Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಡುಹಂದಿ ಬೇಟೆಯಾಡಿದ್ದ ಚಿರತೆ ಜನರ...

ಕಾಡುಹಂದಿ ಬೇಟೆಯಾಡಿದ್ದ ಚಿರತೆ ಜನರ ಗದ್ದಲಕ್ಕೆ ಪರಾರಿ...

ವಾರ್ತಾಭಾರತಿವಾರ್ತಾಭಾರತಿ16 March 2017 7:21 PM IST
share
ಕಾಡುಹಂದಿ ಬೇಟೆಯಾಡಿದ್ದ ಚಿರತೆ ಜನರ ಗದ್ದಲಕ್ಕೆ ಪರಾರಿ...

ಗುಂಡ್ಲುಪೇಟೆ, ಮಾ.16: ಕಾಡುಹಂದಿಯನ್ನುಎತ್ತರದ ಮರದ ಮೇಲೆತ್ತಿಕೊಂಡು ಹೋಗಿ  ಭಕ್ಷಣೆಯಲ್ಲಿ ತೊಡಗಿದ್ದ ಚಿರತೆಯು ಜನರ ಗದ್ದಲದಿಂದ ಬೇಟೆಯನ್ನು ಬಿಟ್ಟು ಪರಾರಿಯಾಗಿರುವ ಘಟನೆ ಸಾರ್ವಜನಿಕರ ಆತಂಕಕ್ಕೆ ಎಡೆ ಮಾಡಿರುವ ಘಟನೆ ತಾಲೂಕಿನ ಲಕ್ಕೂರಿನಲ್ಲಿ ನಡೆದಿದೆ.

ಮಾ.15ರ ರಾತ್ರಿ 10 ಘಂಟೆಯಲ್ಲಿ ಲಕ್ಕೂರು ಗ್ರಾಮದಿಂದ ತಮ್ಮಡಹಳ್ಳಿಗೆ ಹೋಗುವ ಮಾರ್ಗದಲ್ಲಿ ಕರಿಕಲ್ ಬಸವೇಶ್ವರ ದೇವಸ್ಥಾನದ ಸಮೀಪದಲ್ಲಿ ನಂದೀಶ್ ಎಂಬ ರೈತರ ಜಮೀನಿನಲ್ಲಿರುವ ಮರದ ಮೇಲೆ ಚಿರತೆಯೊಂದು ಕಾಣಿಸಿಕೊಂಡಿದೆ. ಇದರಿಂದ ಗಾಬರಿಗೊಂಡ ರೈತರು ಅಕ್ಕಪಕ್ಕದ ಜಮೀನುಗಳ ರೈತರ ನೆರವಿನಿಂದ ಸ್ಥಳಕ್ಕೆ ತೆರಳಿ ಟಾರ್ಚ್ ಬೆಳಕಿನಲ್ಲಿ ನೋಡಿದಾಗ ಕಾಡುಹಂದಿಯನ್ನು ಮರದ ಮೇಲೆತ್ತಿಕೊಂಡು ಹೋದ ಚಿರತೆ ಭಕ್ಷಣೆ ಮಾಡುತ್ತಿದ್ದುದು ಕಂಡು ಬಂದಿದೆ. ಆಗ ಜನರ ಗದ್ದಲದಿಂದ ಬೆದರಿದ ಚಿರತೆಯು ಮರದಿಂದ ಕೆಳಗೆ ಜಿಗಿದು ಕತ್ತಲಲ್ಲಿ ಕಣ್ಮರೆಯಾಗಿದೆ.

ಇದರಿಂದ ಜಮೀನಿನಲ್ಲಿ ನೆಲೆಸಿರುವ ರೈತರು ಮನೆಗಳಿಂದ ಹೊರಗೆ ಬರಲು ಸಾಧ್ಯವಾಗದೆ ಮುಂಜಾನೆ ಸಾರ್ವಜನಿಕರ ನೆರವಿನಿಂದ ಪರಿಶೀಲಿಸಿದಾಗ ಸ್ಥಳದಲ್ಲಿ ಚಿರತೆಯ ಹೆಜ್ಜೆಯ ಗುರುತುಗಳು ಕಂಡುಬಂದಿವೆ.

ಸಾರ್ವಜನಿಕರಲ್ಲಿಆತಂಕ:

ಜಮೀನಿನ ಮನೆಯ ಸಮೀಪವೇ ಚಿರತೆಯು ಬೇಟೆಯನ್ನುತಿನ್ನುತ್ತಿದ್ದ ಘಟನೆಯಿಂದ ಗ್ರಾಮಸ್ಥರು ಹಾಗೂ ರೈತರಲ್ಲಿಆತಂಕ ಹೆಚ್ಚುಮಾಡಿದೆ. ಅರಣ್ಯಇಲಾಖೆಯವರು ಕೂಡಲೇ ಚಿರತೆಯ ಬಂಧನಕ್ಕೆಕ್ರಮ ಕೈಗೊಳ್ಳಬೇಕು ಎಂದು ಗ್ರಾಮ ಪಂಚಾಯತ್ ಸದಸ್ಯ ನಾಗಭೂಷಣ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X