Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಹಿರಿ ಲೇಖಕ ಇಟಗಿ ಈರಣ್ಣ ಇನ್ನಿಲ್ಲ...

ಶಾಹಿರಿ ಲೇಖಕ ಇಟಗಿ ಈರಣ್ಣ ಇನ್ನಿಲ್ಲ...

ವಾರ್ತಾಭಾರತಿವಾರ್ತಾಭಾರತಿ13 March 2017 11:37 AM IST
share
ಶಾಹಿರಿ ಲೇಖಕ ಇಟಗಿ ಈರಣ್ಣ ಇನ್ನಿಲ್ಲ...

ಶಿವಮೊಗ್ಗ, ಮಾ. 13: ಕನ್ನಡ ಸಾಹಿತ್ಯ ಲೋಕದಲ್ಲಿ ಶಾಹಿರಿ ಕವಿಎಂದೇ ಖ್ಯಾತವಾಗಿದ್ದ ಸಾಹಿತಿ ಪ್ರೊ. ಇಟಗಿ ಈರಣ್ಣರವರು ಭಾನುವಾರ ರಾತ್ರಿ ನಗರದ ಪ್ರಿಯದರ್ಶಿನಿ ಬಡಾವಣೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಇಬ್ಬರು ಪುತ್ರರು, ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಸೋಮವಾರ ಮಧ್ಯಾಹ್ನ ನಗರದ ಮಂಡ್ಲಿಯಲ್ಲಿರುವ ವೀರಶೈವ ರುದ್ರಭೂಮಿಯಲ್ಲಿ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ನಡೆಯಿತು. ಇದಕ್ಕೂ ಮುನ್ನ ಸ್ವಗೃಹದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿತ್ತು. ನೂರಾರು ಜನರು ಅಂತಿಮ ದರ್ಶನ ಪಡೆದರು.

 ಇಟಗಿ ಈರಣ್ಣ ಅವರ ನಿಧನಕ್ಕೆ ಸಾಹಿತಿಗಳು, ಸಾಹಿತ್ಯಾಸಕ್ತರು ಸೇರಿದಂತೆ ವಿವಿಧ ಸಂಘಸಂಸ್ಥೆಗಳು ತೀವ್ರ ಶೋಕ ವ್ಯಕ್ತಪಡಿಸಿವೆ. ಇಟಗಿ ಈರಣ್ಣರವರ ನಿಧನದಿಂದ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿಎಂದು ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಮತ್ತು ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಡಿ. ಮಂಜುನಾಥ್‌ರವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಸಾಧನೆ:

ಇಟಗಿ ಈರಣ್ಣರವರು ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದರು. ನಿವೃತ್ತಿಯ ನಂತರ ಶಿವಮೊಗ್ಗದಲ್ಲಿ ನೆಲೆಸಿದ್ದರು. ಸಾಹಿತ್ಯದ ವಿವಿಧ ವಿಭಾಗಗಳಲ್ಲಿ ಸಾಕಷ್ಟು ಜ್ಞಾನ ಹೊಂದಿದ್ದ ಇವರು ಹಳಗನ್ನಡ ಸಾಹಿತ್ಯದಲ್ಲಿ ಅಪಾರ ಅನುಭವ ಹೊಂದಿದ್ದರು.

ಶಾಹಿರಿ, ನಾಟಕ, ಅನುವಾದ ಸೇರಿದಂತೆ ಸಾಹಿತ್ಯದ ವಿವಿಧ ವಿಭಾಗಗಳಲ್ಲಿ ಹಲವು ಕೃತಿಗಳನ್ನು ಬರೆದಿದ್ದಾರೆ. ವಚನಾಚಲ, ಕನ್ನಡ ಶಾಯರಿ, ಕಬೀರನ ದೋಹೆಗಳು, ಯಹೂದಿ, ರಾವಿ ನದಿಯ ದಂಡೆಇವರ ಪ್ರಮುಖ ಸಾಹಿತ್ಯ ಕೃತಿಗಳಾಗಿವೆ.
 
