Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋವಾದ ಭಾವಿ ಮುಖ್ಯಮಂತ್ರಿ ಪಾರಿಕ್ಕರ್‌ಗೆ...

ಗೋವಾದ ಭಾವಿ ಮುಖ್ಯಮಂತ್ರಿ ಪಾರಿಕ್ಕರ್‌ಗೆ ಕ್ಷೇತ್ರವೇ ಇಲ್ಲ

ಪಕ್ಷದ ಶಾಸಕನಿಂದಲೇ ಅಪಸ್ವರ

ವಾರ್ತಾಭಾರತಿವಾರ್ತಾಭಾರತಿ13 March 2017 4:34 PM IST
share
ಗೋವಾದ ಭಾವಿ ಮುಖ್ಯಮಂತ್ರಿ ಪಾರಿಕ್ಕರ್‌ಗೆ ಕ್ಷೇತ್ರವೇ ಇಲ್ಲ

ಪಣಜಿ,ಮಾ.13: ಗೋವಾದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಮನೋಹರ ಪಾರಿಕ್ಕರ್ ಅವರು ಮುಖ್ಯಮಂತ್ರಿ ಹುದ್ದೆಗೇರಲು ರಂಗ ಸಜ್ಜುಗೊಳ್ಳುತ್ತಿದೆ. ಆದರೆ ಆತಂಕದ ಸನ್ನಿವೇಶವೊಂದು ಉದ್ಭವಿಸಿದೆ.

ಮೂಲಗಳು ತಿಳಿಸಿರುವಂತೆ ಹಾಲಿ ಸಂಸದರಾಗಿರುವ ಪಾರಿಕ್ಕರ್ ಮಾಪುಸಾ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಲಿದ್ದಾರೆ. ಗೋವಾ ಉಪಮುಖ್ಯಮಂತ್ರಿಯಾಗಿದ್ದು, ಮಾಪುಸಾದಿಂದ ಗೆದ್ದಿರುವ ಫ್ರಾನ್ಸಿಸ್ ಡಿಸೋಝಾ ಅವರಿಗೆ ಕ್ಷೇತ್ರವನ್ನು ತೆರವುಗೊಳಿಸುವಂತೆ ಪಕ್ಷವು ನಿರ್ದೇಶ ನೀಡಿದೆಯಾದರೂ ಅವರು ಅದನ್ನು ಪಾಲಿಸುವ ಬಗ್ಗೆ ಶಂಕೆಗಳಿವೆ.

ರವಿವಾರ ಸುದ್ದಿಗೋಷ್ಠಿಯಲ್ಲಿ ಪಾರಿಕ್ಕರ್‌ಗೆ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದೀರಿ ಎಂದು ಸುದ್ದಿಗಾರರು ಪ್ರಶ್ನಿಸಿದ್ದರು. ಸ್ಪಷ್ಟ ಉತ್ತರ ನೀಡುವುದರಿಂದ ನುಣುಚಿಕೊಂಡಿದ್ದ ಅವರು,ಆ ಕುರಿತು ನಂತರ ಮಾತನಾಡುತ್ತೇನೆ ಎಂದಷ್ಟೇ ಹೇಳಿದ್ದರು.

   ಇದೀಗ ಪಾರಿಕ್ಕರ್‌ಗೆ ಕ್ಷೇತ್ರ ಒದಗಿಸುವ ವಿಷಯ ಪಕ್ಷದಲ್ಲಿ ಸ್ವಲ್ಪ ಮಟ್ಟಿಗೆ ಸಂಘರ್ಷಕ್ಕೆ ಕಾರಣವಾಗಬಹುದು. ಪಾರಿಕ್ಕರ್ ಈ ಹಿಂದೆ ಗೋವಾದ ಮುಖ್ಯಮಂತ್ರಿಯಾಗಿ ದ್ದಾಗಲೂ ಡಿಸೋಜಾ ಉಪಮುಖ್ಯಮಂತ್ರಿಯಾಗಿದ್ದರು. ಆದರೆ 2014ರಲ್ಲಿ ಪಾರಿಕ್ಕರ್ ದೇಶದ ರಕ್ಷಣಾ ಸಚಿವರಾಗಲು ಕೇಂದ್ರಕ್ಕೆ ತೆರಳಿದಾಗ ಡಿಸೋಝಾಗೆ ಬಡ್ತಿ ಸಿಕ್ಕಿರಲಿಲ್ಲ, ಬದಲಿಗೆ ಲಕ್ಷ್ಮೀಕಾಂತ ಪಾರ್ಸೇಕರ್ ಅವರನ್ನು ಮುಖ್ಯಮಂತ್ರಿಯಾಗಿ ಮಾಡಲಾಗಿತ್ತು. ಈ ಬಗ್ಗೆ ಡಿಸೋಝಾ ಆಗ ಅಸಮಾಧಾನದ ಸಂಕೇತಗಳನ್ನು ವ್ಯಕ್ತಪಡಿಸಿದ್ದರು. ಗೋವಾದಲ್ಲಿ ತಾನು ಬಿಜೆಪಿಯ ನಮ್ರ ಸೇವಕನಾಗಿದ್ದೇನೆ ಮತ್ತು ಬಹಳ ಕಾಲದಿಂದ ಮಾಪುಸಾದಿಂದ ಪಕ್ಷದ ಶಾಸಕನಾಗಿದ್ದೇನೆ ಎಂದು ಅವರು ಬೆಟ್ಟು ಮಾಡಿದ್ದರು.

ಇದು ಅವರು ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ ಎನ್ನುವುದನ್ನು ಸ್ಪಷ್ಟವಾಗಿ ಸೂಚಿಸುತ್ತಿದೆ. ಅವರು ಮಾಪುಸಾ ಕ್ಷೇತ್ರವನ್ನು ತೆರವುಗೊಳಿಸಲು ನಿರಾಕರಿಸಿದರೆ ಪಾರಿಕ್ಕರ್ ಬೇರೆ ಪರ್ಯಾಯಗಳನ್ನು ಹುಡುಕಿಕೊಳ್ಳಬೇಕಾಗುತ್ತದೆ.

ಗೋವಾ ರಾಜ್ಯಪಾಲರಾದ ಮೃದುಲಾ ಸಿನ್ಹಾ ಅವರು ಪಾರಿಕ್ಕರ್ ಅವರಿಗೆ ರಾಜ್ಯದಲ್ಲಿ ನೂತನ ಸರಕಾರ ರಚನೆಗೆ ಆಹ್ವಾನಿಸಿದ್ದು, ಸದನದಲ್ಲಿ ಬಹುಮತ ಸಾಬೀತುಗೊಳಿಸಲು 15 ದಿನಗಳ ಗಡುವು ನೀಡಿದ್ದಾರೆ. ಪಕ್ಷದ 13 ಶಾಸಕರ ಜೊತೆಗೆ ತನ್ನನ್ನು ಬೆಂಬಲಿಸಿರುವ ಇತರ ಎಂಟು ಶಾಸಕರ ಪಟ್ಟಿಯನ್ನು ಪಾರಿಕ್ಕರ್ ರಾಜ್ಯಪಾಲರಿಗೆ ಸಲ್ಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X