Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಚ್ಚರಿಯ ಸೋಲು, ಗೆಲುವು ದಾಖಲಿಸಿದ...

ಅಚ್ಚರಿಯ ಸೋಲು, ಗೆಲುವು ದಾಖಲಿಸಿದ ಮಣಿಪುರ ಚುನಾವಣೆ ಫಲಿತಾಂಶ

ವಾರ್ತಾಭಾರತಿವಾರ್ತಾಭಾರತಿ11 March 2017 11:50 PM IST
share
ಅಚ್ಚರಿಯ ಸೋಲು, ಗೆಲುವು ದಾಖಲಿಸಿದ ಮಣಿಪುರ ಚುನಾವಣೆ ಫಲಿತಾಂಶ

ಎರಡು ಹಂತದಲ್ಲಿ ನಡೆದ ಮಣಿಪುರ ವಿಧಾನಸಭೆಯ ಚುನಾವಣೆಯ ಫಲಿತಾಂಶ ಕೆಲವು ಅಚ್ಚರಿಯ ಸೋಲು, ಗೆಲುವಿಗೆ ಕಾರಣವಾಗಿದೆ. ಮುಖ್ಯಮಂತ್ರಿ ಇಬೊಬಿ ಸಿಂಗ್ ನಾಲ್ಕನೆ ಬಾರಿ ವಿಜಯ ಪತಾಕೆ ಹಾರಿಸಿದರೆ, ಭಾರೀ ನಿರೀಕ್ಷೆ ಮೂಡಿಸಿದ್ದ ಮಾನವ ಹಕ್ಕುಗಳ ಹೋರಾಟಗಾರ್ತಿ ಇರೋಮ್ ಶರ್ಮಿಳಾ ಅವರು ಸೋಲುಂಡಿದ್ದಾರೆ. ಬಿಜೆಪಿಯ ಹಲವು ಪ್ರಮುಖ ನಾಯಕರೂ ಸೋತವರ ಸಾಲಿನಲ್ಲಿದ್ದಾರೆ. 

ಮುಖ್ಯಮಂತ್ರಿ ಒಕ್ರಮ್ ಇಬೊಬಿ ಸಿಂಗ್ ಅವರು ಥೌಬಾಲ್ ಕ್ಷೇತ್ರದಿಂದ ನಾಲ್ಕನೆ ಬಾರಿ ಗೆಲುವು ಸಾಧಿಸಿದ್ದರೂ, ಉಪಮುಖ್ಯಮಂತ್ರಿ ಗೈಖಾಂಗಮ್ ಗಾಂಗ್ಮೈ ಅವರು ನುಂಬಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆದಿಮ್ ಪಮೈ ಎದುರು ಸೋಲುಂಡಿದ್ದಾರೆ. ಆದರೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಟಿ.ಎನ್. ಹೋಕಿಪ್ ತಮ್ಮ ಕ್ಷೇತ್ರವಾದ ಸೈಕೋಟ್‌ನಲ್ಲಿ ಗೆಲುವಿನ ಓಟ ಮುಂದುವರಿಸಿದ್ದಾರೆ.

ಇನ್ನೋರ್ವ ಪ್ರಮುಖ ಮುಖಂಡ, ಕಾಂಗ್ರೆಸ್ ತ್ಯಜಿಸಿ ನ್ಯಾಶನಲ್ ಪೀಪಲ್ಸ್ ಪಾರ್ಟಿ ಸೇರಿಕೊಂಡ ಫುಂಝಥಂಗ್ ತಾನ್ಸಿಂಗ್ ಅವರು ಚುರಚಾಂದ್‌ಪುರ ನಗರ ಕ್ಷೇತ್ರದಲ್ಲಿ ಬಿಜೆಪಿಯ ವಿ.ಹಾಂಗ್‌ಖನ್ಲಿಯನ್ ಎದುರು ಸೋಲುಂಡಿದ್ದಾರೆ. 2015ರಲ್ಲಿ ಈ ಕ್ಷೇತ್ರದಲ್ಲಿ ಭಾರೀ ಹಿಂಸಾತ್ಮಕ ಘಟನೆ ನಡೆದಿದ್ದು 9 ಯುವಕರು ಮೃತಪಟ್ಟಿದ್ದರು. ಈ ಸಂದರ್ಭ ಪಕ್ಷ ತ್ಯಜಿಸದೆ, ತಮ್ಮ ಸ್ವಾರ್ಥಕ್ಕಾಗಿ ಚುನಾವಣೆ ಸಂದರ್ಭ ಪಕ್ಷ ತ್ಯಜಿಸಿದ್ದಾರೆ ಎಂಬ ಸಿಟ್ಟಿನಿಂದ ಕ್ಷೇತ್ರದ ಮತದಾರರು ಇವರ ವಿರುದ್ಧ ನಿಂತಿರುವುದು ಇವರ ಸೋಲಿಗೆ ಕಾರಣ ಎಂದು ವಿಶ್ಲೇಷಿಸಲಾಗಿದೆ.