ನಾಟಕಗಳ ನಿರ್ದೇಶನ ಕೂಡ ಮಾಡಿದ್ದರು. ಕನ್ನಡದ ಚಲನಚಿತ್ರ ಸ್ಪರ್ಶಾ ದಲ್ಲಿರುವ ಶಾಹಿರಿಗಳನ್ನು ಹಾಗೂ ಈ ಸಿನಿಮಾದಲ್ಲಿರುವ ಚಂದಕ್ಕಿಂತಚಂದಾ...ಎಂಬ ಪ್ರಸಿದ್ದ ಗೀತೆಯನ್ನು ಇವರು ಬರೆದುಕೊಟ್ಟಿದ್ದರು. ಉತ್ತಮ ಭಾಷಣಕಾರರಾಗಿದ್ದರು. ಹಳೇಗನ್ನಡದ ಶಾಸ್ತ್ರೀಯ ಗ್ರಂಥ ಶಬ್ಧಮಣಿದರ್ಪಣದ ಕೃತಿಯನ್ನು ಸರಳ ಕನ್ನಡದಲ್ಲಿ ರಚಿಸುವ ಮೂಲಕ ಸಾಹಿತ್ಯಾಸಕ್ತರ ಗಮನ ಸೆಳೆದಿದ್ದರು.

ಅನುವಾದ:

ಟಗಿ ಈರಣ್ಣರವರು ಅನುವಾದಕರಾಗಿಯೂ ಕೂಡ ಸಾಕಷ್ಟು ಹೆಸರು ಸಂಪಾದಿಸಿದ್ದರು. ಉರ್ದು ಮತ್ತು ಪರ್ಶಿಯನ್ ಭಾಷೆಯ ಭಾಷಾ ಜ್ಞಾನವನ್ನು ಅಪಾರವಾಗಿ ಹೊಂದಿದ್ದ ಅವರು, ಹಲವು ಶಾಹಿರಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದರು. ಈ ಮೂಲಕ ಶಾಹಿರಿ ಕವಿ ಎಂಬ ಖ್ಯಾತಿಗೆ ಪಾತ್ರವಾಗಿದ್ದರು.
ಕನ್ನಡದ ಪದ್ಯಗಳಲ್ಲಿ ಪರ್ಶಿಯನ್ ಮತ್ತು ಉರ್ದು ಭಾಷೆಯಲ್ಲಿರುವ ಕಾವ್ಯದ ಸೊಗಡನ್ನು ತಂದು ಒಂದು ಹೊಸ ಕಾವ್ಯಮಾರ್ಗವನ್ನೇ ಸೃಷ್ಟಿಸಿದ್ದರು. ಕನ್ನಡದಲ್ಲಿ ಗಜಲ್ ಕಟ್ಟುವ ಕೆಲಸವನ್ನು ಸುಮಾರು 20 ವರ್ಷಗಳಿಂದ ಅವರು ಮಾಡಿದ್ದಾರೆ. ಕನ್ನಡ ಸಾಹಿತ್ಯ ಲೋಕದಲ್ಲಿ ಇಂತಹದೊಂದು ಪ್ರಯತ್ನ ಬಹಳ ಅಪರೂಪವಾಗಿದೆ ಎಂದು ಸಾಹಿತಿಗಳು ಹೇಳುತ್ತಾರೆ.

ಕೆಲ ದಿನಗಳ ಹಿಂದಷ್ಟೆ ತಾಯಿ ನಿಧನರಾಗಿದ್ದರು:

ಇಟಗಿ ಈರಣ್ಣರವರ ತಾಯಿಯು ಮಾ. 8 ರಂದು ನಿಧನರಾಗಿದ್ದರು. ತಾಯಿಯ ನಿಧನದ ಹಿನ್ನೆಲೆಯಲ್ಲಿ ಭಾನುವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಅವರ ಮನೆಯಲ್ಲಿ ನಡೆದಿದ್ದವು. ಈ ಎಲ್ಲ ಕಾರ್ಯಕ್ರಮಗಳಲ್ಲಿಯೂ ಇಟಗಿ ಈರಣ್ಣರವರು ಸಕ್ರಿಯವಾಗಿ ಭಾಗವಹಿಸಿದ್ದರು. ಆದರೆ ರಾತ್ರಿ 9.30 ರ ಸುಮಾರಿಗೆ ಹೃದಯಾಘಾತಕ್ಕೆ ತುತ್ತಾಗಿದ್ದಾರೆ. ಎದುರು ಮನೆಯಲ್ಲಿಯೇ ವಾಸವಾಗಿದ್ದ ವೈದ್ಯರೊಬ್ಬರು ತಕ್ಷಣವೇ ಮನೆಗೆ ಆಗಮಿಸಿ ತಪಾಸಣೆ ನಡೆಸಿದ್ದು, ಅಷ್ಟರಲ್ಲಾಗಲೇ ಇಟಗಿ ಈರಣ್ಣರವರು ಇಹಲೋಕ ತ್ಯಜಿಸಿದ್ದರು ಎಂದು ಅವರ ಆಪ್ತ ಮೂಲಗಳು ಮಾಹಿತಿ ನೀಡುತ್ತವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X