Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಕೆ.ಸಿ.ರೋಡ್: ಬೃಹತ್ ಸ್ವಚ್ಛತಾ...

​ಕೆ.ಸಿ.ರೋಡ್: ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ12 March 2017 11:01 PM IST
share
​ಕೆ.ಸಿ.ರೋಡ್: ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಉಳ್ಳಾಲ, ಮಾ.12: ಪುಸ್ತಕದಿಂದ ಮಾತ್ರ ಜ್ಞಾನ ವೃದ್ಧಿಸಲು ಸಾಧ್ಯ. ಧರ್ವ ದೇವಾಲಯಗಳ ಬದಲು ಅಲ್ಲಲ್ಲಿ ಗ್ರಂಥಾಲಯಗಳ ಸ್ಥಾಪನೆಯಿಂದ ಮಕ್ಕಳು ಪುಸ್ತಕಗಳನ್ನು ಓದುವ ಮೂಲಕ ಜ್ಞಾನವನ್ನು ವೃದ್ಧಿಸುವುದರ ಜತೆಗೆ ಸಮಾಜಕ್ಕೆ ಪೂರಕವಾಗಿರುವ ವಾತಾವರಣದಲ್ಲಿ ಬೆಳೆದು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಮಾನವ ಹಕ್ಕುಗಳ ಹೋರಾಟಗಾರ ಹಾಗೂ ವಕೀಲ ದಿನೇಶ್ ಹೆಗ್ಡೆ ಉಳೇಪಾಡಿ ಹೇಳಿದರು.

ಅವರು ಯುನೈಟೆಡ್ ಸೋಶಿಯಲ್ ವೆಲ್ಫೇರ್ ಆರ್ಗನೈಝೇಶನ್ ಇದರ ವತಿಯಿಂದ ರವಿವಾರ ಕೆ.ಸಿ.ರೋಡ್ ನಲ್ಲಿ ನಡೆದ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಂಗಳೂರಿನ ಕುರಿತು ಹೊರಗಿನ ಜನತೆಗೆ ವಾತಾವರಣ ಸ್ಪಷ್ಟವಾಗಿಲ್ಲ, ಈ ನಿಟ್ಟಿನಲ್ಲಿ ಇಲ್ಲಿನ ಜನರಲ್ಲಿ ಮಾನಸಿಕ ಹಾಗೂ ಭೌತಿಕ ಸ್ವಚ್ಛತೆಯನ್ನು ಕಾಪಾಡುವ ಉದ್ದೇಶದಿಂದ ಚರ್ಚ್, ಮಸೀದಿ, ದೇವಸ್ಥಾನಗಳ ಸ್ಥಾಪನೆಯ ಬದಲು ಗ್ರಂಥಾಲಯಗಳ ಸ್ಥಾಪನೆಯಾಗಬೇಕಿದೆ ಎಂದ ಅವರು ಜನರಲ್ಲಿ ರಾಜಕೀಯ ಆಸಕ್ತಿಗಳು ಇರಬೇಕು. ಆದರೆ ರಾಜಕೀಯಪ್ರೇರಿತ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ತಮ್ಮ ಹಕ್ಕುಗಳನ್ನು ಪಡೆಯುವ ಜ್ಞಾನ ನಾಗರೀಕರಲ್ಲಿ ಇಲ್ಲವಾಗಿದೆ. ಸರಕಾರಿ ಪಾರದರ್ಶಕತೆಯನ್ನು ಚರ್ಚಿಸುವ ಮೂಲಕ ವೈಚಾರಿಕತೆಯ ಹಿನ್ನೆಲೆಯ ಆಧಾರದಲ್ಲಿ ಎಲ್ಲರೂ ನಡೆಯುವ ಅನಿವಾರ್ಯತೆ ಇದೆ ಎಂದರು.

