Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮದುವೆ ಜಾಹೀರಾತು ನೀಡಿ ಲೈಂಗಿಕ ಕಿರುಕುಳ:...

ಮದುವೆ ಜಾಹೀರಾತು ನೀಡಿ ಲೈಂಗಿಕ ಕಿರುಕುಳ: ಆರೋಪಿ ಬಂಧನ

ವಾರ್ತಾಭಾರತಿವಾರ್ತಾಭಾರತಿ14 March 2017 1:54 PM IST
share
ಮದುವೆ ಜಾಹೀರಾತು ನೀಡಿ ಲೈಂಗಿಕ ಕಿರುಕುಳ: ಆರೋಪಿ ಬಂಧನ

 ಕೊಚ್ಚಿ,ಮಾ. 14: ಮರು ವಿವಾಹ ಜಾಹಿರಾತು ನೀಡಿ ಹಲವಾರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿ, ಹಣ ಮತ್ತು ಚಿನ್ನವನ್ನು ಅಪಹರಿಸುವ ವ್ಯಕ್ತಿಯನ್ನುಪೊಲೀಸರು ಬಂಧಿಸಿದ್ದಾರೆ. ಪಾಲಕ್ಕಾಡ್ ವಲ್ಲಪ್ಪುಯ ಕಿಯಕ್ಕೇಪ್ಪಾಟ್ಟುತೊಡಿ ಮಜೀದ್ (42) ಪೊಲೀಸರ ಬಲೆಗೆ ಬಿದ್ದ ವ್ಯಕ್ತಿಯಾಗಿದ್ದಾನೆ. ಈಗ ಕೋಟ್ಟಕ್ಕಲ್ ವೆಟ್ಟಿಚ್ಚಿರದಲ್ಲಿ ವಾಸವಿರುವ ಈತನ ವಿರುದ್ಧ ಚೇರ್ತಲದ ಮಹಿಳೆ ನೀಡಿದ ದೂರಿನ ಪ್ರಕಾರ ಪೊಲೀಸರು ಬಂಧಿಸಿದ್ದಾರೆ. ಮಲಪ್ಪುರಂ,ಪೆರಿಂದಲ್ಮಣ್ಣ, ಕೋಟ್ಟಕ್ಕಲ್, ನಿಲಂಬೂರ್, ಕೋಟ್ಟಯಂ, ಮುಳಂದುರ್ತಿ ಮುಂತಾದ ಠಾಣೆಗಳಲ್ಲಿ ಈತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಈತ ಪೆರುಂಬಾವೂರ್, ಕೋಟ್ಟಕ್ಕಲ್, ಚಿರಯಿನ್‌ಕೀಯ್, ಕಟುತುರ್ತಿ ಇಡಪ್ಪಳ್ಳಿ ಮುಂತಾದಲ್ಲಿ ಇದೇ ರೀತಿಯ ವಂಚನೆಯನ್ನು ನಡೆಸಿದ್ದಾನೆಂದು ಪೊಲೀಸರಿಗೆ ಮಾಹಿತಿ ಲಭಿಸಿದೆ.

