Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಹಿಳೆಯ ಮೇಲಿನ ದೌರ್ಜನ್ಯ ರಾತ್ರಿ...

ಮಹಿಳೆಯ ಮೇಲಿನ ದೌರ್ಜನ್ಯ ರಾತ್ರಿ ಮಾತ್ರವಲ್ಲ ಹಗಲೂ ನಡೆಯುತ್ತಿವೆ: ಡಾ.ಶೈಲಾ

ವಾರ್ತಾಭಾರತಿವಾರ್ತಾಭಾರತಿ13 March 2017 7:33 PM IST
share
ಮಹಿಳೆಯ ಮೇಲಿನ ದೌರ್ಜನ್ಯ ರಾತ್ರಿ ಮಾತ್ರವಲ್ಲ ಹಗಲೂ ನಡೆಯುತ್ತಿವೆ: ಡಾ.ಶೈಲಾ

ಮಂಗಳೂರು, ಮಾ.13: ಹೆಣ್ಣು ಮಕ್ಕಳನ್ನು ಭಯದ ವಾತಾವರಣದಲ್ಲಿ ಬೆಳೆಸುತ್ತಿದ್ದೇವೆ. ಆಕೆ ಹೊರಗಡೆ ಹೋದಾಗ ಅತ್ಯಾಚಾರ ಆದೀತೆಂಬ ಭಯವನ್ನು ಹುಟ್ಟಿಸಿ ಮನೆಯಲ್ಲೇ ನಿರ್ಬಂಧಿಸಲಾಗುತ್ತಿದೆ. ರಾತ್ರಿಯಂತೂ ಹೊರಗೆ ಕಳುಹಿಸುವುದಿಲ್ಲ. ಆದರೆ ಮಹಿಳೆಯ ಮೇಲಿನ ದೌರ್ಜನ್ಯ ಕೇವಲ ರಾತ್ರಿ ಮಾತ್ರವಲ್ಲ, ಹಗಲೂ ನಡೆಯುತ್ತಿವೆ ಎಂದು ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ಅಧ್ಯಕ್ಷೆ ಹಾಗೂ ಪ್ರಾಧ್ಯಾಪಕಿ ಡಾ. ಶೈಲಾ ಯು.ಅಭಿಪ್ರಾಯಪಟ್ಟರು.

ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ದ.ಕ.ಜಿಲ್ಲಾ ಸಮಿತಿಯು ನಗರದ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಸಮಾನತೆಗಾಗಿ ಮಹಿಳೆಯರು ನಡೆಸುವ ಹೋರಾಟವು ಕುಟುಂಬದೊಳಗೆ ಅಭ್ಯಾಸವಾಗಬೇಕು. ಮನೆಯ ಗಂಡಸರು ಸಹಕಾರ ನೀಡದೆ ಹೋದರೆ ಸಮಾನತೆ ಬೆಳೆಸಲು ಸಾಧ್ಯವಿಲ್ಲ. ಇದಕ್ಕಾಗಿ ಗಂಡಸರು ಮಕ್ಕಳಿಗೂ ಗೃಹಕೃತ್ಯದ ಕೆಲಸ ಹಂಚಿಕೆಯಾಗಬೇಕು ಎಂದು ಹೇಳಿದರು.

ಮಹಿಳೆಯರು ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ಬಲಗೊಳಿಸಲು ಉದ್ಯೋಗಕ್ಕೆ ಹೋಗುವುದು ಅನಿವಾರ್ಯವಾಗಿದೆ. ಹಾಗಿದ್ದರೂ ಮನೆಯ ಒಳಗಿನ ಆಕೆಯ ಕೆಲಸದ ಹೊರೆ ಕಡಿಮೆಯಾಗಿಲ್ಲ. ಅಲ್ಲದೆ ಮನೆಯ ಗೌರವವನ್ನು ಕಾಪಾಡುವುದನ್ನು ಅವಳು ನಿರ್ವಹಿಸುತ್ತಿದ್ದಾಳೆ. ಗಂಡಸರಿಗೆ ಸಣ್ಣಪುಟ್ಟ ಅಸೌಖ್ಯವಾದರೂ ಹೆಂಗಸರು ಕಾಳಜಿ ವಹಿಸುತ್ತಾರೆ. ಆದರೆ ತಮಗೇ ಅಸೌಖ್ಯ ಆದಾಗ ಅವರು ನಿರ್ಲಕ್ಷ ವಹಿಸುತ್ತಾರೆ. ಗಂಡು, ಹೆಣ್ಣು ಮಕ್ಕಳನ್ನು ಒಂದೇ ರೀತಿಯಲ್ಲಿ ಬೆಳೆಸಲು, ಹೆಂಗಸರು ಗಂಡಸರ ಮನೋಭಾವವನ್ನು ಬದಲಾಯಿಸಬೇಕು ಎಂದು ಡಾ. ಶೈಲಾ ಯು. ಹೇಳಿದರು.

