Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಒಂದು ಪ್ರಕರಣದಲ್ಲಿ ಟ್ರಂಪ್ ಮುಸ್ಲಿಮ್...

ಒಂದು ಪ್ರಕರಣದಲ್ಲಿ ಟ್ರಂಪ್ ಮುಸ್ಲಿಮ್ ನಿಷೇಧ ಆದೇಶ ಜಾರಿಗೆ ತಡೆ

ವಾರ್ತಾಭಾರತಿವಾರ್ತಾಭಾರತಿ11 March 2017 9:47 PM IST
share
ಒಂದು ಪ್ರಕರಣದಲ್ಲಿ ಟ್ರಂಪ್ ಮುಸ್ಲಿಮ್ ನಿಷೇಧ ಆದೇಶ ಜಾರಿಗೆ ತಡೆ

ವಾಶಿಂಗ್ಟನ್, ಮಾ. 11: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಪರಿಷ್ಕೃತ ಮುಸ್ಲಿಮ್ ನಿಷೇಧ ಆದೇಶಕ್ಕೆ ಮೊದಲ ಮಹತ್ವದ ಕಾನೂನು ತಡೆ ಎದುರಾಗಿದೆ. ಈಗಾಗಲೇ ಅಮೆರಿಕದಲ್ಲಿ ಆಶ್ರಯ ನೀಡಲಾಗಿರುವ ಸಿರಿಯ ನಿರಾಶ್ರಿತರೊಬ್ಬರ ಪತ್ನಿ ಮತ್ತು ಮಗುವಿಗೆ ಅಮೆರಿಕ ಪ್ರವೇಶವನ್ನು ನಿರಾಕರಿಸುವ ಆದೇಶವನ್ನು ಅನುಷ್ಠಾನಗೊಳಿಸದಿರುವಂತೆ ವಿಸ್ಕಾನ್ಸಿನ್ ರಾಜ್ಯದ ಜಿಲ್ಲಾ ನ್ಯಾಯಾಧೀಶ ವಿಲಿಯಮ್ ಕಾನ್ಲಿ ಆದೇಶ ನೀಡಿದ್ದಾರೆ.

ಆದೇಶದ ಪಾಲನೆಯಾದರೆ ವಾದಿಯ ಪಾಲಿಗೆ ಸರಿಪಡಿಸಲಾಗದ ಹಾನಿಯಾಗುತ್ತದೆ ಎಂದು ಶುಕ್ರವಾರ ಮಧ್ಯಾಂತರ ಆದೇಶ ನೀಡಿದ ನ್ಯಾಯಾಧೀಶರು ಹೇಳಿದರು. ಆದಾಗ್ಯೂ, ಈ ಆದೇಶ ಈ ಪ್ರಕರಣದ ಸಿರಿಯ ನಿರಾಶ್ರಿತ ಮತ್ತು ಆತನ ಕುಟುಂಬಕ್ಕೆ ಮಾತ್ರ ಅನ್ವಯವಾಗುತ್ತದೆ.

ಪತ್ನಿ ಮತ್ತು ಮಗು ಈಗಲೂ ಯುದ್ಧಪೀಡಿತ ಅಲೆಪ್ಪೊದಲ್ಲಿರುವುದರಿಂದ ಸಿರಿಯ ನಿರಾಶ್ರಿತ ವ್ಯಕ್ತಿಯು ಅನಾಮಧೇಯರಾಗಿ ಉಳಿಯಲು ಬಯಸಿದ್ದಾರೆ.
ಸೋಮವಾರ ಜಾರಿಗೆ ಬಂದಿರುವ ನೂತನ ಆದೇಶವನು ಮಾರ್ಚ 16ರಂದು ಜಾರಿಗೆ ಬರಲಿದೆ.


