ಅಬಕಾರಿ ದಾಳಿ: ಓರ್ವನ ಬಂಧನ
ಮೂಡಿಗೆರೆ, ಮಾ.14: ಕಳ್ಳಬಟ್ಟಿ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿರುವ ಅಬಕಾರಿ ಪೊಲೀಸರು, ಓರ್ವನನ್ನು ಬಂಧಿಸಿ ಕಳ್ಳಬಟ್ಟಿ ಹಾಗೂ ಕೊಳೆಯನ್ನು ವಶಪಡಿಸಿಕೊಂಡಿದ್ದಾರೆ. ಬಣಕಲ್ ಹೋಬಳಿ ತ್ರಿಪುರ ಗ್ರಾಮದಲ್ಲಿ ಕಳ್ಳಬಟ್ಟಿ ತಯಾರಿಸುತ್ತಿದ್ದ ಮನೆಯೊಂದರ ಮೇಲೆ ದಾಳಿ ನಡೆಸಿ 2 ಲೀ. ಕಳ್ಳಬಟ್ಟಿ ಸರಾಯಿ, 55 ಲೀ. ಬೆಲ್ಲದ ಕೊಳೆ ಹಾಗೂ ತಯಾರಿಕಾ ಪರಿಕರಗಳನ್ನು ವಶಪಡಿಸಿಕೊಂಡ ಅಬಕಾರಿ ಪೊಲೀಸರು, ರತೀಶ್ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ದಾಳಿಯಲ್ಲಿ ಅಬಕಾರಿ ಪೊಲೀಸ್ ಉಪಾಧೀಕ್ಷಕ ಕೆ.ಜಿ.ಸಂತೋಷ್, ಸರ್ಕಲ್ ಇನ್ಸ್ಪೆಕ್ಟರ್ ಆನಂದ್ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
Next Story





