Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಿಳೆಯರ ಮತವನ್ನು ಅಧಿಕಾರಿಯೇ...

ಮಹಿಳೆಯರ ಮತವನ್ನು ಅಧಿಕಾರಿಯೇ ಚಲಾಯಿಸಿದರು, ಕಮಲದ ಚಿಹ್ನೆಗೆ ಮತ ಹಾಕಲು ಒತ್ತಡ

ಮಹಿಳೆಯ ಹೇಳಿಕೆಯ ವೈರಲ್ ವೀಡಿಯೊ

ವಾರ್ತಾಭಾರತಿವಾರ್ತಾಭಾರತಿ15 March 2017 5:40 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಹಿಳೆಯರ ಮತವನ್ನು ಅಧಿಕಾರಿಯೇ ಚಲಾಯಿಸಿದರು, ಕಮಲದ ಚಿಹ್ನೆಗೆ ಮತ ಹಾಕಲು ಒತ್ತಡ

ಹೊಸದಿಲ್ಲಿ, ಮಾ. 15 : ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಿಗೇ ಇಲೆಕ್ಟ್ರಾನಿಕ್ ಮತ ಯಂತ್ರಗಳಲ್ಲಿ ಗೋಲ್ ಮಾಲ್ ನಡೆದಿದೆ ಎಂದು ಹಿರಿಯ ರಾಜಕೀಯ ಮುಖಂಡರೇ ನೀಡಿರುವ ಹೇಳಿಕೆ ಈಗಾಗಲೇ ಚರ್ಚೆಯಲ್ಲಿದೆ. ಈ ನಡುವೆ ಮಹಿಳೆಯೊಬ್ಬರು ಇದೇ ರೀತಿಯ ಆರೋಪ ಮಾಡುವ ವೀಡಿಯೊವೊಂದು ಬೆಳಕಿಗೆ ಬಂದಿದ್ದು ಅದೀಗ ವೈರಲ್ ಆಗಿದೆ. ಈ ಬಗ್ಗೆ ಇಂಡಿಯನ್ ಎಕ್ಸ್ ಪ್ರೆಸ್ ಬಳಗದ ಜನಸತ್ತಾ ವರದಿ ಮಾಡಿದೆ. 

ಈ ವೈರಲ್ ವೀಡಿಯೊ India Against BJP ಹೆಸರಿನ ಯೂಟ್ಯೂಬ್ ಪೇಜ್ ನಲ್ಲಿ ಅಪ್ಲೋಡ್ ಆಗಿದೆ. ಆ ಮಹಿಳೆಯ ಪ್ರಕಾರ ಮತಗಟ್ಟೆಯಲ್ಲಿ ಕರ್ತವ್ಯ ನಿರತ ಚುನಾವಣಾ ಸಿಬ್ಬಂದಿಯೇ ಅಕ್ರಮದಲ್ಲಿ ತೊಡಗಿದ್ದ. ವೀಡಿಯೊವನ್ನು ಈಗಾಗಲೇ ೬ ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. " ಯೂಪಿಮೆ ಇವಿಎಂ ಗಡ್ಬಡಿ ಕಾ ಸಬೂತ್ ( ಯುಪಿಯಲ್ಲಿ ಇವಿಎಂ ಅಕ್ರಮದ ಸಾಕ್ಷ್ಯ) ಎಂಬುದು ವೀಡಿಯೋದ ಹೆಸರು. 

