Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪರಿಷ್ಕೃತ ನಿಷೇಧ ಆದೇಶಕ್ಕೂ ತಡೆಯಾಜ್ಞೆ :...

ಪರಿಷ್ಕೃತ ನಿಷೇಧ ಆದೇಶಕ್ಕೂ ತಡೆಯಾಜ್ಞೆ : ಹವಾಯಿ ಫೆಡರಲ್ ನ್ಯಾಯಾಲಯದ ತೀರ್ಪು; ಮತ್ತೊಮ್ಮೆ ಟ್ರಂಪ್‌ಗೆ ಭಾರೀ ಮುಖಭಂಗ

ವಾರ್ತಾಭಾರತಿವಾರ್ತಾಭಾರತಿ16 March 2017 7:47 PM IST
share
ಪರಿಷ್ಕೃತ ನಿಷೇಧ ಆದೇಶಕ್ಕೂ ತಡೆಯಾಜ್ಞೆ : ಹವಾಯಿ ಫೆಡರಲ್ ನ್ಯಾಯಾಲಯದ ತೀರ್ಪು; ಮತ್ತೊಮ್ಮೆ ಟ್ರಂಪ್‌ಗೆ ಭಾರೀ ಮುಖಭಂಗ

ಹೊನೊಲುಲು (ಅಮೆರಿಕ), ಮಾ. 16: ಆರು ಮುಸ್ಲಿಮ್ ದೇಶಗಳ ನಿವಾಸಿಗಳಿಗೆ ಅಮೆರಿಕ ಪ್ರವೇಶವನ್ನು ನಿಷೇಧಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಪರಿಷ್ಕೃತ ಆದೇಶಕ್ಕೆ ಹವಾಯಿ ರಾಜ್ಯದ ಫೆಡರಲ್ ನ್ಯಾಯಾಲಯವೊಂದು ಬುಧವಾರ ತಡೆಯಾಜ್ಞೆ ನೀಡಿದೆ.ಆದೇಶವು ಜಾರಿಗೆ ಬಂದರೆ ‘ಸರಿಪಡಿಸಲಾಗದ ಹಾನಿ’ಯನ್ನು ಉಂಟು ಮಾಡುವ ಸಾಧ್ಯತೆಯನ್ನು ಹವಾಯಿ ರಾಜ್ಯ ಸಾಬೀತುಪಡಿಸಿದೆ ಎಂದು ಅಮೆರಿಕದ ಜಿಲ್ಲಾ ನ್ಯಾಯಾಧೀಶ ಡೆರಿಕ್ ವಾಟ್ಸನ್ ತೀರ್ಪು ನೀಡಿದರು.

ಪರಿಷ್ಕೃತ ನಿಷೇಧ ಆದೇಶವನ್ನು ಪ್ರಶ್ನಿಸಿ ಹವಾಯಿ ನ್ಯಾಯಾಲಯದ ಮೆಟ್ಟಿಲೇರಿತ್ತು. ನಿಷೇಧದ ವಿರುದ್ಧ ಮೂರು ಮೊಕದ್ದಮೆಗಳು ದಾಖಲಾಗಿದ್ದು, ಹೊನೊಲುಲು ನ್ಯಾಯಾಲಯದ ತೀರ್ಪು ಮೊದಲನೆಯದಾಗಿದೆ.ಆದೇಶವು ಗುರುವಾರ (ಮಾರ್ಚ್ 16) ಮಧ್ಯರಾತ್ರಿಯಿಂದ ಜಾರಿಗೆ ಬರಲಿದೆ.ವಾಶಿಂಗ್ಟನ್ ಮತ್ತು ಮೇರಿಲ್ಯಾಂಡ್ ರಾಜ್ಯಗಳಲ್ಲಿ ಸಲ್ಲಿಕೆಯಾಗಿರುವ ಮೊಕದ್ದಮೆಗಳ ತೀರ್ಪುಗಳೂ ಬುಧವಾರ ರಾತ್ರಿಯ ವೇಳೆಗೆ ಹೊರಬೀಳುವ ನಿರೀಕ್ಷೆಯಿದೆ.

ಈ ತೀರ್ಪು ಪರಿಷ್ಕೃತ ನಿಷೇಧ ಆದೇಶದ ಎರಡನೆ ಪರಿಚ್ಛೇದ ಅಮೆರಿಕದಾದ್ಯಂತ ಜಾರಿಗೆ ಬರುವುದನ್ನು ತಡೆಯುತ್ತದೆ. ಎರಡನೆ ಪರಿಚ್ಛೇದವು ಇರಾನ್, ಲಿಬಿಯ, ಸೊಮಾಲಿಯ, ಸುಡಾನ್, ಸಿರಿಯ ಮತ್ತು ಯಮನ್ ದೇಶಗಳ ನಾಗರಿಕರು 90 ದಿನಗಳ ಕಾಲ ಅಮೆರಿಕ ಪ್ರವೇಶಿಸುವುದನ್ನು ನಿಷೇಧಿಸುತ್ತದೆ.

ನಿರಾಶ್ರಿತರಿಗೆ ಅಮೆರಿಕದಲ್ಲಿ ಆಶ್ರಯ ನೀಡುವ ಕಾರ್ಯಕ್ರಮವನ್ನು 120 ದಿನಗಳ ಕಾಲ ಅಮಾನತಿನಲ್ಲಿಡುವ ಉದ್ದೇಶದ ಆರನೆ ಪರಿಚ್ಛೇದಕ್ಕೂ ತೀರ್ಪು ತಡೆಯಾಜ್ಞೆ ನೀಡಿದೆ.ಈ ಬಗ್ಗೆ ಶ್ವೇತಭವನ ತಕ್ಷಣಕ್ಕೆ ಪ್ರತಿಕ್ರಿಯೆ ನೀಡಿಲ್ಲ. ಭಯೋತ್ಪಾದಕರು ಅಮೆರಿಕ ಪ್ರವೇಶಿಸುವುದನ್ನು ತಡೆಯುವುದಕ್ಕಾಗಿ ಆದೇಶ ಹೊರಡಿಸಲಾಗಿದೆ ಎಂದು ಅದು ವಾದಿಸಿದೆ.

ಏಳು ಮುಸ್ಲಿಮ್ ದೇಶಗಳ ನಾಗರಿಕರು ಅಮೆರಿಕ ಪ್ರವೇಶಿಸುವುದನ್ನು ನಿಷೇಧಿಸುವ ಮೂಲ ಆದೇಶವನ್ನು ಟ್ರಂಪ್ ಜನವರಿ 27ರಂದು ಹೊರಡಿಸಿದ್ದರು. ಆ ಆದೇಶವು ಭಾರೀ ಗೊಂದಲಕ್ಕೆ ಕಾರಣವಾಗಿತ್ತು.ಆದರೆ, ಸಿಯಾಟಲ್‌ನ ಫೆಡರಲ್ ನ್ಯಾಯಾಲಯವೊಂದು ಬಳಿಕ ಅದಕ್ಕೆ ತಡೆಯಾಜ್ಞೆ ನೀಡಿತು.ಈ ಹಿನ್ನೆಲೆಯಲ್ಲಿ ಟ್ರಂಪ್, ಇತ್ತೀಚೆಗೆ ಪರಿಷ್ಕೃತ ಆದೇಶವನ್ನು ಹೊರಡಿಸಿದರು. ನೂತನ ಆದೇಶದಲ್ಲಿ, ನಿಷೇಧಿತ ದೇಶಗಳ ಮೂಲ ಪಟ್ಟಿಯಿಂದ ಇರಾಕನ್ನು ಹೊರಗಿಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X