ಯುನೈಟೆಡ್ ಸೋಶಿಯಲ್ ವೆಲ್ಫೇರ್ ಆರ್ಗನೈಝೇಶನ್ನಿನ ಉದ್ಘಾಟನೆಯನ್ನು ಅಕ್ಷರ ಸಂತ ಹರೇಕಳ ಹಾಜಬ್ಬ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆರ್ಗನೈಸೇಷನ್ನಿನ ಸಂಚಾಲಕ ಸಿದ್ಧೀಖ್ ತಲಪಾಡಿ ಮಾತನಾಡಿ ರಾಜಕೀಯ ರಹಿತವಾದ ಸಂಘಟನೆಯನ್ನು ಸ್ಥಾಪಿಸಲಾಗಿದೆ. ಸರಕಾರದ ವಿವಿಧ ಯೋಜನೆಗಳನ್ನು ಜನರಿಗೆ ಮುಟ್ಟಿಸಲು ಸಂಘಟನೆ ಶ್ರಮಿಸಲಿದೆ. ಇದರ ಸದಸ್ಯರು ಸೇರಿಕೊಂಡು ಹಿಂದೆ ತಲಪಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟಿಸಿದ ಹಿನ್ನೆಲೆಯಲ್ಲಿ ತಾತ್ಕಾಲಿಕ ಪರಿಹಾರವೂ ಸಿಕ್ಕಿದೆ. ಮುಂದೆಯೂ ಜನಪರ ಯೋಜನೆಗಳಿಗಾಗಿ ಶ್ರಮಿಸಲಿರುವ ಸಂಘಟನೆ ಸಾಮಾಜಿಕ ಭಾವನೆಯನ್ನು ಜನರಲ್ಲಿ ಮೂಡಿಸುವ ಕಾರ್ಯದಲ್ಲಿ ಮುಂದಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಅಕ್ಷರ ಸಂತ ಹರೇಕಳ ಹಾಜಬ್ಬ ಮತ್ತು ವಕೀಲ ದಿನೇಶ್ ಹೆಗ್ಡೆ ಉಳೇಪಾಡಿ ಅವರನ್ನು ಸನ್ಮಾನಿಸಲಾಯಿತು.

ಯುನೈಟೆಡ್ ಸೋಶಿಯಲ್ ವೆಲ್ಫೇರ್ ಆರ್ಗನೈಸೇಷನ್ನಿನ ಅಧ್ಯಕ್ಷ ಆಸೀಫ್ ಕೆ.ಸಿ.ನಗರ , ಕೆ.ಸಿ.ನಗರ ಜುಮಾ ಮಸೀದಿಯ ಅಧ್ಯಕ್ಷ ಅಬ್ದುಲ್ ಖಾದರ್ ಕೆ.ಸಿ.ನಗರ, ಉದ್ಯಮಿಗಳಾದ ಝೀನತ್ ಅಬ್ದುಲ್ ಖಾದರ್, ಅಶ್ಫಾಕ್ ಕೆ.ಸಿ.ರೋಡ್ , ಅಜ್ಜಿನಡ್ಕ ಜುಮಾಮಸೀದಿಯ ಅಹಮ್ಮದ್ ಅಜ್ಜಿನಡ್ಕ, ಯುಎಸ್‌ಡಬ್ಲ್ಯುಎಫ್‌ಒ ಇದರ ಮಜೀದ್ ತಲಪಾಡಿ, ಯುಎಸ್‌ಡಬ್ಲ್ಯುಎಫ್‌ಒ ಇದರ ಕೋಶಾಧಿಕಾರಿ ಫಾರುಕ್ ಕೆ.ಸಿ.ರೋಡ್, ಸಮಾಜ ಸೇವಕ ಐಸಿನ್ ತಲಪಾಡಿ, ಉದ್ಯಮಿ ರಹೀಂ.ಬಿ.ಎಂ.ಉಚ್ಚಿಲ್, ಡೈಮಂಡ್ ವೆಲ್ಫೇರ್ ಅಸೋಸಿಯೇಷನ್ನಿನ ಅಧ್ಯಕ್ಷ ಸಂಶುದ್ಧೀನ್ ಉಚ್ಚಿಲ, ಹಿರಿಯರಾದ ಮೊಯ್ದೀನ್ ಕುಂಞಿ ಕೆ.ಸಿ.ನಗರ, ಉದ್ಯಮಿ ಸಲೀಂ ಪಂಜಾಳ ಉಪಸ್ಥಿತರಿದ್ದರು.

ಶಬೀರ್ ಕೆ.ಸಿ.ರೋಡು ಕಾರ್ಯುಕ್ರಮ ನಿರ್ವಹಿಸಿದರು. ಶಾಫಿ ಕೆ.ಸಿ.ನಗರ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X