Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘ನಿರ್ದಯ’ ದಾಳಿ : ಅಮೆರಿಕಕ್ಕೆ ಉತ್ತರ...

‘ನಿರ್ದಯ’ ದಾಳಿ : ಅಮೆರಿಕಕ್ಕೆ ಉತ್ತರ ಕೊರಿಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ14 March 2017 7:56 PM IST
share
‘ನಿರ್ದಯ’ ದಾಳಿ : ಅಮೆರಿಕಕ್ಕೆ ಉತ್ತರ ಕೊರಿಯ ಎಚ್ಚರಿಕೆ

ಸಿಯೋಲ್ (ದಕ್ಷಿಣ ಕೊರಿಯ), ಮಾ. 14: ಅಮೆರಿಕದ ವಿಮಾನವಾಹಕ ಯುದ್ಧ ನೌಕೆ ‘ಯುಎಸ್‌ಎಸ್ ಕಾರ್ಲ್ ವಿನ್ಸನ್’ ನೇತೃತ್ವದ ಅಮೆರಿಕ ಸೇನೆ ತನ್ನ ಸಾರ್ವಭೌಮತ್ವವನ್ನು ಉಲ್ಲಂಘಿಸಿದರೆ ‘ನಿರ್ದಯ’ ದಾಳಿಗಳನ್ನು ನಡೆಸಲಾಗುವುದು ಎಂದು ಉತ್ತರ ಕೊರಿಯ ಅಮೆರಿಕಕ್ಕೆ ಎಚ್ಚರಿಕೆ ನೀಡಿದೆ.

ದಕ್ಷಿಣ ಕೊರಿಯದೊಂದಿಗೆ ಜಂಟಿ ಸಮರಾಭ್ಯಾಸ ನಡೆಸಲು ಅಮೆರಿಕ ನೌಕಾ ಪಡೆಯು ಆಗಮಿಸುತ್ತಿದೆ.ಅಮೆರಿಕದ ಸೇನೆಯ ಆಗಮನವು ತನ್ನ ಮೇಲೆ ದಾಳಿ ನಡೆಸುವ ಯೋಜನೆಯ ಭಾಗವಗಿದೆ ಎಂದು ಉತ್ತರ ಕೊರಿಯ ಆರೋಪಿಸಿದೆ.

‘‘ಅವರು ಡಿಪಿಆರ್‌ಕೆ (ಉತ್ತರ ಕೊರಿಯದ ಅಧಿಕೃತ ಹೆಸರು)ಯ ಸಾರ್ವಭೌಮತ್ವ ಮತ್ತು ಘನತೆಯನ್ನು ಸ್ವಲ್ಪವೇ ಉಲ್ಲಂಘಿಸಿದರೂ, ಅದರ ಸೇನೆಯು ಭೂಮಿ, ಆಕಾಶ, ಸಮುದ್ರ ಮತ್ತು ನೀರಿನ ಅಡಿಯಿಂದ ಅತಿ ನಿಖರ ದಾಳಿಗಳನ್ನು ನಡೆಸುವುದು’’ ಎಂದು ಉತ್ತರ ಕೊರಿಯದ ಸುದ್ದಿ ಸಂಸ್ಥೆ ಕೆಸಿಎನ್‌ಎ ಹೇಳಿದೆ.

ಉತ್ತರ ಕೊರಿಯದ ಅಧಿಕೃತ ಹೆಸರು ‘ಡೆಮಾಕ್ರಟಿಕ್ ಪೀಪಲ್ಸ್ ರಿಪಬ್ಲಿಕ್ ಆಫ್ ಕೊರಿಯ (ಡಿಪಿಆರ್‌ಕೆ) ಎಂಬುದಾಗಿದೆ.

 ‘‘ಮಾರ್ಚ್ 11 ರಂದು ಹಲವಾರು ಶತ್ರು ವಿಮಾನವಾಹಕ ನೌಕೆಯಿಂದ ಹಾರಾಟ ನಡೆಸಿದ ಹಲವಾರು ವಿಮಾನಗಳು ಡಿಪಿಆರ್‌ಕೆಯ ವಾಯು ಮತ್ತು ಜಲಪ್ರದೇಶಗಳಿಗೆ ಸಮೀಪದ ಮಾರ್ಗದಲ್ಲಿ ಹಾರಿ ಹೋಗಿವೆ. ಉತ್ತರ ಕೊರಿಯದ ನೆಲೆಗಳ ಮೇಲೆ ಬಾಂಬ್‌ಗಳನ್ನು ಹಾಕುವ ಹಾಗೂ ಅಚ್ಚರಿಯ ದಾಳಿಗಳನ್ನು ನಡೆಸುವ ತಾಲೀಮನ್ನು ಅವರು ನಡೆಸುತ್ತಿದ್ದಾರೆ’’ ಎಂದು ಕೆಸಿಎನ್‌ಎ ಹೇಳಿಕೊಂಡಿದೆ.

ಯೋಜಿತ ಕಾರ್ಯಕ್ರಮ: ಅಮೆರಿಕ ನೌಕಾಪಡೆ

ಯುಎಸ್‌ಎಸ್ ಕಾರ್ಲ್ ವಿನ್ಸನ್ ಈ ವಲಯಕ್ಕೆ ನಿಯಮಿತ ಹಾಗೂ ನಿಗದಿತ ಭೇಟಿ ನೀಡುತ್ತಿದೆ ಹಾಗೂ ಈ ಅವಧಿಯಲ್ಲಿ ಮಿತ್ರ ದೇಶ ದಕ್ಷಿಣ ಕೊರಿಯದೊಂದಿಗೆ ಜಂಟಿ ಯುದ್ಧಾಭ್ಯಾಸದಲ್ಲಿ ಪಾಲ್ಗೊಳ್ಳಲಿದೆ ಎಂದು ಅಮೆರಿಕ ನೌಕಾ ಪಡೆಯ ವಕ್ತಾರರೊಬ್ಬರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X