Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಾಕಿಸ್ತಾನದ ದೇಶೀಯ ಕ್ರಿಕೆಟ್...

ಪಾಕಿಸ್ತಾನದ ದೇಶೀಯ ಕ್ರಿಕೆಟ್ ಲೀಗ್‌ನಲ್ಲಿ ಸಿಖ್ ಕ್ರಿಕೆಟಿಗನಿಗೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ14 March 2017 11:36 PM IST
share
ಪಾಕಿಸ್ತಾನದ ದೇಶೀಯ ಕ್ರಿಕೆಟ್ ಲೀಗ್‌ನಲ್ಲಿ ಸಿಖ್ ಕ್ರಿಕೆಟಿಗನಿಗೆ ಅವಕಾಶ

 ಕರಾಚಿ,ಮಾ.14: ಸಿಖ್ ಕ್ರಿಕೆಟಿಗ ಮಹಿಂದರ್ ಪಾಲ್ ಸಿಂಗ್ ಮಂಗಳವಾರ ಪಾಕಿಸ್ತಾನದ ದೇಶೀಯ ಕ್ರಿಕೆಟ್ ಲೀಗ್‌ನಲ್ಲಿ ಪಾದಾರ್ಪಣೆ ಮಾಡಿದ್ದಾರೆ. ಸಿಂಗ್ ಇತ್ತೀಚೆಗಿನ ದಿನಗಳಲ್ಲಿ ಪಾಕ್ ಕ್ರಿಕೆಟ್ ತಂಡದಲ್ಲಿ ಆಡಿದ ಮೊದಲ ಸಿಖ್ ಕ್ರಿಕೆಟಿಗನಾಗಿದ್ದಾರೆ.

ಕೆಲವು ವರ್ಷಗಳ ಹಿಂದೆ ಗುಲಾಬ್ ಸಿಂಗ್ ಎಂಬ ಕ್ರಿಕೆಟಿಗ ಪಾಕ್ ಪರ ಮೂರು ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳನ್ನು ಆಡಿದ್ದರು. ಮಹಿಂದರ್ ಪಾಟ್ರೊನ್ಸ್ ಟ್ರೋಫಿ ಗ್ರೇಡ್-2 ಟೂರ್ನಮೆಂಟ್‌ನಲ್ಲಿ ಕ್ಯಾಂಡಿಲ್ಯಾಂಡ್ ತಂಡದ ಪರ ಆಡುವ ಅವಕಾಶ ಪಡೆದಿದ್ದಾರೆ.

‘‘ಪ್ಯಾಟ್ರೋನ್ಸ್ ಟ್ರೋಫಿ ಗ್ರೇಡ್-2 ಟೂರ್ನಿಯಲ್ಲಿ ಆಡುವ ಅವಕಾಶ ಲಭಿಸಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ. ಮೊದಲ ಇನಿಂಗ್ಸ್‌ನಲ್ಲಿ 2 ವಿಕೆಟ್ ಪಡೆದಿದ್ದೆ. ಆದರೆ,ಗಾಯದ ಸಮಸ್ಯೆಯಿಂದಾಗಿ ಎರಡನೆ ಇನಿಂಗ್ಸ್‌ನಲ್ಲಿ ಬೌಲಿಂಗ್ ಮಾಡಲು ಸಾಧ್ಯವಾಗಲಿಲ್ಲ’’ ಎಂದು ಸ್ಟೇಟ್‌ಬ್ಯಾಂಕ್ ಮೈದಾನದಲ್ಲಿ ಕರಾಚಿ ಪೋರ್ಟ್ ಟ್ರಸ್ಟ್ ತಂಡದ ವಿರುದ್ಧ ಆಡಿದ ಬಳಿಕ ಸುದ್ದಿಸಂಸ್ಥೆಗೆ ಸಿಂಗ್ ತಿಳಿಸಿದರು.

ಕ್ಯಾಂಡಿಲ್ಯಾಂಡ್ ಮ್ಯಾನೇಜರ್ ಮಿರ್ಝಾ ಅವರು ನನಗೆ ಕರೆ ಮಾಡಿದಾಗ ನನಗೆ ತುಂಬಾ ಸಂತೋಷವಾಗಿತ್ತು. 2015ರಲ್ಲಿ ಕ್ಯಾಂಡಿಲ್ಯಾಂಡ್ ಆಯೋಜಿಸಿದ್ದ ಪ್ರತಿಭಾಶೋಧ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಪ್ರತಿಭಾಶೋಧ ಕಾರ್ಯಕ್ರಮವನ್ನು ಆಧರಿಸಿ ನನಗೆ ಕರೆ ಮಾಡಿದ್ದರು’’ ಎಂದು 21ರ ಹರೆಯದ ಸಿಂಗ್ ತಿಳಿಸಿದರು.

