Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅನಕ್ಷರತೆ, ಮಾಹಿತಿ ಕೊರತೆಯೇ ಕೊರಗರ...

ಅನಕ್ಷರತೆ, ಮಾಹಿತಿ ಕೊರತೆಯೇ ಕೊರಗರ ಶೋಷಣೆಗೆ ಕಾರಣ: ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್

ವಾರ್ತಾಭಾರತಿವಾರ್ತಾಭಾರತಿ12 March 2017 9:11 PM IST
share
ಅನಕ್ಷರತೆ, ಮಾಹಿತಿ ಕೊರತೆಯೇ ಕೊರಗರ ಶೋಷಣೆಗೆ ಕಾರಣ: ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್

ಉಡುಪಿ, ಮಾ.12: ಮೂಲ ನಿವಾಸಿ ಕೊರಗರ ಶೋಷಣೆಗೆ ಅನಕ್ಷರತೆ, ಮಾಹಿತಿಯ ಕೊರತೆಯೇ ಮುಖ್ಯ ಕಾರಣವಾಗಿದೆ. ಆದುದರಿಂದ ಅಗತ್ಯ ಶಿಕ್ಷಣ ಮತ್ತು ಮಾಹಿತಿ ನೀಡುವ ಮೂಲಕ ಇತರೆ ಸಮುದಾಯಗಳಂತೆ ಕೊರಗ ಸಮುದಾಯದ ಅಭಿವೃದ್ದಿ ಕೂಡ ಸಾಧ್ಯವಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದ್ದಾರೆ.

ಅಲೆವೂರು ಗ್ರಾಪಂ ವ್ಯಾಪ್ತಿಯ ಪದವು ಸಿದ್ಧಾರ್ಥ ನಗರದ ಕೊರಗರ ಕಾಲೋನಿಯಲ್ಲಿ ರವಿವಾರ ಗ್ರಾಪಂ ವತಿಯಿಂದ ನಡೆದ ಱಪಂಚಾಯತ್ ನಡಿಗೆ ಕೊರಗ ಸಮುದಾಯದೆಡೆಗೆ ಕಾರ್ಯಕ್ರಮದ ಸಮಾರೋಪ ಸಮಾ ರಂಭದಲ್ಲಿ ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡುತಿದ್ದರು.

 ಉಡುಪಿ ಜಿಲ್ಲೆಯು ಎಲ್ಲ ಕ್ಷೇತ್ರದಲ್ಲಿ ಮುಂದುವರೆದಿದ್ದು, ಜಿಲ್ಲೆಯ ಮಾವ ಸೂಚ್ಯಂಕ ವರದಿಯು ರಾಜ್ಯದಲ್ಲೆ ಪ್ರಥಮ ಸ್ಥಾನದಲ್ಲಿದೆ. ಆದರೆ ಜಿಲ್ಲೆಯ ಕೊರಗ ಸಮುದಾಯ ಮಾತ್ರ ಅಭಿವೃದ್ದಿಯಿಂದ ಹಿಂದೆ ಉಳಿದಿದ್ದಾರೆ. ಈ ಸಮುದಾಯದವರಿಗೆ ಸರಕಾರಿ ಕಾರ್ಯಕ್ರಮಗಳ ಕುರಿತು ಪೂರ್ಣ ಮಾಹಿತಿ ಮತ್ತು ಶಿಕ್ಷಣ ಸೌಲಭ್ಯ ಒದಗಿಸಬೇಕಾಗಿದೆ ಎಂದರು.

 ಕೊರಗ ಸಮುದಾಯದವರು ಮುಗ್ಧರಾಗಿರುವುದರಿಂದಲೇ ಅಜಲು ಪದ್ಧತಿ ಅಸ್ಪಶ್ಯತೆ ಎಂಬುದು ಇಂದಿಗೂ ಜೀವಂತ ಇದೆ. ಅದು ಮೇಲ್ನೋಟಕ್ಕೆ ಕಾರಣದಿದ್ದರೂ ಒಳಗಿಂದಲೇ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಕೊರಗರಲ್ಲಿ ಜಾಗೃತಿ ಮೂಡಿಸಬೇಕು ಮತ್ತು ಇತರ ಸಮುದಾಯಗಳ ಮನ ಪರಿವರ್ತನೆ ಮಾಡಬೇಕು ಎಂದರು.

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಪ್ರತಿಯೊಬ್ಬರೂ ಜಾಬ್ ಕಾರ್ಡ್ ಮಾಡಿಸಿಕೊಂಡು ವೈಯಕ್ತಿಕ ಮತ್ತು ಸಮುದಾಯಿಕ ಅಭಿವೃದ್ದಿ ಕಾರ್ಯ ಗಳನ್ನು ಮಾಡುವಂತೆ ಹಾಗೂ ಐಟಿಡಿಪಿ ಇಲಾಖೆ ಹಾಗೂ ಇತರೆ ಇಲಾಖೆ ಗಳಲ್ಲಿ ತಮಗೆ ಇರುವ ಇರುವ ಕಾರ್ಯಕ್ರಮಗಳ ಮಾಹಿತಿ ಪಡೆದು, ಸೌಲಭ್ಯಗಳ ಸದುಪಯೋಗ ಪಡೆಯಬೇಕು ಎಂದು ಅವರು ಹೇಳಿದರು.

ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಅಲೆವೂರು ಗ್ರಾಪಂ ಅಧ್ಯಕ್ಷ ಶ್ರೀಕಾಂತ್ ನಾಯಕ್, ತಾಪಂ ಸದಸ್ಯೆ ಬೇಬಿ ರಾಜೇಶ್, ನೀಲಾವರ ಮಹಿಷ ಮರ್ಧಿನಿ ದೇವಾಲಯದ ಆಡಳಿತ ಮೊಕ್ತೇಸರ ಸುಪ್ರಸಾದ್ ಶೆಟ್ಟಿ, ಪಿಡಿಓ ಬೂದ ಪೂಜಾರಿ, ಕೊರಗ ಮುಖಂಡರಾದ ರವಿ, ಲಕ್ಷ್ಮಿ , ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸುರೇಶ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X