Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ಲಸ್ ವನ್(ಪಿಯುಸಿ) ವಿದ್ಯಾರ್ಥಿ...

ಪ್ಲಸ್ ವನ್(ಪಿಯುಸಿ) ವಿದ್ಯಾರ್ಥಿ ಆತ್ಮಹತ್ಯೆ: ಶಾಲಾಡಳಿತದ ವಿರುದ್ಧ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ15 March 2017 12:16 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

ತಿರುವನಂತಪುರಂ,ಮಾ.15: ಪ್ಲಸ್ ವನ್ ವಿದ್ಯಾರ್ಥಿಆತ್ಮಹತ್ಯೆಗೆ ಶಾಲಾಡಳಿತ ಕಾರಣವೆಂದು ಸಂಬಂಧಿಕರು ಆರೋಪಿಸಿದ್ದಾರೆ. ವರ್ಕಲ ಆಯಿರೂರ್ ಎಂಜಿಎಂ ಸ್ಕೂಲಿನ ಪ್ಲಸ್‌ವನ್ ವಿದ್ಯಾರ್ಥಿ ಮರಕ್ಕಡಮುಕ್ ಅರ್ಜುನ್(17) ಕಳೆದ ದಿನ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ವಿದ್ಯಾರ್ಥಿಯಾಗಿದ್ದಾನೆ.

ಕಳೆದ ಹತ್ತನೆ ತಾರೀಕಿನಂದು ನಡೆದಿದ್ದ ಎಪಿ (ಇನ್ಪಾರ್ಮೇಶನ್ ಪ್ರಾಕ್ಟಿಸ್) ಪರೀಕ್ಷೆಯಲ್ಲಿ ಸ್ಮಾರ್ಟ್‌ವಾಚ್ ಕಟ್ಟಿಕೊಂಡು ಬಂದು ನಕಲು ಹೊಡೆದಿದ್ದಾನೆಂದು ಅರ್ಜುನ್ ವಿರುದ್ಧ ಆರೋಪ ಹೊರಿಸಲಾಗಿತ್ತು. ಇದಕ್ಕಾಗಿ ಮಂಗಳವಾರ ಹೆತ್ತವರನ್ನು ಶಾಲೆಗೆ ಕರೆಯಿಸಿಕೊಂಡು ಅವರ ಮುಂದೆ ವೈಸ್ ಪ್ರಿನ್ಸಿಪಾಲ್ ಅರ್ಜುನ್‌ನಿಗೆ ಎಚ್ಚರಿಕೆ ನೀಡಿದ್ದರು. ಅಲ್ಲಿಂದ ಮನೆಗೆ ಹೋದ ಬಳಿಕ ನಿನ್ನೆ ಸಂಜೆ ನಾಲ್ಕು ಗಂಟೆಗೆ ತಾಯಿ ಹೊರಗೆ ಹೋಗಿದ್ದಾಗ ಅರ್ಜುನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

 ಅರ್ಜುನ್ ವಾರ್ಷಿಕ ಪರೀಕ್ಷೆಯಲ್ಲಿ ನಕಲು ಹೊಡೆದಿದ್ದಾನೆಂದು ಶಾಲಾ ಮ್ಯಾನೇಜ್‌ಮೆಂಟ್ ಅಪಮಾನಿಸಿದೆ. ಇದು ವಿದ್ಯಾರ್ಥಿ ಆತ್ಮಹತ್ಯೆ ಮಾಡಲು ಕಾರಣವೆಂದು ಅರ್ಜುನ್‌ನ ಸಂಬಂಧಿಕರು ಶಾಲಾ ಮ್ಯಾನೇಜ್ ಮೆಂಟ್ ವಿರುದ್ಧ ದೂರು ನೀಡಿದ್ದಾರೆ.

ಮ್ಯಾನೇಜ್‌ಮೆಂಟ್ ಸ್ಪೆಶಲ್ ಮೀಟಿಂಗ್ ಕರೆದು ತಂದೆ ತಾಯಿಯನ್ನು ಕರೆಸಿಕೊಂಡುಅವರ ಮುಂದೆ ಅರ್ಜುನ್‌ನ್ನು ಅಪಮಾನಿಸಿದೆ ಎಂದು ಎಂಜಿಎಂ ಸ್ಕೂಲ್ ಅಧಿಕಾರಿಗಳ ವಿರುದ್ಧ ಸಂಬಂಧಿಕರು ಹರಿಹಾಯ್ದಿದ್ದಾರೆ. ತನ್ನಮಗನ ಆತ್ಮಹತ್ಯೆಗೆ ಎಂಜಿಎಂ ಸ್ಕೂಲಿನ ಅಧಿಕಾರಿಗಳೇ ಕಾರಣ ಎಂದು ವರ್ಕಲ ಪೊಲೀಸರಿಗೆ ಅರ್ಜುನ್‌ನ ತಾಯಿ ದೂರು ನೀಡಿದ್ದಾರೆ.

