Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯಡಿಯೂರಪ್ಪ ಧರ್ಮಾಧಿಕಾರಿಯೇ?: ಸಿಎಂ...

ಯಡಿಯೂರಪ್ಪ ಧರ್ಮಾಧಿಕಾರಿಯೇ?: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ12 March 2017 7:40 PM IST
share
ಯಡಿಯೂರಪ್ಪ ಧರ್ಮಾಧಿಕಾರಿಯೇ?: ಸಿಎಂ ಸಿದ್ದರಾಮಯ್ಯ

ಮೈಸೂರು, ಮಾ.12: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಧರ್ಮಾಧಿಕಾರಿಯೇ? ಅವರು ಮಾಡಿರುವ ಪಾಪದ ಕೆಲಸಗಳು ಇನ್ನೊಂದು ಜನ್ಮವಾದರೂ ಮುಗಿಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ‌. 

ಸರ್ಕಾರದ ಅಧರ್ಮದ ಮೇಲೆ ಉಪ ಚುನಾವಣೆಯಲ್ಲಿ ಮತ ಕೇಳುತ್ತೇವೆ ಎಂಬ ಯಡಿಯೂರಪ್ಪ ಅವರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಚುನಾವಣೆಗಳು ಎಂದರೆ ವೈಯಕ್ತಿಕ ಜಗಳ ಅಲ್ಲ. ಅದು ಸಿದ್ಧಾಂತದ ಮೇಲೆ ನಡೆಯುವಂತದ್ದು. ಬಿಜೆಪಿ ಒಂದು ಕೋಮುವಾದಿ ಪಕ್ಷ. ಶ್ರೀನಿವಾಸ ಪ್ರಸಾದ್ ಅವರು ಆ ಕೋಮುವಾದಿ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್ ಜಾತ್ಯತೀತ ತತ್ವದ ಮೇಲೆ ನಂಬಿಕೆ ಇಟ್ಟಿರುವ ಪಕ್ಷ. ನಂಜನಗೂಡಿನಲ್ಲಿ ಕೋಮುವಾದಿ ಮತ್ತು ಜಾತ್ಯತೀತ ಪಕ್ಷದ ಮಧ್ಯೆ ಚುನಾವಣೆ ನಡೆಯಲಿದೆ. ಇದು ಬಿಟ್ಟು ನಾನು ಮತ್ತು ಶ್ರೀನಿವಾಸ ಪ್ರಸಾದ್ ವೈಯಕ್ತಿಕವಾಗಿ ಜಗಳ ಮಾಡಲಾಗುವುದೇ? ಎಂದು ಹೇಳಿದರು.

1952ರಿಂದ 9 ಬಾರಿ ನಂಜನಗೂಡಿನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಬಾರಿಯೂ ಗೆಲ್ಲಲಿದೆ. ಪ್ರಸಾದ್ ಅವರು ಎರಡು ಬಾರಿ ಕಾಂಗ್ರೆಸ್‌ ನಿಂದಲೇ ಗೆಲುವು ಸಾಧಿಸಿದ್ದರು. ಈಗ ಅವರು ಬಿಜೆಪಿ ಸೇರಿದ್ದಾರೆ. ನಮ್ಮ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲುವು ಸಾಧಿಸಲಿದ್ದಾರೆ‌. ಎಐಸಿಸಿ ಜೊತೆಗೆ ಇಡೀ ಸಚಿವ ಸಂಪುಟವೇ ಬಂದರೂ ತಮ್ಮನ್ನು ಸೋಲಿಸಲಾಗದು ಎಂಬ ಶ್ರೀನಿವಾಸ ಪ್ರಸಾದ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಗಳು, ಪ್ರಸಾದ್ ಅವರು ದೊಡ್ಡ ನಾಯಕರು. ಅವರ ಹೇಳಿಕೆಗೆ ಉತ್ತರಿಸುವುದಿಲ್ಲ ಎಂದರು.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಉಪ ಚುನಾವಣೆ  ಮೇಲೆ ಪರಿಣಾಮ ಬೀರುವುದಿಲ್ಲ. ಪಂಜಾಬ್ ನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಆ ಫಲಿತಾಂಶ ಪರಿಣಾಮ ಬೀರಬಾರದೇಕೆ ? ಉತ್ತರ ಪ್ರದೇಶದ ಫಲಿತಾಂಶವೇ ಯಾಕಗಬೇಕು ಎಂದು ಪ್ರಶ್ನಿಸಿದರು.

ಪಂಜಾಬ್ ನಲ್ಲಿ ಕಾಂಗ್ರೆಸ್ 77 ಸ್ಥಾನಗಳೊಂದಿಗೆ ಬಹುಮತ ಸಾಧಿಸಿದೆ. ಅದು ಪಕ್ಷಕ್ಕೆ ದೊಡ್ಡ ಗೆಲುವು ಅಲ್ಲವೇ, ಗೋವಾ, ಮಣಿಪುರದಲ್ಲೂ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿಲ್ಲವೇ,  ಬಿಜೆಪಿ ಉತ್ತರ ಪ್ರದೇಶದಲ್ಲಿ 15 ವರ್ಷಗಳಿಂದ ಅಧಿಕಾರದಲ್ಲಿ ಇರಲಿಲ್ಲ. ಜೊತೆಗೆ ಜನ ಅಲ್ಲಿ ಬದಲಾವಣೆ ಬಯಸಿರಬಹುದು. ಆಡಳಿತ ವಿರೋಧಿ ಅಲೆ, ಮತಗಳ ಧ್ರುವೀಕರಣ, ಹಿಂದುತ್ವ ಅಸ್ತ್ರ ಪ್ರಯೋಗದಿಂದ ಬಿಜೆಪಿ ಅಲ್ಲಿ ಗೆದ್ದಿದೆ ಎಂದು ಹೇಳಿದರು. 

ಸೋಲು, ಗೆಲುವು ಪ್ರಜಾಪ್ರಭುತ್ವ ದಲ್ಲಿ ಸಾಮಾನ್ಯ. ಸೋತಾಕ್ಷಣ ಧೃತಿಗೆಡದೆ ಇನ್ನೂ ಹೆಚ್ಚು ಉತ್ಸಾಹದಿಂದ ಕೆಲಸ ಮಾಡುತ್ತೇವೆ. ಉಪ ಚುನಾವಣೆ ನಡೆಯಲಿರುವ ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರಗಳಿಗೆ ಶೀಘ್ರದಲ್ಲೇ ಉಸ್ತುವಾರಿ ನೇಮಕ ಮಾಡಲಾಗುವುದು ಎಂದು ಸಿಎಂ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X