Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಣಿಪುರ: ಬಹುಮತಕ್ಕೆ ಬೇಕಾದ ಬೆಂಬಲ...

ಮಣಿಪುರ: ಬಹುಮತಕ್ಕೆ ಬೇಕಾದ ಬೆಂಬಲ ಬಾಚಿಕೊಂಡ ಬಿಜೆಪಿ

ವಾರ್ತಾಭಾರತಿವಾರ್ತಾಭಾರತಿ13 March 2017 9:29 AM IST
share
ಮಣಿಪುರ: ಬಹುಮತಕ್ಕೆ ಬೇಕಾದ ಬೆಂಬಲ ಬಾಚಿಕೊಂಡ ಬಿಜೆಪಿ

ಇಂಫಾಲ, ಮಾ.13: ಮಣಿಪುರದಲ್ಲೂ ಮೊದಲ ಬಾರಿಗೆ ಸರಕಾರ ರಚನೆಗೆ ಬಿಜೆಪಿ ಸಜ್ಜಾಗಿದ್ದು, ಬಹುಮತಕ್ಕೆ ಬೇಕಾದ ಬೆಂಬಲ ಬಾಚಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಪ್ರಾದೇಶಿಕ ಪಕ್ಷಗಳಬೆಂಬಲಪತ್ರವನ್ನು ರಾಜ್ಯಪಾಲೆ ನಜ್ಮಾ ಹೆಫ್ತುಲ್ಲಾ ಅವರಿಗೆ ಸಲ್ಲಿಸಲಾಗಿದ್ದು, 60 ಸದಸ್ಯಬಲದ ವಿಧಾನಸಭೆಯಲ್ಲಿ 32 ಶಾಸಕರ ಬೆಂಬಲವನ್ನು ಬಿಜೆಪಿ ಪ್ರದರ್ಶಿಸಿದೆ.

ಚುನಾವಣೆಯಲ್ಲಿ 21 ಸ್ಥಾನ ಗೆದ್ದಿದ್ದ ಬಿಜೆಪಿ, ನ್ಯಾಷನಲ್ ಪೀಪಲ್ಸ್ ಪಾರ್ಟಿಯ ನಾಲ್ವರು ಶಾಸಕರು, ನಾಗಾ ಪೀಪಲ್ಸ್ ಫ್ರಂಟ್‌ನ ನಾಲ್ಕು ಮಂದಿ ಹಾಗೂ ಎಲ್‌ಜೆಪಿಯ ಒಬ್ಬ ಸದಸ್ಯರ ಬೆಂಬಲ ಪಡೆದಿದೆ. ಏಕೈಕ ಪಕ್ಷೇತರ ಸದಸ್ಯ ಅಶಬ್ ಉದ್ದಿನ್ ಮತ್ತು ತೃಣಮೂಲ ಕಾಂಗ್ರೆಸ್ ಶಾಸಕ ರಬೀಂದ್ರೊಸಿಂಗ್ ಅವರೂ ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ.

ಆದಾಗ್ಯೂ ಹಾಲಿ ಮುಖ್ಯಮಂತ್ರಿ ಕಾಂಗ್ರೆಸ್‌ನ ಇಬ್ಬೊಬಿ ಸಿಂಗ್ ಅವರು ರಾಜ್ಯಪಾಲರನ್ನು ಭೇಟಿ ಮಾಡಿ, ಏಕೈಕ ದೊಡ್ಡ ಪಕ್ಷವಾಗಿರುವ ಕಾಂಗ್ರೆಸ್ ಪಕ್ಷಕ್ಕೇ ಸರ್ಕಾರ ರಚನೆಗೆ ಮೊದಲು ಆಹ್ವಾನ ನೀಡಬೇಕು ಎಂದು ಆಗ್ರಹಿಸಿದರು. ಸದನದಲ್ಲಿ ಬೆಂಬಲ ಸಾಬೀತುಪಡಿಸಲು ಪಕ್ಷಕ್ಕೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ರಾಜ್ಯಪಾಲರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗದಲ್ಲಿ ರಬಿಂದ್ರೊ ಸಿಂಗ್ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಪ್ರಹ್ಲಾದ್ ಸಿಂಗ್ ಪಟೇಲ್ ಸೇರಿದ್ದರು. ಕಾಂಗ್ರೆಸ್ ಶಾಸಕ ಶ್ಯಾಮ ಕುಮಾರ್ ಸಿಂಗ್ ಅವರು ಕೂಡಾ ಬಿಜೆಪಿ ನಿಯೋಗದಲ್ಲಿ ಇದ್ದುದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿಯನ್ನು ಬೆಂಬಲಿಸುವವರ ಪಟ್ಟಿಯಲ್ಲಿ ಅವರ ಹೆಸರು ಇಲ್ಲದಿದ್ದರೂ, ಅವರು ಬಿಜೆಪಿ ನಿಯೋಗದ ಜತೆ ತೆರಳಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಪಕ್ಷವನ್ನು ಒಡೆಯಲು ಬಿಜೆಪಿ ಸಂಚು ಹೂಡಿದೆ ಎಂಬ ಆರೋಪ ಕೇಳಿಬಂದಿದೆ.

ಪಕ್ಷೇತರ ಶಾಸಕ ಅಶಬ್ ಮತ್ತೆ ಗುವಾಹತಿಗೆ ಪ್ರಯಾಣ ಬೆಳೆಸಿದ್ದು, ಇದಕ್ಕೂ ಮುನ್ನ ಇಂಫಾಲ ವಿಮಾನ ನಿಲ್ದಾಣದಲ್ಲಿ ನಾಟಕೀಯ ಬೆಳವಣಿಗೆ ನಡೆಯಿತು. ಮಧ್ಯಾಹ್ನ ವೇಳೆ ಇಂಫಾಲಕ್ಕೆ ಆಗಮಿಸಿದ ಅಶಬ್ ಜತೆಗೆ ಕಾಂಗ್ರೆಸ್ ಸಚಿವ ಅಬ್ದುಲ್ ನಸೀರ್ ಇದ್ದರು. ಆದರೆ ಬಿಜೆಪಿ ಶಾಸಕ ವಿಶ್ವಜಿತ್ ಸಿಂಗ್ ಅವರು ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಸಿಬ್ಬಂದಿ ಜತೆ ಕಾಯುತ್ತಿದ್ದರು.

ಅಶಬ್ ಆಗಮಿಸಿದ ತಕ್ಷಣ ಸಿಐಎಸ್‌ಎಫ್ ಅಧಿಕಾರಿಗಳ ನೆರವಿನೊಂದಿಗೆ ಅವರನ್ನು ಕರೆದೊಯ್ದರು ಎಂದು ಅಬ್ದುಲ್ ನಸೀರ್ ಆಪಾದಿಸಿದ್ದಾರೆ. ಆದರೆ ವಿಶ್ವಜಿತ್ ಹಾಗೂ ನಸೀರ್ ನಡುವೆ ಸಂಘರ್ಷ ಏರ್ಪಟ್ಟ ಹಿನ್ನೆಲೆಯಲ್ಲಿ ಖಾಸಗಿ ವಿಮಾನದಲ್ಲಿ ಅಶಬ್ ತಮ್ಮ ಕ್ಷೇತ್ರಕ್ಕೆ ಮರಳಿದ್ದಾರೆ ಎಂದು ಸಿಐಎಸ್‌ಎಫ್ ಅಧಿಕಾರಿಗಳು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X