ಪರೀಕ್ಷೆಯಲ್ಲಿ ಕಡಿಮೆ ಅಂಕಪಡೆದ ವಿದ್ಯಾರ್ಥಿಗಳ ತಂದೆ ತಾಯಿಯರನ್ನು ಶಿಕ್ಷಕ ರಕ್ಷಕ ಸಮಿತಿ ಸಭೆಗೆ ಕರೆಯಲಾಗಿತ್ತು. ಅರ್ಜುನ್ ಬೇರೆ ಶಾಲೆಯಲ್ಲಿ ಮೊದಲು ಕಲಿಯುತ್ತಿದ್ದ. ಅವನ ಸಿಲೆಬಸ್ ಬದಲಾದ್ದರಿಂದ ಕಡಿಮೆ ಅಂಕ ಬಂದಿದೆ ಎಂದು  ತಾಯಿ ಸ್ಕೂಲ್ ಪ್ರಿನ್ಸಿಪಾಲ್ ಮುಂತಾದವರಿಗೆ ವಿವರಿಸಿದ್ದಾರೆ. ಆದರೆ ಪ್ರಿನ್ಸಿಪಾಲ್ ಶಿಕ್ಷಕ ರಕ್ಷಕ ಸಭೆಯ ನಂತರ ಅರ್ಜುನ್, ಅವನ ತಾಯಿ, ಚಿಕ್ಕಮ್ಮ ವೈಸ್ ಪ್ರಿನ್ಸಿಪಾಲ್‌ರನ್ನು ಭೇಟಿಯಾಗಬೇಕೆಂದು ಹೇಳಿದ್ದರು. ವೈಸ್ ಪ್ರಿನ್ಸಿಪಾಲ್ ಅರ್ಜುನ್‌ಗೆಮಾನಸಿಕ ಕಿರುಕುಳ ನೀಡಿದ್ದಾರೆ ಹೀಯಾಳಿಸಿದ್ದಾರೆ ಎಂದು ಅರ್ಜುನ್‌ನ ಮನೆಯವರು ಈಗ ಆರೋಪಿಸುತ್ತಿದ್ದಾರೆ. ಆವರು ಹೇಳುವ ಪ್ರಕಾರ, ವೈಸ್ ಪ್ರಿನ್ಸಿಪಾಲ್ ಅರ್ಜುನ್ ಪರೀಕ್ಷೆಯಲ್ಲಿ ಕಾಪಿ ಹೊಡೆದದ್ದಕ್ಕೆ ಸಾಕ್ಷ್ಯವಿದೆ ಎಂದಿದ್ದಾರೆ. ಮಾತ್ರವಲ್ಲ ನಿಮ್ಮಮಗನನ್ನು ಡಿಬಾರ್ ಮಾಡುತ್ತೇವೆ. ಪೊಲೀಸ್ ಕೇಸು ಹಾಕುತ್ತೇವೆ ಎಂದು ಬೆದರಿಸಿದ್ದಾರೆ. ಇದಕ್ಕೆ ನೊಂದ ಅರ್ಜುನ್ ನಿನ್ನೆ ತಾಯಿ ಮನೆಯಿಂದ ಹೊರಹೋಗುವುದನ್ನೆ ಕಾದು ಆ ನಂತರ ಆತ್ಮಹತ್ಯೆಮಾಡಿಕೊಂಇಡಿದ್ದಾನೆ ಎಂದು ವರ್ಕಲ ಪೊಲೀಸರಿಗೆ ನೀಡಿದ ದೂರಿನಲ್ಲಿ ಅರ್ಜುನ್ ತಾಯಿ ವಿವರಿಸಿದ್ದಾರೆ.

ಆದರೆ ಅರ್ಜುನ್‌ನ್ನು ನಾವ್ಯಾರೂ ಅಪಮಾನಿಸಿಲ್ಲ, ಬೆದರಿಸಿಯೂ ಇಲ್ಲ ನಕಲು ಹೊಡೆಯಬಾರದೆಂದು ಮಾತ್ರ ಹೇಳಿದ್ದೇವೆ ಎಂದು ಸ್ಕೂಲ್ ಮ್ಯಾನೇಜ್ ಮೆಂಟ್‌ಗೆ ಸಂಬಂಧಿಸಿದ ಅಧಿಕಾರಿಗಳು ಸ್ಪಷ್ಟಣೆ ನೀಡಿದ್ದಾರೆ. ಈಗ ಎಂಜಿಎಂ ಸ್ಕೂಲ್ ನ ವಿರುದ್ಧ ಭಾರೀ ವಿರೋಧ ವ್ಯಕ್ತವಾಗಿದ್ದು ಇಂದು ಸ್ಕೂಲ್‌ನ ಮುಂದೆ ಅರ್ಜುನ್‌ನ ಸಾವಿಗೆ ಕಾರಣರಾದವರನ್ನು ಶಿಕ್ಷಿಸಿ ಎಂದು ವಿವಿಧ ರಾಜಕೀಯ ಪಕ್ಷಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆದಿವೆ. ಪಾಂಬಡಿ ನೆಹರೂ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ನಿಗೂಢ ಸಾವನ್ಪ್ಪಿನದ ಜಿಷ್ಣು ಪ್ರಣೋಯ್ ವಿರುದ್ಧ ವೂ ನಕಲು ಹೊಡೆದಿದ್ದಾನೆಂದು ಸುಳ್ಳಾರೋಪ ಹೊರಿಸಲಾಗಿತ್ತು. ನೆಹರೂ ಕಾಲೇಜು ಅಧಿಕಾರಿಗಳ ವಿರುದ್ಧ ತನಿಖೆ ಮುಂದುವರಿಯುತ್ತಿರುವಾಗಲೇ ಅದಕ್ಕೆ ಸಮಾನವಾದ ಅ ಇನ್ನೊಂದು ಘಟನೆ ಕೇರಳದಲ್ಲಿ ನಡೆದಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X