Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಇವಿಎಂಗಳಲ್ಲಿ ಅಕ್ರಮ ನಡೆಸಲು...

ಇವಿಎಂಗಳಲ್ಲಿ ಅಕ್ರಮ ನಡೆಸಲು ಸಾಧ್ಯವೇ...?

ನಿಮಗೆ ಗೊತ್ತಿರಲೇಬೇಕಾದ ಐದು ಅಂಶಗಳು

ವಾರ್ತಾಭಾರತಿವಾರ್ತಾಭಾರತಿ15 March 2017 9:29 PM IST
share
ಇವಿಎಂಗಳಲ್ಲಿ ಅಕ್ರಮ ನಡೆಸಲು ಸಾಧ್ಯವೇ...?

ಹೊಸದಿಲ್ಲಿ,ಮಾ.15: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಳಲ್ಲಿ ಬಳಸಲಾದ ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳಲ್ಲಿ ಅಕ್ರಮಗಳು ನಡೆದಿವೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿಯವರು ಆರೋಪಿಸಿದ ಬಳಿಕ ಇದೀಗ ದಿಲ್ಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಾರ್ಟಿ(ಆಪ್)ಯ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ ಅವರು, ಪಂಜಾಬ್ ಚುನಾವಣೆಗಳಲ್ಲಿ ಇವಿಎಂಗಳಲ್ಲಿ ದಾಖಲಾದ ಶೇ.20-30ರಷ್ಟು ಮತಗಳು ಶಿರೋಮಣಿ ಅಕಾಲಿದಳ-ಬಿಜೆಪಿ ಮೈತ್ರಿಕೂಟಕ್ಕೆ ವರ್ಗಾವಣೆಯಾಗಿವೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಇವಿಎಂಗಳ ವಿಶ್ವಾಸಾರ್ಹತೆಯ ಬಗ್ಗೆ ಆಗಾಗ್ಗೆ ಶಂಕೆಗಳು ವ್ಯಕ್ತವಾಗುತ್ತಲೇ ಇವೆ. ಮತದಾನದ ದಾಖಲೆಯಾಗಿ ಇವಿಎಂಗಳಲ್ಲಿ ಹಂತಹಂತವಾಗಿ ಮುದ್ರಿತ ಚೀಟಿ ಲಭ್ಯತೆ (ವಿವಿಪಿಎಟಿ) ವ್ಯವಸ್ಥೆಯನ್ನು ಅಳವಡಿಸುವಂತೆ ಸರ್ವೋಚ್ಚ ನ್ಯಾಯಾಲಯವು 2013ರಲ್ಲಿಯೇ ಚುನಾವಣಾ ಆಯೋಗಕ್ಕೆ ನಿರ್ದೇಶ ನೀಡಿತ್ತು. ಆಡಳಿತ ಬಿಜೆಪಿ ಸೇರಿದಂತೆ ಎಲ್ಲ ಪಕ್ಷಗಳ ರಾಜಕಾರಣಿಗಳು ಬೇರೆ ಬೇರೆ ಸಂದರ್ಭಗಳಲ್ಲಿ ಇವಿಎಂಗಳ ಬಗ್ಗೆ ಶಂಕೆಗಳನ್ನು ಎತ್ತುತ್ತಲೇ ಬಂದಿದ್ದಾರೆ.

ಇವಿಎಂಗಳಲ್ಲಿ ಅಕ್ರಮ ಹೇಗೆ?

ಬ್ಲೂ ಟೂಥ್ ಸಂಪರ್ಕ ಹೊಂದಿರುವ ಪುಟ್ಟ ಚಿಪ್‌ವೊಂದನ್ನು ಇವಿಎಂನಲ್ಲಿ ತೂರಿಸಬಹುದಾಗಿದೆ ಮತ್ತು ಮತದಾನ ನಡೆಯುತ್ತಿರುವಾಗ ಮೊಬೈಲ್ ಫೋನ್ ಮೂಲಕ ಈ ಚಿಪ್‌ನ್ನು ನಿಯಂತ್ರಿಸಿ ಫಲಿತಾಂಶದ ಮೇಲೆ ಪ್ರಭಾವ ಬೀರಬಹುದಾಗಿದೆ.

ಆದರೆ ಇದೇಕೆ ಸಾಧ್ಯವಿಲ್ಲ ?

