Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಿರಿಯ: 2016ರಲ್ಲಿ ಮಕ್ಕಳ ವಿರುದ್ಧ ಭೀಕರ...

ಸಿರಿಯ: 2016ರಲ್ಲಿ ಮಕ್ಕಳ ವಿರುದ್ಧ ಭೀಕರ ಹಿಂಸಾಚಾರ - ಯನಿಸೆಫ್

ವಾರ್ತಾಭಾರತಿವಾರ್ತಾಭಾರತಿ13 March 2017 7:48 PM IST
share
ಸಿರಿಯ: 2016ರಲ್ಲಿ ಮಕ್ಕಳ ವಿರುದ್ಧ ಭೀಕರ ಹಿಂಸಾಚಾರ - ಯನಿಸೆಫ್

ಬೆರೂತ್, ಮಾ. 13: ಯುದ್ಧಪೀಡಿತ ಸಿರಿಯದಲ್ಲಿ ಮಕ್ಕಳ ವಿರುದ್ಧದ ಹಿಂಸಾಚಾರ 2016ರಲ್ಲಿ ಅತ್ಯಂತ ತೀವ್ರವಾಗಿತ್ತು ಎಂದು ವಿಶ್ವಸಂಸ್ಥೆಯ ಮಕ್ಕಳ ಸಂಸ್ಥೆ ಯುನಿಸೆಫ್ ಸೋಮವಾರ ಹೇಳಿದೆ. ಅಲ್ಲಿನ ಸಂಘರ್ಷ ಏಳನೆ ವರ್ಷಕ್ಕೆ ಕಾಲಿರಿಸುತ್ತಿದೆ.

ಮಕ್ಕಳನ್ನು ಕೊಂದ, ಅಂಗ ಊನಗೊಳಿಸಿದ ಅಥವಾ ಸಶಸ್ತ್ರ ಗುಂಪುಗಳಿಗೆ ಅವರನ್ನು ನೇಮಿಸಿದ ಪ್ರಕರಣಗಳು ಕಳೆದ ವರ್ಷ ಅತ್ಯಧಿಕವಾಗಿತ್ತು ಎಂದು ಅದು ಹೇಳಿದೆ.

‘‘ಮಕ್ಕಳು ಅನುಭವಿಸಿದ ವೇದನೆ ಹಿಂದೆಂದೂ ಇರದಷ್ಟಿತ್ತು. ಸಿರಿಯದಲ್ಲಿ ಲಕ್ಷಾಂತರ ಮಕ್ಕಳು ಪ್ರತಿ ದಿನವೆಂಬಂತೆ ದಾಳಿಗೊಳಗಾಗುತ್ತಿದ್ದಾರೆ. ಅವರ ಬದುಕು ನಿರ್ನಾಮವಾಗುತ್ತಿದೆ’’ ಎಂದು ಯುನಿಸೆಫ್‌ನ ಪ್ರಾದೇಶಿಕ ನಿರ್ದೇಶಕ ಗೀರ್ಟ್ ಕ್ಯಾಪಲೇರ್ ಹೇಳಿದರು.

‘‘ಪ್ರತಿ ಮಕ್ಕಳ ಆರೋಗ್ಯ, ಸುರಕ್ಷತೆ ಮತ್ತು ಭವಿಷ್ಯದ ಮೇಲೆ ದಾಳಿಗಳಾಗುತ್ತಿದ್ದು, ಅವುಗಳ ಭೀಕರ ನೆನಪುಗಳು ಜೀವನಪರ್ಯಂತ ಕಾಡಲಿವೆ’’ ಸಿರಿಯದ ಮಧ್ಯ ಭಾಗದ ನಗರ ಹಾಮ್ಸ್‌ನಲ್ಲಿ ಮಾತನಾಡಿದ ಅವರು ಹೇಳಿದರು.

ಕಳೆದ ವರ್ಷ ಸಿರಿಯದಲ್ಲಿ ಕನಿಷ್ಠ 652 ಮಕ್ಕಳು ಹಿಂಸೆಗೆ ಗುರಿಯಾಗಿ ಮೃತಪಟ್ಟಿದ್ದಾರೆ ಎಂಬುದಾಗಿ ಯುನಿಸೆಫ್ ದಾಖಲಿಸಿದೆ. ಇದು 2015ರ ಸಂಖ್ಯೆಗೆ ಹೋಲಿಸಿದರೆ 20 ಶೇಕಡದಷ್ಟು ಹೆಚ್ಚಾಗಿದೆ. ಅವರ ಪೈಕಿ 250ಕ್ಕೂ ಅಧಿಕ ಮಂದಿ ಶಾಲೆಯೊಂದರ ಒಳಗೆ ಅಥವಾ ಸಮೀಪದಲ್ಲಿ ಮೃತಪಟ್ಟಿದ್ದಾರೆ.

ಕನಿಷ್ಠ 850 ಮಕ್ಕಳನ್ನು ಹೋರಾಟದಲ್ಲಿ ಬಳಸಲಾಗಿದೆ. ಅವರನ್ನು ಮರಣದಂಡನೆ ಶಿಕ್ಷೆ ನೀಡುವವರು ಅಥವಾ ಆತ್ಮಹತ್ಯಾ ಬಾಂಬರ್‌ಗಳನ್ನಾಗಿ ಉಪಯೋಗಿಸಲಾಗುತ್ತಿದೆ. ಇದು 2015ರ ಸಂಖ್ಯೆಯ ದುಪ್ಪಟ್ಟಿಗಿಂತಲೂ ಹೆಚ್ಚಾಗಿದೆ.

6 ವರ್ಷದ ಸಂಘರ್ಷದಲ್ಲಿ 3.1 ಲಕ್ಷ ಸಾವು

ಅಧ್ಯಕ್ಷ ಬಶರ್ ಅಲ್ ಅಸದ್ ವಿರುದ್ಧ ಪ್ರತಿಪಕ್ಷಗಳು ಬಂಡಾಯ ಘೋಷಿಸುವುದರೊಂದಿಗೆ ಸಿರಿಯ ಸಂಘಷ 2011 ಮಾರ್ಚ್‌ನಲ್ಲಿ ಆರಂಭಗೊಂಡಿದೆ. 3.1 ಲಕ್ಷಕ್ಕಿಂತಲೂ ಅಧಿಕ ಮಂದಿ ಸಂಘರ್ಷದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಲಕ್ಷಾಂತರ ಮಂದಿ ಮನೆಗಳನ್ನು ತೊರೆದು ಪಲಾಯನಗೈದಿದ್ದಾರೆ.

ಸುಮಾರು 23 ಲಕ್ಷ ಸಿರಿಯನ್ ಮಕ್ಕಳು ಟರ್ಕಿಯಲ್ಲಿ ನಿರಾಶ್ರಿತರಾಗಿ ಬದುಕುತ್ತಿದ್ದಾರೆ ಎಂದು ಯುನಿಸೆಫ್ ಹೇಳಿದೆ.
2.8 ಲಕ್ಷ ಮಕ್ಕಳು ಸಿರಿಯದಾದ್ಯಂತ ಅಹಾರ ಮತ್ತು ಔಷಧಿಯಿಲ್ಲದೆ ಭೀತಿಯಲ್ಲೇ ದಿನಗಳನ್ನು ಕಳೆಯುತ್ತಿದ್ದಾರೆ ಎಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X