 ಚೇರ್ತಲದ ಮಹಿಳೆಯನ್ನು ಮಲಪ್ಪುರಂ ಅಂಙಡಿ ಪುರಂ ಲಾಡ್ಜ್‌ಗೆ ಕರೆತಂದು ಲೈಂಗಿಕ ಕಿರುಕುಳ ನೀಡಿ ಚಿನ್ನಾಭರಣವನ್ನು ಅಪಹರಿಸಿದ ಪ್ರಕರಣದಲ್ಲಿ ಈತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಕರೆತಂದ ಮಹಿಳೆಯ ಪತಿ ತನ್ನ ಪತ್ನಿ ಕಾಣೆಯಾಗಿದ್ದಾಳೆಂದು ದೂರು ನೀಡಿದ್ದರು. ಪೊಲೀಸರು ತನ್ನನ್ನು ಹುಡುಕಾಡುತ್ತಿದ್ದಾರೆಂದುಗೊತ್ತಾದ ಮಹಿಳೆ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ಆದರೆ ಪತಿಯೊಂದಿಗೆ ಹೋಗಲು ಮಹಿಳೆ ನಿರಾಕರಿಸಿದ್ದರು. ಪತಿಯ ಗೆಳೆಯ ಪ್ರಶ್ನಿಸಿದಾಗ ತಾನು ಲೈಂಗಿಕ ಕಿರುಕುಳಕ್ಕೊಳಗಾದದ್ದು ಗೊತ್ತಾಗಿತ್ತು. ಮಾನಸಿಕ ಅಸ್ವಸ್ಥೆಯಾಗಿದ್ದು ಅದಕ್ಕೆ ಮಹಿಳೆ ಔಷಧ ಸೇವಿಸುತ್ತಿದ್ದರು. ಪತಿ ತನ್ನನ್ನು ಚಿಕಿತ್ಸೆಗೆ ಕರೆದೊಯ್ಯತ್ತಾರೆ ಎನ್ನುವ ದ್ವೇಷದಲ್ಲಿ ಮರುವಿವಾಹ ಜಾಹೀರಾತಿಗೆ ಫೋನ್‌ಕರೆಮಾಡಿದ್ದರು. ವಧು ಬೇಕಾಗಿದೆ ಜಾಹೀರಾತಿಗೆ ಫೋನ್ ಮಾಡಿದಾಗ ಅರೋಪಿ ಮಜೀದ್ ನಿರಂತರ ಫೋನ್ ಮಾಡಿಮಹಿಳೆಯನ್ನು ಉಪಾಯವಾಗಿ ಲಾಡ್ಜ್ ಗೆ ಕರೆತಂದು ಲೈಂಗಿಕ ಕಿರುಕುಳ ನೀಡಿದ್ದ. ನಂತರ ಮಹಿಳೆಯ ಚಿನ್ನಾಭರಣವನ್ನುಉಪಾಯವಾಗಿ ದೋಚಿದ್ದ.

ಆರೋಪಿ ದೋಚುವ ಚಿನ್ನವನ್ನು ಗೆಳೆಯ ರಝಾಕ್ ಎಂಬಾತನೊಂದಿಗೆ ಮಾರಲು ನೀಡುತ್ತಿದ್ದ. ಮಲಪ್ಪುರಂನ ರಝಾಕ್‌ನನ್ನು ಪೊಲೀಸರು ಹುಡುಕುತ್ತಿದ್ದಾರೆ. ಹಲವು ಬಾರಿ ಜೈಲು ಶಿಕ್ಷೆಯಾದ ಈತ ತನ್ನ 22 ವರ್ಷಗಳಿಂದ ವಂಚನೆ ಆರಂಭಿಸಿದ್ದಾನೆ. ಇಷ್ಟರಲ್ಲಿ ಹತ್ತು ಮದುವೆಯನ್ನೂ ಮಾಡಿಕೊಂಡಿದ್ದಾನೆ. ಮಲಪ್ಪುರಂನ ಪತ್ರಿಕೆ ಕಚೇರಿಯವರಿಗೆ ಈತ ವಂಚಕನೆಂದು ಅರಿವಿದ್ದುದರಿಂದ ಈತ ಚೆರ್ಪುಳಶ್ಶೇರಿಗೆ ಹೋಗಿ ಜಾಹೀರಾತು ನೀಡುತ್ತಿದ್ದ. ಬ್ರೋಕರ್‌ಗಳ ಮೂಲಕವೂ ಈತ ವಂಚನೆ ನಡೆಸಿದ್ದಾನೆ. ಸಂಬಂಧಿಕರು ಎಂದು ಕೆಲವರು ಮುಂದೆ ನಿಲ್ಲಿಸಿ ಕೃತ್ಯವೆಸಗುತ್ತಿದ್ದ. ವರದಕ್ಷಿಣೆಯ ಹಣದಲ್ಲಿ ಇವರಿಗೆ ಆತ 50,000ರೂಪಾಯಿ ನೀಡುತ್ತಿದ್ದ. ಆರೋಪಿ ವಿರುದ್ಧ ಕಾರ್ಯಾಚರಣೆಯಲ್ಲಿ ಎಸ್ಸೈಗಳಾದ ಸಿಲ್ವೆಸ್ಟರ್, ಜೋಸೆಫ್ ಝಕರಿಯ, ಎಎಸೈ ಎನ್.ಎಚ್ ರಫೀಕ್, ಸಿಪಿಐ ಅನಿಲ್, ರಿಯಾಝ್ ಭಾಗವಹಿಸಿದ್ದರು. ಆರೋಪಿಯನ್ನು ನ್ಯಾಯಲಯಕ್ಕೆಹಾಜರುಪಡಿಸಲಾಗಿದ್ದು, ರಿಮಾಂಡ್ ವಿಧಿಸಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X