Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋವಾದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ,...

ಗೋವಾದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ, ಪಾರಿಕ್ಕರ್ ವಿಲನ್: ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ13 March 2017 11:36 AM IST
share
ಗೋವಾದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ, ಪಾರಿಕ್ಕರ್ ವಿಲನ್: ಕಾಂಗ್ರೆಸ್

 ಪಣಜಿ, ಮಾ.13: ‘‘ಬಿಜೆಪಿ ಗೋವಾದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ. ಎಲ್ಲ ಬೆಳವಣಿಗೆಯ ಹಿಂದೆ ಮನೋಹರ್ ಪಾರಿಕ್ಕರ್ ಖಳನಾಯಕನಾಗಿದ್ದಾರೆ. ಸರಕಾರ ರಚನೆಗೆ ಬಿಜೆಪಿ ಕುದುರೆ ವ್ಯಾಪಾರದಲ್ಲಿ ತೊಡಗಿದೆ. ಕೆಲವು ಶಾಸಕರಿಗೆ ಹಣ ಹಾಗೂ ಮಂತ್ರಿಗಿರಿ ಆಮಿಷ ನೀಡಿ ಪಕ್ಷಕ್ಕೆ ಸೆಳೆಯುತ್ತಿದೆ’’ ಎಂದು ಗೋವಾದಲ್ಲಿ ಕಾಂಗ್ರೆಸ್ ಉಸ್ತುವಾರಿ ನೋಡಿಕೊಳ್ಳುತ್ತಿರುವ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ.

 ‘‘ಗೋವಾದಲ್ಲಿ ಜನಾದೇಶದ ವಿರುದ್ಧ ಹಣಬಲ ಗೆಲುವು ಸಾಧಿಸಿದೆ. ರಾಜ್ಯದಲ್ಲಿ ನಮ್ಮ ಪಕ್ಷಕ್ಕೆ ಹೆಚ್ಚಿನ ಸೀಟುಗಳು ಲಭಿಸಿದ್ದರೂ ಸರಕಾರ ರಚಿಸುವಷ್ಟು ಬೆಂಬಲ ಒಟ್ಟುಗೂಡಿಸಲು ನಮ್ಮಿಂದ ಸಾಧ್ಯವಾಗದೇ ಇರುವುದಕ್ಕೆ ಗೋವಾ ಜನತೆಯಲ್ಲಿ ಕ್ಷಮೆ ಕೋರುವೆ. ಗೋವಾದಲ್ಲಿ ಕೋಮುವಾದಿ ಸಂಘಟನೆ ಹಾಗೂ ಹಣಬಲದ ರಾಜಕೀಯದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ’’ ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿರುವ ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ರಾಜಕೀಯ ಪಕ್ಷವೊಂದರ ಮುಖ್ಯಮಂತ್ರಿ, ಆರು ಸಚಿವರು ಸೋತ ಬಳಿಕವೂ ಸರಕಾರ ರಚನೆಗೆ ಮುಂದಾಗಿರುವುದನ್ನು ನಾನು ಎಲ್ಲಿಯೂ ನೋಡಿಲ್ಲ ಎಂದು ಬಿಜೆಪಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಸಿಂಗ್ ಮನೋಹರ್ ಪಾರಿಕ್ಕರ್ ಹಾಗೂ ಬಿಜೆಪಿಗೆ ಅಧಿಕಾರದ ದಾಹ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

‘‘ವಿಧಾನಸಭೆಯ ಚುನಾವಣೆಯಲ್ಲಿ ಎರಡನೆ ಸ್ಥಾನ ಪಡೆದಿರುವ ಪಕ್ಷಕ್ಕೆ ಸರಕಾರ ರಚಿಸುವ ಅಧಿಕಾರವಿಲ್ಲ. ಗೋವಾ ಹಾಗೂ ಮಣಿಪುರದಲ್ಲಿ ಬಿಜೆಪಿಯು ಹಣಬಲ, ತೋಳ್ಬಲ ಹಾಗೂ ಅಧಿಕಾರದ ದುರ್ಬಳಕೆ ಮಾಡಿಕೊಂಡು ಜನಾದೇಶದ ವಿರುದ್ಧ ಹೆಜ್ಜೆ ಇಟ್ಟಿದೆ’’ ಎಂದು ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಟ್ವೀಟ್ ಮಾಡಿದ್ದಾರೆ.

 ಕಾಂಗ್ರೆಸ್ ಪಕ್ಷ ಗೋವಾದಲ್ಲಿ 40 ಕ್ಷೇತ್ರಗಳ ಪೈಕಿ 17ರಲ್ಲಿ ಗೆಲುವು ಸಾಧಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಅಗತ್ಯದ ಬಹುಮತ ಪಡೆಯಲು ವಿಫಲವಾಗಿ ಸರಕಾರ ರಚನೆಯ ಸ್ಪರ್ಧೆಯಿಂದ ಹೊರ ನಡೆದಿದೆ. 13 ಸ್ಥಾನಗಳಲ್ಲಿ ಜಯ ಸಾಧಿಸಿರುವ ಬಿಜೆಪಿ ಪಕ್ಷ ಎಂಜಿಪಿಯ ಮೂವರು ಶಾಸಕರು, ಗೋವಾ ಫಾರ್ವರ್ಡ್‌ನ ಮೂವರು ಶಾಸಕರು ಹಾಗೂ ಇಬ್ಬರು ಪಕ್ಷೇತರ ಶಾಸಕರ ಬೆಂಬಲ ಪಡೆದು ಸರಕಾರ ರಚನೆಗೆ ಮುಂದಾಗಿದ್ದು, ಮನೋಹರ್ ಪಾರಿಕ್ಕರ್ ಮುಖ್ಯಮಂತ್ರಿಪಟ್ಟಕ್ಕೇರಲು ಸಜ್ಜಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X