Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಸ್ತೆ ಬದಿ ಮಗುವಿಗೆ ಜನ್ಮ ನೀಡಿದ ತಾಯಿ,...

ರಸ್ತೆ ಬದಿ ಮಗುವಿಗೆ ಜನ್ಮ ನೀಡಿದ ತಾಯಿ, ನೆರವಿಗೆ ಧಾವಿಸಿದ ಭಿಕ್ಷುಕ ಮಹಿಳೆ!

ವಾರ್ತಾಭಾರತಿವಾರ್ತಾಭಾರತಿ13 March 2017 3:18 PM IST
share
ರಸ್ತೆ ಬದಿ ಮಗುವಿಗೆ ಜನ್ಮ ನೀಡಿದ ತಾಯಿ, ನೆರವಿಗೆ ಧಾವಿಸಿದ ಭಿಕ್ಷುಕ ಮಹಿಳೆ!

ರಾಯಚೂರು, ಮಾ.11: ಮಾರ್ಗಮಧ್ಯದಲ್ಲಿ ಗರ್ಭಿಣಿ ಮಹಿಳೆಯೊಬ್ಬರು ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದಾಗ ಅಪರಿಚಿತ ಹಿರಿಯ ಮಹಿಳೆಯೊಬ್ಬರು ಸೂಲಗತ್ತಿಯಾಗಿ ಹೆರಿಗೆಯನ್ನು ಯಶಸ್ವಿಯಾಗಿ ನೆರವೇರಿಸಿದ ಘಟನೆ ಉತ್ತರ ಕರ್ನಾಟದಲ್ಲಿ ನಡೆದಿದೆ. ಈ ಘಟನೆ ಈಗಲೂ ಒಳ್ಳೆಯ ಜನರಿದ್ದಾರೆ ಎಂದು ತೋರಿಸಿಕೊಟ್ಟಿದೆ.

‘ಬಿಸಿಲ ನಾಡು’ ರಾಯಚೂರಿನಲ್ಲಿ ಎಲ್ಲಮ್ಮ ಎಂಬ ಹೆಸರಿನ ತುಂಬು ಗರ್ಭಿಣಿ ಮಾನ್ವಿ ತಾಲೂಕಿನ ಜನನಿಬಿಡ ಸ್ಥಳದಲ್ಲಿ ಹೆರಿಗೆ ಹೊಟ್ಟೆನೋವು ತಾಳಲಾರದೇ ಕುಸಿದುಬಿದ್ದಿದ್ದಾರೆ. ಮಹಿಳೆಯ ಜೊತೆಗಿದ್ದ ಪತಿಗೆ ಏನು ಮಾಡುವುದೆಂದು ಗೊತ್ತಾಗಲಿಲ್ಲ. ಆಗ ಅವರಿಗೆ ನೆರವಿಗೆ ಬಂದಿದ್ದು ಅಲ್ಲೆ ರಸ್ತೆಬದಿಯಲ್ಲಿ ಭಿಕ್ಷೆ ಬೀಡುತ್ತಿದ್ದ 60ರ ಪ್ರಾಯದ ಮಹಿಳೆ.

ರಸ್ತೆ ಬದಿಯಲ್ಲಿ ಸೂಲಗಿತ್ತಿಯಾಗಿ ಎಲ್ಲಮ್ಮಳ ನೆರವಿಗೆ ನಿಂತ ಅಜ್ಜಿ ಆರೋಗ್ಯಕರ ಹೆಣ್ಣುಮಗುವಿಗೆ ಜನ್ಮ ನೀಡಲು ನೆರವಾದರು. ‘‘ಇದು ಪಟ್ಟಣದಲ್ಲಿ ನಡೆದ ಅತ್ಯಂತ ಮನಕಲಕುವ ಘಟನೆ. ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ. ಉತ್ತರಕರ್ನಾಟಕದ ಜನರು ಅಪಘಾತದಂತಹ ಅಹಿತಕರ ಘಟನೆ ನಡೆದಾಗ ಅವರ ನೆರವಿಗೆ ಬರುವ ಬದಲು ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯಲು ಹೆಚ್ಚು ಆಸಕ್ತಿ ತೋರುತ್ತಾರೆ. ಎಲ್ಲಮ್ಮರ ನೆರವಿಗೆ ಬಂದಿರುವ ಭಿಕ್ಷುಕಿ ಎಲ್ಲರಿಗೂ ಮಾದರಿಯಾಗಿದ್ದಾರೆ’’ ಎಂದು ಮಾನ್ವಿ ತಾಲೂಕಿನ ಶಾಸಕ ಹಂಪಯ್ಯ ನಾಯಕ ಹೇಳಿದ್ದಾರೆ.