ಆದರೆ ಇಂತಹ ಪುಟ್ಟ ಚಿಪ್‌ಗಳನ್ನು ಲಕ್ಷಾಂತರ ಸಂಖ್ಯೆಯಲ್ಲಿರುವ ಇವಿಎಂಗಳಲ್ಲಿ ಸೇರಿಸುವುದು ಅಸಾಧ್ಯವೇ ಸರಿ. ಅಲ್ಲದೆ ಈ ಬಗೆಯ ಅಕ್ರಮವನ್ನು ನಡೆಸಲು ವಿವಿಧ ಕೇಂದ್ರ ಮತ್ತು ರಾಜ್ಯ ಸರಕಾರಿ ಅಧಿಕಾರಿಗಳು ಸೇರಿದಂತೆ ವಿವಿಧ ಹಂತಗಳಲ್ಲಿ ಸಾವಿರಾರು ಜನರನ್ನು ತೊಡಗಿಸಿಕೊಳ್ಳಬೇಕಾಗುತ್ತದೆ ಮತ್ತು ಇಂತಹ ಸಾಹಸ ಅಕ್ರಮವನ್ನ್ನು ಸುಲಭವಾಗಿ ಬಯಲುಗೊಳಿಸುತ್ತದೆ.

ಇವಿಎಂಗಳ ಹ್ಯಾಕಿಂಗ್ ಸಾಧ್ಯವೇ?

ಸಾಕಷ್ಟು ಸುರಕ್ಷತೆಗಳನ್ನು ಹೊಂದಿರುವ ಬ್ಯಾಂಕ್ ಖಾತೆಯನ್ನೇ ಹ್ಯಾಕ್ ಮಾಡುತ್ತಿರುವಾಗ ಇವಿಎಂ ಹ್ಯಾಕಿಂಗ್ ಏಕೆ ಸಾಧ್ಯವಿಲ್ಲ ಎಂದು ಬಹಳಷ್ಟು ಜನರು ಹೇಳುತ್ತಾರೆ. ಹ್ಯಾಕ್ ಮಾಡಬೇಕಾದರೆ ಇಂಟರ್‌ನೆಟ್ ಸಂಪರ್ಕ ಬೇಕು ಮತ್ತು ಇವಿಎಂಗಳು ಇಂಟರ್‌ನೆಟ್ ಸಂಪರ್ಕ ಹೊಂದಿರುವುದಿಲ್ಲ. ಹೀಗಾಗಿ ಇವಿಎಂಗಳಲ್ಲಿ ಹ್ಯಾಕಿಂಗ್ ಸಾಧ್ಯವೇ ಇಲ್ಲ.

ಇವಿಎಂ ಸುರಕ್ಷತೆ ಶೇ.100ರಷ್ಟು ವಿಶ್ವಾಸಪಾತ್ರವೇ?

ಇಲ್ಲ. ಪ್ರತಿ ಇವಿಎಂ ಕೂಡ ಅಕ್ರಮಗಳನ್ನು ನಡೆಸಲು ಅಥವಾ ದೋಷಯುಕ್ತ ವಾಗಿರುವ ಎಲ್ಲ ಸಂಭವನೀಯತೆಯನ್ನು ಹೊಂದಿರುತ್ತದೆ. ಆದರೆ ಬೇಕಾದ ರೀತಿಯಲ್ಲಿ ಫಲಿತಾಂಶ ಬರುವಂತೆ ಮಾಡಲು ಸಾವಿರಾರು ಮತಯಂತ್ರಗಳಲ್ಲಿ ಕೈವಾಡ ನಡೆಸುವುದು ಪ್ರಾಯೋಗಿಕವಾಗಿ ಅಸಾಧ್ಯ ಎಂದೇ ಹೇಳಬಹುದು.

ವಿವಿಪಿಎಟಿ ಎಂದರೇನು?

ವಿವಿಪಿಎಟಿ ಅಥವಾ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರೇಲ್ ಅನ್ನು ಸರಳವಾಗಿ ತನ್ನ ಮತ ತಾನು ಬಯಸಿದ್ದ ಅಭ್ಯರ್ಥಿಗೇ ಬಿದ್ದಿದೆ ಎಂದು ಮತದಾರನು ಖಚಿತಪಡಿಸಿಕೊಳ್ಳಬಹುದಾದ ಮತದಾನದ ಮುದ್ರಿತ ರಸೀದಿ ಎಂದು ಹೇಳಬಹುದು. ಇವಿಎಂಗಳ ಬಗ್ಗೆ ಶಂಕೆಗಳನ್ನು ನಿವಾರಿಸಲು ವಿವಿಪಿಎಟಿ ಒಂದು ಸಾಧನವಾಗಬಹುದು ಎಂದು ಹೇಳಲಾಗುತ್ತಿದೆ. ಆದರೆ ಇದೂ ಕೂಡ ಸಂಪೂರ್ಣ ದೋಷಮುಕ್ತ ವ್ಯವಸ್ಥೆಯಲ್ಲ. ಇದೂ ಇವಿಎಂನಂತೆ ಕೆಲವು ಅಪಾಯಗಳಿಗೆ ತೆರೆದುಕೊಳ್ಳಬಹುದು.                                              

ಕೃಪೆ: ಇಕನಾಮಿಕ್ ಟೈಮ್ಸ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X