಜು ಮಾಡಿವೆ.

ಇಂಡಿಯಾ ಟಿವಿ- ಎಬಿಪಿ ನ್ಯೂಸ್ ಸಮೀಕ್ಷೆಯ ಪ್ರಕಾರ 145- 160 ಸ್ಥಾನಗಳು ಈ ಮೈತ್ರಿಕೂಟಕ್ಕೆ ಸಿಗಲಿದ್ದು, ಬಹುಮತಕ್ಕೆ 50 ಸ್ಥಾನ ಕೊರತೆಯಾಗಬಹುದು. ಆದರೆ ಟೈಮ್ಸ್ ನೌ ಅಂದಾಜಿನ ಪ್ರಕಾರ ಮೈತ್ರಿಕೂಟಕ್ಕೆ 120 ಸ್ಥಾನಗಳಷ್ಟೆ ಸಿಗಲಿವೆ.

ಆದರೆ ಬಿಜೆಪಿ- ಅಕಾಲಿ ದಳ ಕೂಟ ಪಂಜಾಬ್‌ನಲ್ಲಿ ನಾಮಾವಶೇಷವಾಗಲಿದ್ದು, 10ಕ್ಕಿಂತಲೂ ಕಡಿಮೆ ಸ್ಥಾನಕ್ಕೆ ಕುಸಿಯಲಿದೆ ಎಂದು ನಾಲ್ಕು ಸಮೀಕ್ಷೆಗಳು ಹೇಳಿವೆ. ಆದರೆ ಅಧಿಕಾರ ಎಎಪಿ ಅಥವಾ ಕಾಂಗ್ರೆಸ್ ಪಾಲಾಗಬಹುದು ಎನ್ನುವುದನ್ನು ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ ಎಂದು ಸಮೀಕ್ಷೆಗಳಿಂದ ವ್ಯಕ್ತವಾಗಿದೆ. ಕಾಂಗ್ರೆಸ್ ಹಾಗೂ ಎಎಪಿ ತಲಾ 50 ಸ್ಥಾನಗಳನ್ನು ಗಳಿಸುವ ನಿರೀಕ್ಷೆ ಇದ್ದು, 117 ಸದಸ್ಯರ ಸದನದಲ್ಲಿ ಸ್ಪಷ್ಟ ಬಹುಮತಕ್ಕೆ 59 ಸ್ಥಾನ ಬೇಕು. ಇಂಡಿಯಾ ಟುಡೇ ಸಮೀಕ್ಷೆ ಪ್ರಕಾರ ಕಾಂಗ್ರೆಸ್ 71 ಸ್ಥಾನಗಳನ್ನು ಹಾಗೂ ಎಎಪಿ 51 ಸ್ಥಾನ ಗೆಲ್ಲಬಹುದು. ಇಂಡಿಯಾ ಟಿವಿ ಮಾತ್ರ ಎಎಪಿ ಮೇಲುಗೈ ಸಾಧಿಸುತ್ತದೆ ಎಂದು ಅಂದಾಜು ಮಾಡಿದ್ದು, 67 ಸ್ಥಾನಗಳನ್ನು ನೀಡಿದೆ. ಕಾಂಗ್ರೆಸ್ 49 ಸ್ಥಾನಗಳನ್ನಷ್ಟೇ ಗೆಲ್ಲಬಲ್ಲದು ಎನ್ನುವುದು ಅದರ ನಿರೀಕ್ಷೆ.

ಗೋವಾ ಹಾಗೂ ಉತ್ತರಾಖಂಡದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆ ಇದ್ದರೂ, ಕಾಂಗ್ರೆಸ್ ಸಾಧನೆ ತೀರಾ ಕಳಪೆಯಾಗುವ ಸಾಧ್ಯತೆ ಇಲ್ಲ. ಆದರೆ ಗೋವಾದಲ್ಲಿ ಎಎಪಿ ಐದಾರು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯೂ ಇಲ್ಲ. ನ್ಯೂಸ್ 24 ಹಾಗೂ ಇಂಡಿಯಾ ಟುಡೇ ಸಮೀಕ್ಷೆಗಳ ಪ್ರಕಾರ ಉತ್ತರಾಖಂಡದಲ್ಲಿ ಬಿಜೆಪಿಗೆ 53 ಸ್ಥಾನ ಲಭಿಸಲಿದೆ. ಗೋವಾದಲ್ಲಿ ಬಿಜೆಪಿಗೆ ಅಧಿಕಾರ ಸಿಕ್ಕಿದರೂ ಕಾಂಗ್ರೆಸ್ ನಿಕಟಸ್ಪರ್ಧೆ ನೀಡಲಿದೆ. ಬಿಜೆಪಿ 22 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದ್ದು, ಕಾಂಗ್ರೆಸ್ 18 ಸ್ಥಾನಗಳವರೆಗೂ ಗೆಲ್ಲಬಹುದು ಎಂದು ಇಂಡಿಯಾ ಟಿವಿ ಹಾಗೂ ಇಂಡಿಯಾ ಟುಡೇ ಅಂದಾಜು ಮಾಡಿದೆ. ಮಣಿಪುರದ 60 ಸದಸ್ಯಬಲದ ಸದನದಲ್ಲಿ ಎರಡೂ ಪಕ್ಷಗಳ ಗೆಲ್ಲುವ ಸಾಧ್ಯತೆ ಸಮಾನವಾಗಿದೆ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X