 ಸನ್ನಾ ಬಝಾರ್ ನಿವಾಸಿ ಎಲ್ಲಮ್ಮಾ ಹಾಗೂ ಕೃಷಿಕ ರಾಮಣ್ಣರಿಗೆ ಮೂವರು ಗಂಡುಮಕ್ಕಳಿದ್ದಾರೆ. 4ನೆ ಮಗುವಿನ ನಿರೀಕ್ಷೆಯಲ್ಲಿದ್ದ ಈ ದಂಪತಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆಗಾಗಿ ಬಂದಿದ್ದರು. ಎಲ್ಲಮ್ಮನಿಗೆ ರಕ್ಷಹೀನತೆ ಇರುವ ಕಾರಣ ರಾಯಚೂರು ವೈದ್ಯಕೀಯ ಶಿಕ್ಷಣ ಸಂಸ್ಥೆ(ರಿಮ್ಸ್)ಗೆ ತೆರಳುವಂತೆ ವೈದ್ಯರು ಸೂಚಿಸಿದ್ದರು. ವೈದ್ಯರ ಸೂಚನೆಯಲ್ಲಿ ರಾಯಚೂರಿಗೆ ತೆರಳಿ ಮಾನ್ವಿಗೆ ವಾಪಸಾದ ಬಳಿಕ ಬೆಳಗ್ಗೆ 9:30ಕ್ಕೆ ಈ ಘಟನೆ ನಡೆದಿದೆ.

ಬಸ್‌ನಿಂದ ಇಳಿದ ತಕ್ಷಣ ಎಲ್ಲಮ್ಮರಿಗೆ ನಿಲ್ಲಲು ಸಾಧ್ಯವಾಗದೇ ಕುಸಿದುಬಿದ್ದರು. ರಕ್ತ ಸ್ರಾವ ಉಂಟಾದಾಗ ಪತಿಗೆ ಏನು ಮಾಡುವುದೆಂದು ತೋಚಲಿಲ್ಲ. ಆಗ 60ರ ಪ್ರಾಯದ ಭಿಕ್ಷುಕಿಯೊಬ್ಬರು ಎಲ್ಲಮ್ಮರ ನೆರವಿಗೆ ಧಾವಿಸಿದರು. ತಕ್ಷಣವೇ ಕಾರ್ಯಪ್ರವೃತ್ತರಾದ ಅಜ್ಜಿ ಸೂಲಗಿತ್ತಿಯ ಪಾತ್ರವಹಿಸಿದರು. ಅಕ್ಕಪಕ್ಕದ ಇತರ ಮಹಿಳೆಯರು ಅಜ್ಜಿಗೆ ನೆರವಾದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಎಲ್ಲಮ್ಮರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲಮ್ಮರ ನೆರವಿಗೆ ಬಂದಿದ್ದ ಆ ಅಪರಿಚಿತ ಅಜ್ಜಿ ಜನಜಂಗುಳಿಯ ಮಧ್ಯೆ ಎಲ್ಲಿಗೆ ಹೋದರೆಂದು ಗೊತ್ತಾಗಲಿಲ್ಲ. ಎಲ್ಲಮ್ಮರ ನೆರವಿಗೆ ಬಂದವರು ಶ್ರೀಮಂತರಲ್ಲ. ಅವರು ಹೃದಯವಂತರು. ಈಗಲೂ ಒಳ್ಳೆಯ ಜನರಿದ್ದಾರೆ ಎನ್ನಲು ಈ ಘಟನೆ ಸಾಕ್ಷಿ’’ ಎಂದು ಶಾಸಕ ಹಂಪಯ್ಯ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X