ನೂತನ ಆದೇಶಕ್ಕೆ ತಕ್ಷಣ ತಡೆಯಿಲ್ಲ: ನ್ಯಾಯಾಧೀಶ

ಡೊನಾಲ್ಡ್ ಟ್ರಂಪ್‌ರ ಮೂಲ ಮುಸ್ಲಿಮ್ ನಿಷೇಧ ಆದೇಶದ ರಾಷ್ಟ್ರವ್ಯಾಪಿ ಜಾರಿಗೆ ತಡೆಯಾಜ್ಞೆ ನೀಡಿರುವ ತನ್ನ ತೀರ್ಪು, ಪರಿಷ್ಕೃತ ಆದೇಶಕ್ಕೆ ಅನ್ವಯವಾಗುವುದೇ ಎನ್ನುವುದನ್ನು ತಕ್ಷಣ ನಿರ್ಧರಿಸಲು ತನಗೆ ಸಾಧ್ಯವಾಗುವುದಿಲ್ಲ ಎಂದು ಸಿಯಾಟಲ್‌ನ ಫೆಡರಲ್ ನ್ಯಾಯಾಧೀಶ ಜೇಮ್ಸ್ ರೋಬರ್ಟ್ ಶುಕ್ರವಾರ ಹೇಳಿದ್ದಾರೆ.

ಈ ವಿಷಯದಲ್ಲಿ ತಾನು ನಿರ್ಧಾರವೊಂದನ್ನು ತೆಗೆದುಕೊಳ್ಳುವ ಮೊದಲು, ಪರಿಷ್ಕೃತ ಆದೇಶಕ್ಕೆ ಸಂಬಂಧಿಸಿದ ನಿರ್ಣಯಗಳು ಅಥವಾ ದೂರನ್ನು ಯಾರಾದರೂ ಸಲ್ಲಿಸಬೇಕಾಗುತ್ತದೆ ಎಂದು ಆದೇಶವೊಂದರಲ್ಲಿ ತಿಳಿಸಿದರು.

ವಾಶಿಂಗ್ಟನ್ ಮತ್ತು ಮಿನಸೋಟ ರಾಜ್ಯಗಳು ಮತ್ತು ಕಾನೂನು ಇಲಾಖೆ ಈವರೆಗೆ ನೋಟಿಸ್‌ಗಳನ್ನು ಮಾತ್ರ ಸಲ್ಲಿಸಿವೆ.

ಮೂಲ ಆದೇಶವನ್ನು ಹಿಂದಕ್ಕೆ ಪಡೆಯಲಾಗಿದೆ ಹಾಗೂ ನ್ಯಾಯಾಲಯದ ತಡೆಯಾಜ್ಞೆಯು ನೂತನ ಆದೇಶವನ್ನು ಜಾರಿಗೊಳಿಸುವ ಸರಕಾರದ ನಿರ್ಧಾರವನ್ನು ತಡೆಯುವುದಿಲ್ಲ ಎಂದು ಈ ವಾರ ಅಮೆರಿಕದ ಕಾನೂನು ಇಲಾಖೆ ಹೇಳಿದೆ.

ಅದೇ ವೇಳೆ, ನೂತನ ಆದೇಶದ ಪರಿಣಾಮವು ಹಿಂದಿನ ಆದೇಶದಂತೆಯೇ ಇದೆ ಹಾಗೂ ನ್ಯಾಯಾಲಯವೊಂದರ ಹಿಂದಿನ ತೀರ್ಪನ್ನು ಬದಲಾಯಿಸುವ ಬಗ್ಗೆ ಫೆಡರಲ್ ಸರಕಾರವು ಏಕಪಕ್ಷೀಯವಾಗಿ ನಿರ್ಧರಿಸುವಂತಿಲ್ಲ ಎಂದು ಇದಕ್ಕೆ ಪ್ರತಿಯಾಗಿ ವಾಶಿಂಗ್ಟನ್ ಮತ್ತು ಮಿನಸೋಟ ರಾಜ್ಯಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X