Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂಡಿಯನ್ ವೇಲ್ಸ್ ಟೆನಿಸ್ ಟೂರ್ನಿ:...

ಇಂಡಿಯನ್ ವೇಲ್ಸ್ ಟೆನಿಸ್ ಟೂರ್ನಿ: ಸ್ಟಾನ್ ವಾವ್ರಿಂಕ ನಾಲ್ಕನೆ ಸುತ್ತಿಗೆ ಲಗ್ಗೆ

ವಾರ್ತಾಭಾರತಿವಾರ್ತಾಭಾರತಿ14 March 2017 11:33 PM IST
share
ಇಂಡಿಯನ್ ವೇಲ್ಸ್ ಟೆನಿಸ್ ಟೂರ್ನಿ: ಸ್ಟಾನ್ ವಾವ್ರಿಂಕ ನಾಲ್ಕನೆ ಸುತ್ತಿಗೆ ಲಗ್ಗೆ

ಇಂಡಿಯನ್ ವೇಲ್ಸ್, ಮಾ.14: ಎಟಿಪಿ ಇಂಡಿಯನ್ ವೇಲ್ಸ್ ಮಾಸ್ಟರ್ಸ್‌ ಟೂರ್ನಿಯಲ್ಲಿ ಸ್ವಿಸ್‌ನ ಸ್ಟಾನ್ ವಾವ್ರಿಂಕ ನಾಲ್ಕನೆ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ.

ಇಲ್ಲಿ ಸೋಮವಾರ ನಡೆದ ಪುರುಷರ ಸಿಂಗಲ್ಸ್‌ನ ಮೂರನೆ ಸುತ್ತಿನ ಪಂದ್ಯದಲ್ಲಿ 3ನೆ ಶ್ರೇಯಾಂಕದ ಸ್ಟಾನ್ ವಾವ್ರಿಂಕ ಅವರು ಜರ್ಮನಿಯ ಫಿಲಿಪ್ ಕೊಹ್ಲ್ಸ್‌ಕ್ರೆಬರ್‌ರನ್ನು 7-5, 6-3 ನೇರ ಸೆಟ್‌ಗಳ ಅಂತರದಿಂದ ಮಣಿಸಿದ್ದಾರೆ.

 ವಾವ್ರಿಂಕ ಅವರು ಫಿಲಿಪ್ ವಿರುದ್ದ ಆಡಿರುವ ಎಲ್ಲ ಐದು ಪಂದ್ಯಗಳನ್ನು ಜಯಿಸಿ ಅಜೇಯ ದಾಖಲೆ ಕಾಯ್ದುಕೊಂಡಿದ್ದಾರೆ. ಈ ಗೆಲುವಿನ ಮೂಲಕ ಇಂಡಿಯನ್ ವೇಲ್ಸ್ ಟೂರ್ನಿಯಲ್ಲಿ ಮೊದಲ ಬಾರಿ ಕ್ವಾರ್ಟರ್ ಫೈನಲ್ ತಲುಪುವ ವಿಶ್ವಾಸ ಹೆಚ್ಚಿಸಿಕೊಂಡರು.

ವಾವ್ರಿಂಕ ಮುಂದಿನ ಸುತ್ತಿನಲ್ಲಿ ಜಪಾನ್‌ನ ಯೊಶಿಹಿಟೊ ನಿಶಿಯೊಕರನ್ನು ಎದುರಿಸಲಿದ್ದಾರೆ. ನಿಶಿಯೊಕಾ ಝೆಕ್‌ನ 13ನೆ ಶ್ರೇಯಾಂಕದ ಥಾಮಸ್ ಬೆರ್ಡಿಕ್‌ರನ್ನು 1-6, 7-6(7/5), 6-4 ಸೆಟ್‌ಗಳ ಅಂತರದಿಂದ ಮಣಿಸಿ ಮೊದಲ ಬಾರಿ ಮಾಸ್ಟರ್ಸ್‌ ಟೂರ್ನಮೆಂಟ್‌ನಲ್ಲಿ ನಾಲ್ಕನೆ ಸುತ್ತಿಗೆ ತಲುಪಿದ್ದರು. 8ನೆ ಶ್ರೇಯಾಂಕದ ಆಸ್ಟ್ರೀಯದ ಡೊಮಿನಿಕ್ ಥಿಯೆಮ್ ಜರ್ಮನಿಯ ಮಿಸ್ಚಾ ಝ್ವೆರೆವ್‌ರನ್ನು 6-1, 6-4 ನೇರ ಸೆಟ್‌ಗಳಿಂದ ಮಣಿಸಿ ನಾಲ್ಕನೆ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ.

ಕೆರ್ಬರ್ 4ನೆ ಸುತ್ತಿಗೆ ಪ್ರವೇಶ:ಜರ್ಮನಿಯ ಆ್ಯಂಜೆಲಿಕ್ ಕೆರ್ಬರ್ ಇಂಡಿಯನ್ ವೇಲ್ಸ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ನಾಲ್ಕನೆ ಸುತ್ತಿಗೆ ಪ್ರವೇಶ ಪಡೆದಿದ್ದಾರೆ.

ಸೋಮವಾರ ನಡೆದ ಮೂರನೆ ಸುತ್ತಿನ ಪಂದ್ಯದಲ್ಲಿ ಕೆರ್ಬರ್ ಫ್ರಾನ್ಸ್‌ನ ಪೌಲಿನ್ ಪಾರ್ಮೆಂಟಿಯೆರ್‌ರನ್ನು 7-5, 3-6, 7-5 ಸೆಟ್‌ಗಳ ಅಂತರದಿಂದ ಸೋಲಿಸಿದ್ದಾರೆ.

ಈತನಕ 9 ಬಾರಿ ಇಂಡಿಯನ್ ವೇಲ್ಸ್ ಟೂರ್ನಿಯಲ್ಲಿ ಆಡಿದ್ದ ಕೆರ್ಬರ್ 2012-13ರಲ್ಲಿ ಮಾತ್ರ ಸೆಮಿ ಫೈನಲ್‌ಗೆ ತಲುಪಿದ್ದರು. ಕಳೆದ ಮೂರು ವರ್ಷ ಎರಡನೆ ಸುತ್ತಿನಲ್ಲಿ ಸೋತಿದ್ದರು.

2015ರ ಚಾಂಪಿಯನ್ ಸಿಮೊನಾ ಹಾಲೆಪ್ 28ನೆ ಶ್ರೇಯಾಂಕದ ಕ್ರಿಸ್ಟಿನಾ ಮ್ಲಾಡೆನೊವಿಕ್‌ರನ್ನು 6-3, 6-3 ನೇರ ಸೆಟ್‌ಗಳ ಅಂತರದಿಂದ ಮಣಿಸಿದ್ದಾರೆ.

ಅಮೆರಿಕದ ಹಿರಿಯ ಆಟಗಾರ್ತಿ ವೀನಸ್ ವಿಲಿಯಮ್ಸ್ ಅವರು ಲೂಸಿ ಸಫರೋವಾರನ್ನು 6-4, 6-2 ನೇರ ಸೆಟ್‌ಗಳ ಅಂತರದಿಂದ ಸೋಲಿಸಿ ಮುಂದಿನ ಸುತ್ತಿಗೆ ತಲುಪಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X