Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್;...

ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್; ಶೀಘ್ರದಲ್ಲೆ ಪರಿಣಾಮಕಾರಿ ಕಾಯ್ದೆ ಜಾರಿ: ಆರೋಗ್ಯ ಸಚಿವ ರಮೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ16 March 2017 7:36 PM IST
share
ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್; ಶೀಘ್ರದಲ್ಲೆ ಪರಿಣಾಮಕಾರಿ ಕಾಯ್ದೆ ಜಾರಿ: ಆರೋಗ್ಯ ಸಚಿವ ರಮೇಶ್ ಕುಮಾರ್

 ಬೆಂಗಳೂರು, ಮಾ. 15: ಚಿಕಿತ್ಸೆ ನೆಪದಲ್ಲಿ ಜನ ಸಾಮಾನ್ಯರಿಂದ ಹಣ ಸುಲಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ನಿಯಂತ್ರಣಕ್ಕೆ ಪರಿಣಾಮಕಾರಿ ಕಾಯ್ದೆಯಿಲ್ಲ. ಹೀಗಾಗಿ ನಿವೃತ್ತ ಮುಖ್ಯ ನ್ಯಾಯಮೂರ್ತಿ ವಿಕ್ರಂಜೀತ್ ಸೇನ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದು, ಸಮಿತಿ ಶಿಫಾರಸ್ಸು ಆಧರಿಸಿ ಶೀಘ್ರದಲ್ಲೆ ಪರಿಣಾಮಕಾರಿ ಕಾಯ್ದೆ ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ ಕೆ.ಆರ್.ರಮೇಶ್ ಕುಮಾರ್ ಭರವಸೆ ನೀಡಿದ್ದಾರೆ.

ಗುರುವಾರ ವಿಧಾನಸಭೆ ಪ್ರಶ್ನೋತ್ತರ ವೇಳೆಯಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ಸದಸ್ಯ ಕೆ.ಎಸ್.ಪುಟ್ಟಣ್ಣಯ್ಯ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ರಾಜ್ಯದಲ್ಲಿನ ಖಾಸಗಿ ಆಸ್ಪತ್ರೆಗಳು ಸಾಮಾನ್ಯ ಜನರನ್ನು ಶೋಷಿಸಿ, ದೋಚುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ ಎಂದು ಒಪ್ಪಿಕೊಂಡರು.

ಖಾಸಗಿ ಆಸ್ಪತ್ರೆಗಳಿಗೆ ಪರ್ಯಾಯವಾಗಿ ಸರಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳ ಹೆಚ್ಚಳ, ವೈದ್ಯರು-ಸಿಬ್ಬಂದಿ ನೇಮಕ ಹಾಗೂ ಸ್ವಚ್ಛತೆ ಕಾಪಾಡಲು ಆದ್ಯತೆ ನೀಡಲಾಗಿದೆ. ಅಲ್ಲದೆ, ಆಧುನಿಕ ಉಪಕರಣಗಳನ್ನು ಒದಗಿಸುವ ಮೂಲಕ ಸರಕಾರಿ ಆಸ್ಪತ್ರೆಗಳಲ್ಲಿ ಜನರಿಗೆ ಗುಣಮಟ್ಟದ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

2007ರ ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಗೆ ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಅಗತ್ಯ ತಿದ್ದುಪಡಿ ತರಲಾಗುವುದು. ಆ ಮೂಲಕ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಕಡಿವಾಣ ಹಾಕಲು ರಾಜ್ಯ ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ರಮೇಶ್ ಕುಮಾರ್ ಇದೇ ವೇಳೆ ತಿಳಿಸಿದರು.

 ರಾಜ್ಯ ಸರಕಾರ ಖಾಸಗಿ ಆಸ್ಪತ್ರೆಗಳ ವಿರೋಧಿ ಖಂಡಿತ ಅಲ್ಲ. ಜನಪರ ನಿಲುವು ಹೊಂದಿದೆ. ಪ್ರತಿಯೊಬ್ಬ ವ್ಯಕ್ತಿಯ ಜೀವ ಅತ್ಯಮೂಲ್ಯ. ಜನ ಸಾಮಾನ್ಯರ ಜೀವ ರಕ್ಷಣಗೆ ಎಲ್ಲರ ಆದ್ಯತೆ. ಸರಕಾರ ತನ್ನ ಜವಾಬ್ದಾರಿಯಿಂದ ಯಾವುದೇ ಕಾರಣಕ್ಕೂ ನುಣುಚಿಕೊಳ್ಳುವುದಿಲ್ಲ ಎಂದು ಅವರು ಅಭಯ ನೀಡಿದರು.

ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಕೆ.ಎಸ್.ಪುಟ್ಟಣ್ಣಯ್ಯ, ಖಾಸಗಿ ಆಸ್ಪತ್ರೆಗಳಿಗೆ ಸಣ್ಣ ಚಿಕಿತ್ಸೆಗಾಗಿ ಹೋದರೂ 8 ಲಕ್ಷ ರೂ.ಗಳಿಂದ 15-20 ಲಕ್ಷ ರೂ.ಬಿಲ್ ಮಾಡ್ತಾರೆ. ಇವರ ನಿಯಂತ್ರಣಕ್ಕೆ ಯಾವುದೇ ಕಾನೂನು ಇಲ್ಲವೇ? ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಸರಕಾರ ಕಡಿವಾಣ ಹಾಕಬೇಕೆಂದು ಆಗ್ರಹಿಸಿದರು.

ಸಕ್ಕರೆ ಕಾಯಿಲೆ ತೀವ್ರ ಸ್ವರೂಪದಲ್ಲಿ ಹರಡುತ್ತಿದ್ದು, ಚಿಕಿತ್ಸೆ ಕೊಡಿಸುವುದರ ಜೊತೆಗೆ ಸಕ್ಕರೆ ಕಾಯಿಲೆ ನಿಯಂತ್ರಣಕ್ಕೆ ಜನರಲ್ಲಿ ಜಾಗೃತಿ ಮೂಡಿಸಲು ಸರಕಾರ ಆದ್ಯತೆ ನೀಡಬೇಕು. ಸಂಚಾರಿ(ಮೊಬೈಲ್) ಆಸ್ಪತ್ರೆ ಘಟಕ ಆರಂಭಿಸಬೇಕು. ಅಲ್ಲದೆ, ಸರಕಾರಿ ಆಸ್ಪತ್ರೆಗಳ ಸ್ವಚ್ಛತೆ ಕಾಪಾಡಲು ಆಸ್ಥೆ ವಹಿಸಬೇಕು ಅವರು ಎಂದು ಸಲಹೆ ನೀಡಿದರು.

ಖಾಸಗಿ ಆಸ್ಪತ್ರೆಗಳೆಂಬ ಕಸಾಯಿಖಾನೆ

ಖಾಸಗಿ ಆಸ್ಪತ್ರೆಗಳು ಜನರ ಪಾಲಿಗೆ ‘ಕಸಾಯಿಖಾನೆ’ಗಳಾಗಿದ್ದು, ಚಿಕಿತ್ಸೆ ನೆಪದಲ್ಲಿ ಸುಲಿಗೆ ಮಾಡುತ್ತಿವೆ. ಕ್ಷೌರದ ಅಂಗಡಿಗಳಲ್ಲಿ ಕೂದಲು ಕತ್ತರಿಸಲು, ತಲೆ-ಗಡ್ಡ ಬೋಳಿಸಲು ದರ ಪಟ್ಟಿ ಹಾಕಿರುತ್ತಾರೆ. ಆದರೆ, ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯರು ಕೈ ಮುಟ್ಟಿದರೆ 500ರೂ.ಕೊಡಬೇಕು. ನಮ್ಮ ಕೈ ಮುಟ್ಟಿದರೆ ಅವರಿಗೆ ವಿದ್ಯುತ್ ಶಾಕ್ ಆಗುತ್ತದೆಯೇ.

-ಕೆ.ಎಸ್.ಪುಟ್ಟಣ್ಣಯ್ಯ ಮೇಲುಕೋಟೆ ಶಾಸಕ

ಆಡಳಿತ ಸುಧಾರಣೆಗಾಗಿ ಜಾರಿಗೆ ತರುವ ನಿಯಮಗಳು ಕೆಲವೊಮ್ಮೆ ದುರ್ಬಳಕೆ ಆಗುತ್ತಿವೆ. ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಸಿಬ್ಬಂದಿ ಶೋಷಣೆ ತಪ್ಪಿಸಲು ತಾನೆ ಖುದ್ದಾಗಿ ಕೆಲ ಕಡೆಗಳನ್ನು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದಿನಗೂಲಿ ನೌಕರರಿಗೆ ಅನ್ಯಾಯ ಆಗದಂತೆ ಕ್ರಮ ವಹಿಸಲಾಗಿದೆ.

-ಕೆ.ಆರ್.ರಮೇಶ್‌ಕುಮಾರ್ ಆರೋಗ್ಯ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X