ಪಾಕಿಸ್ತಾನದಲ್ಲಿ 20,000ದಷ್ಟಿರುವ ಸಿಖ್ ಸಮುದಾಯಕ್ಕೆ ಸೇರಿದವರಾಗಿದ್ದರು. ಲಾಹೋರ್‌ನಿಂದ 100 ಕಿ.ಮೀ.ದೂರದ ನಾನ್‌ಕನಾ ಸಾಹಿಬ್ ಮಹಿಂದರ್ ಸಿಂಗ್ ಜನ್ಮಸ್ಥಳ. ‘‘ನನ್ನ ತಂದೆ ಹರ್ಜೀತ್ ಸಿಂಗ್ ವೈದ್ಯರು. ಕಳೆದ ಒಂದು ವರ್ಷದಿದ ಅವರು ನನಗೆ ಪ್ರೋತ್ಸಾಹ ನೀಡುತ್ತಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ಮುಲ್ತಾನ್‌ನಲ್ಲಿ ಪಿಸಿಬಿ ಆಯೋಜಿಸಿದ್ದ ಶಿಬಿರಕ್ಕೆ ಆಯ್ಕೆಯಾದ ಮೊದಲ ಸಿಖ್ ಆಟಗಾರನಾಗಿದ್ದೆ. ಇದೀಗ ದೇಶೀಯ ಕ್ರಿಕೆಟ್‌ನಲ್ಲಿ ಆಡುವ ಅವಕಾಶ ಲಭಿಸಿರುವುದಕ್ಕೆ ಖುಷಿಯಾಗುತ್ತಿದೆ’’ ಎಂದು ಮಹಿಂದರ್ ಹೇಳಿದ್ದಾರೆ.

‘‘ಅಗ್ರ ತಂಡಗಳು ಹಾಗೂ ಆಟಗಾರರೊಂದಿಗೆ ಆಡಿದ ಬಳಿಕ ಸಾಕಷ್ಟು ಪಾಠ ಕಲಿತ್ತಿದ್ದೇನೆ. ಪಿಸಿಬಿ ಶಿಬಿರಕ್ಕೆ ಆಯ್ಕೆಯಾಗಿರುವುದು ನನ್ನಪಾಲಿಗೆ ಹೆಮ್ಮೆಯ ಕ್ಷಣ. ದೇಶೀಯ ಕ್ರಿಕೆಟ್ ಆಡುವ ಮೂಲಕ ನನ್ನ ಕನಸು ಈಡೇರಿದೆ. ಯುವ ಆಟಗಾರರಿಗೆ ದೊಡ್ಡ ವೇದಿಕೆಯಾಗಿರುವ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವುದು ನನ್ನ ಮುಂದಿನ ಗುರಿ’’ಎಂದು ಸಿಂಗ್ ತಿಳಿಸಿದರು.

ಪಂಜಾಬ್ ಯುನಿವರ್ಸಿಟಿಯ ಫಾರ್ಮಸಿ ವಿದ್ಯಾರ್ಥಿಯಾಗಿರುವ ಮಹಿಂದರ್ ಸಿಂಗ್ ಕಳೆದ ಕೆಲವು ಸಮಯದಿಂದ ಕ್ರಿಕೆಟ್‌ಗೆ ಹೆಚ್ಚು ಸಮಯ ನೀಡುತ್ತಿದ್ದಾರೆ. ಮಹಿಂದರ್ ತಂದೆ ಕೂಡ ಕ್ರಿಕೆಟ್ ಪ್ರೇಮಿಯಾಗಿದ್ದು, ಮಗನಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ.

ಈತನಕ ಕೇವಲ 7 ಮಂದಿ ಮುಸ್ಲಿಂಯೇತರರು ಪಾಕಿಸ್ತಾನ ಕ್ರಿಕೆಟ್‌ತಂಡವನ್ನು ಪ್ರತಿನಿಧಿಸಿದ್ದಾರೆ. ಈ ಪೈಕಿ ಐವರು ಕ್ರಿಶ್ಚಿಯನ್ನರು ಹಾಗೂ ಇಬ್ಬರು ಹಿಂದೂಗಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X