ಈವತ್ತೂ ಕೆಲವು ಹೆಣ್ಣು ಮಕ್ಕಳು ಒಬ್ಬಂಟಿಗರಾಗಿ ಗೌರವಯುತ ಜೀವನ ನಡೆಸುತ್ತಿದ್ದಾರೆ. ಮನೆಗಳಿಂದ ಓಡಿಹೋಗುವ ಹೆಣ್ಣು ತನ್ನ ಮಕ್ಕಳನ್ನು ಕರೆದುಕೊಂಡೇ ಹೋಗುವುದನ್ನು ನೋಡುತ್ತೇವೆ. ಆಕೆ ತನ್ನ ಜವಾಬ್ದಾರಿಯಿಂದ ಎಂದೂ ತಪ್ಪಿಸಿಕೊಂಡಿಲ್ಲ. ಆದರೆ ಗಂಡಸು ಹಾಗೆ ನಡೆದುಕೊಳ್ಳುವುದಿಲ್ಲ. ವಯಸ್ಸಾದ ಹಿರಿಯರನ್ನು ನೋಡಿಕೊಳ್ಳುವವರು ಮಹಿಳೆಯರೇ ಆಗಿದ್ದಾರೆ. ಇವತ್ತು ಹೆಣ್ಣು ಭ್ರೂಣಹತ್ಯೆ ಹೆಚ್ಚಿವೆ. ವರದಕ್ಷಿಣೆ ತೋರಿಕೆಗೆ ಇಲ್ಲದಿದ್ದಾಗಲೂ ಬೇರೆ ಸ್ವರೂಪದಲ್ಲಿ ಕಾರ್ಯಾಚರಿಸುತ್ತಿದೆ. ಹೆಣ್ಣು ತನ್ನ ಸ್ವಾತಂತ್ರ್ಯವನ್ನು ಸಂಘಟಿತ ಹೋರಾಟದ ಮೂಲಕ ಉಳಿಸಿಕೊಳ್ಳುವುದಲ್ಲದೆ, ಶಿಸ್ತು ಮತ್ತು ಹೊಣೆಗಾರಿಕೆಯೊಂದಿಗೆ ಗಂಡಸರನ್ನು ಬದಲಾಯಿಸಬಲ್ಲರು ಎಂದು ಡಾ. ಶೈಲಾ ಯು. ತಿಳಿಸಿದರು.

ಜನವಾದಿ ಮಹಿಳಾ ಸಂಘಟನೆಯ ದ.ಕ.ಜಿಲ್ಲಾಧ್ಯಕ್ಷೆ ಜಯಂತಿ ಬಿ.ಶೆಟ್ಟಿಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಘಟನೆಯ ಜಿಲ್ಲಾ ಉಪಾಧ್ಯಕ್ಷರಾದ ಹೇಮಲತಾ, ಪದ್ಮಾವತಿ ಶೆಟ್ಟಿ, ರಾಜ್ಯ ಸಮಿತಿ ಜೊತೆ ಕಾರ್ಯದರ್ಶಿ ಕಿರಣ ಪ್ರಭಾ ಮತ್ತು ಸಮುದಾಯ ಸಾಂಸ್ಕೃತಿಕ ಸಂಘಟನೆಯ ವಾಸುದೇವ ಉಚ್ಚಿಲ ಮಾತನಾಡಿದರು.

ಜಿಲ್ಲಾ ಸಮಿತಿ ಕಾರ್ಯದರ್ಶಿ ರಾಧಾ ಮೂಡುಬಿದಿರೆ ಸ್ವಾಗತಿಸಿದರು. ಕೋಶಾಧಿಕಾರಿ ವಿಲಾಸಿನಿ ತೊಕ್ಕೋಟು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X