ವೀಡಿಯೋದಲ್ಲಿ ಮಹಿಳೆಯ ಹೇಳಿಕೆ ಹೀಗಿದೆ : " ಚುನಾವಣಾ ಅಧಿಕಾರಿ ಹಾಗು ಇವಿಎಂ ನಲ್ಲಿ ಇರುವ ಅಧಿಕಾರಿ ಸ್ವತಃ ತನ್ನ ಕೈಗಳಿಂದ ಬಟನ್ ಒತ್ತುತ್ತಿದ್ದ. ಮಹಿಳೆಯರು ಹೋದಾಗ ಮತ ಯಂತ್ರ ಕೆಲಸ ಮಾಡುತ್ತಿಲ್ಲ ಎಂದು ಹೇಳುತ್ತಿದ್ದ. ಆದರೆ ಆತ ಆಗ ಅದನ್ನು ಆನ್ ಮಾಡುತ್ತಲೇ ಇರಲಿಲ್ಲ. ಅಲ್ಲಿ ಅಕ್ರಮವಾಗಿ ಮತದಾನ ನಡೆಯುತ್ತಿತ್ತು. ಅವರು ಕಮಲದ ಚಿಹ್ನೆಗೆ ಮತ ಹಾಕಿಸುತ್ತಿದ್ದರು. ಇದೆಲ್ಲಾ ಇಲ್ಲಿ ಜಾಟರು ಮಾಡಿರುವ ಕೆಲಸ. ಮತಗಟ್ಟೆಯಿಂದ 100 ಮೀಟರ್ ದೂರದಲ್ಲಿ ಯಾರೂ ಇರಬಾರದು. ಆದರೆ ಅವರು ಅಲ್ಲಿ ಚಾ - ಪಾನೀಯ ಎಲ್ಲ ಮಾಡಿಸುತ್ತಿದ್ದರು. ಇದರಲ್ಲಿ ಪೊಲೀಸರೂ ಸೇರಿದ್ದರು. 

ನೀವು ಯಾರಿಗೆ ಮತ ಹಾಕಲು ಹೋಗಿದ್ದೀರಿ ಎಂದು ಆ ಮಹಿಳೆಯನ್ನು ಕೇಳಿದಾಗ ಆಕೆ " ನಾನು ಮಾಯಾವತಿಯ ಬೆಂಬಲಿಗೆ. ಆಕೆಯ ಪಕ್ಷದ ಹಾಜಿ ಹೆಸರಿನ ಅಭ್ಯರ್ಥಿಗೆ ಮತ ಹಾಕಲು ಹೋಗಿದ್ದೆ " ಎಂದು ಹೇಳಿದ್ದಾಳೆ. 

ಉತ್ತರ ಪ್ರದೇಶ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ 312  ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಆ ಬಳಿಕ ಬಿಎಸ್ಪಿ ನಾಯಕಿ ಮಾಯಾವತಿ ಮತಯಂತ್ರಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಮಾಡಿ ಮತಪತ್ರ ಬಳಸಿ ಮರುಚುನಾವಣೆ ನಡೆಸಬೇಕೆಂದು ಆಗ್ರಹಿಸಿದ್ದರು. ಇದನ್ನು ಮಾಜಿ ಮುಖ್ಯಮಂತ್ರಿ, ಎಸ್ಪಿ ಅಧ್ಯಕ್ಷ ಅಖಿಲೇಶ್ ಕೂಡ ಬೆಂಬಲಿಸಿದ್ದರು. ಲಾಲು ಮತ್ತಿತರ ರಾಜಕೀಯ ಮುಖಂಡರೂ ಇದಕ್ಕೆ ಧ್ವನಿ ಗೂಡಿಸಿದರು.  

ಬಳಿಕ ಸಾಮಾಜಿಕ ಜಾಲತಾಣಗಳಲ್ಲೂ ಈ ಬಗ್ಗೆ ಬಿಸಿಬಿಸಿ ಪರ -ವಿರೋಧ ಚರ್ಚೆಗಳು ನಡೆಯುತ್ತಿವೆ. ದಿಲ್ಲಿ ಮುನಿಸಿಪಲ್ ಚುನಾವಣೆಯನ್ನು ಮತಪತ್ರ ಬಳಸಿ ನಡೆಸಬೇಕು ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಚುನಾವಣಾ ಆಯೋಗವನ್ನು ಆಗ್ರಹಿಸಿದ್ದರು. ಆದರೆ ಅದನ್ನು ಆಯೋಗ ತಿರಸ್ಕರಿಸಿದೆ. 

ಇಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ ಅಕ್ರಮ ನಡೆಯುವ ಸಾಧ್ಯತೆ ಇದೆ ಎಂದು ಬಿಜೆಪಿ ಮುಖಂಡ ಸುಬ್ರಮಣ್ಯನ್ ಸ್ವಾಮಿ ಈ ಹಿಂದೆ ನೀಡಿದ ಹೇಳಿಕೆಯ ವೀಡಿಯೊ ಕೂಡ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X