ಕಾಂಗ್ರೆಸ್ ಸರಕಾರ 2015ರ ಆಗಸ್ಟ್ 31ರಂದು ಮೂರು ವಿವಾದಾತ್ಮಕ ಮಸೂದೆಗಳನ್ನು ಅಂಗೀಕರಿಸಿರುವುದನ್ನು ವಿರೋಧಿಸಿ ರಾಜ್ಯದಲ್ಲಿ ಗಲಭೆ ನಡೆದಾಗ ಪ್ರತಿಭಟನಾಕಾರರು ಕಾಂಗ್ರೆಸ್ ಶಾಸಕ ಮಾಂಗಾ ವೈಫೆ ಅವರ ಮನೆಗೆ ಬೆಂಕಿ ಹಚ್ಚಿದ್ದರು. ಈ ಬಾರಿಯ ಚುನಾವಣೆಯಲ್ಲಿ ಅವರು ಬಿಜೆಪಿ ಅಭ್ಯರ್ಥಿ ಟಿ.ಟಿ.ಹೋಕಿಪ್ ಎದುರು ಹೆಂಗ್ಲೆಪ್ ಕ್ಷೇತ್ರದಲ್ಲಿ ಸೋಲುಂಡಿದ್ದಾರೆ. ಇದೇ ಗಲಭೆಯಲ್ಲಿ ಇನ್ನೋರ್ವ ಕಾಂಗ್ರೆಸ್ ಶಾಸಕ ವಿ.ವಾಲ್ತೆ ಅವರ ಮನೆಗೂ ಬೆಂಕಿ ಹಚ್ಚಲಾಗಿತ್ತು. ವಾಲ್ತೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯೆದುರು ಥನ್ಲೋನ್ ಕ್ಷೇತ್ರದಲ್ಲಿ ಗೆದ್ದಿದ್ದಾರೆ.

ರಾಜ್ಯದಲ್ಲಿ ಬಿಜೆಪಿಯ ಮೂವರು ಪ್ರಮುಖ ನಾಯಕರಾದ ಬಿಸ್ವಜಿತ್ ಸಿಂಗ್, ಪಕ್ಷದ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಚವೊಬಾ ಸಿಂಗ್, ಪಕ್ಷದ ವಕ್ತಾರ ಎಂ.ಅಸ್ನಿ ಕುಮಾರ್ ಚುನಾವಣೆಯಲ್ಲಿ ಸೋಲುಂಡಿರುವುದು ಗಮನಾರ್ಹವಾಗಿದೆ. ಒಂದು ವೇಳೆ ಬಿಜೆಪಿ, ಇತರರ ಬೆಂಬಲದಿಂದ ಬಹುಮತಕ್ಕೆ ಅಗತ್ಯವಿರುವ 31 ಸ್ಥಾನಗಳನ್ನು ತಲುಪಲು ಸಾಧ್ಯವಾದರೆ ಆಗ ರಾಜ್ಯದಲ್ಲಿ ಮುಖ್ಯಮಂತ್ರಿ ಯಾರಾಗಬಹುದು ಎಂಬ ಪ್ರಶ್ನೆ ಎದುರಾಗುತ್ತದೆ. ತಾನು ಮುಖ್ಯಮಂತ್ರಿ ಹುದ್ದೆಗೆ ಅಭ್ಯರ್ಥಿಯಲ್ಲ ಎಂದು ಚುನಾವಣೆಯ ಸಂದರ್ಭ ಪಕ್ಷದ ರಾಜ್ಯ ಘಟಕಾಧ್ಯಕ್ಷ ಭಬಾನಂದ ಸಿಂಗ್ ತಿಳಿಸಿದ್ದರು.

ಚುನಾವಣೆಯಲ್ಲಿ ಸೋಲುಂಡಿರುವ ಬಿಜೆಪಿಯ ಪ್ರಮುಖರಲ್ಲಿ- ಚಿಂಗಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸ್ವೋರ್ಡ್ ವಶುಂ, ಉಖ್ರುಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸೊಮತಾಯ್ ಶೈಝಾ, ತಬೂಬಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಫ್ರಾನ್ಸಿಸ್ ನಜೊಪ, ತಮೈ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಿಕೊಂಬೊ ನೆವ್‌ಮೈ ಸೇರಿದ್ದಾರೆ.

ಚುನಾವಣೆಯಲ್ಲಿ ಸೋಲುಂಡಿರುವ ಮತ್ತೋರ್ವ ಪ್ರಮುಖರೆಂದರೆ ಮಾನವ ಹಕ್ಕುಗಳ ಹೋರಾಟಗಾರ್ತಿ ಇರೋಮ್ ಶರ್ಮಿಳಾ . ಚುನಾವಣೆಗೆ ಒಂದು ತಿಂಗಳಿರುವಾಗ-ಪೀಪಲ್ಸ್ ರಿಸರ್ಜೆನ್ಸ್ ಆ್ಯಂಡ್ ಜಸ್ಟಿಸ್ ಪಾರ್ಟಿ- ಎಂಬ ಪಕ್ಷ ಸ್ಥಾಪಿಸಿದ್ದ ಶರ್ಮಿಳಾ, ಪಕ್ಷದಿಂದ ಮೂವರನ್ನು ಕಣಕ್ಕಿಳಿಸಿದ್ದರು. ಆದರೆ ಮೂವರೂ ಸೋತಿರುವುದು ಗಮನಾರ್ಹವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X