Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯುಜಿಸಿಯಿಂದ ಸಾಮಾಜಿಕ ತಾರತಮ್ಯ ಸಂಶೋಧನಾ...

ಯುಜಿಸಿಯಿಂದ ಸಾಮಾಜಿಕ ತಾರತಮ್ಯ ಸಂಶೋಧನಾ ಕೇಂದ್ರಗಳಿಗೆ ಅನುದಾನ ಸ್ಥಗಿತ

ವಾರ್ತಾಭಾರತಿವಾರ್ತಾಭಾರತಿ17 March 2017 2:06 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಯುಜಿಸಿಯಿಂದ ಸಾಮಾಜಿಕ ತಾರತಮ್ಯ ಸಂಶೋಧನಾ ಕೇಂದ್ರಗಳಿಗೆ ಅನುದಾನ ಸ್ಥಗಿತ

 ಹೊಸದಿಲ್ಲಿ,ಮಾ.17: ಪ್ರಧಾನಿ ನರೇಂದ್ರ ಮೋದಿ ಸರಕಾರದ ಮಾತು ಹಾಗೂ ಕೃತಿಗಳು ಎರಡು ವಿಭಿನ್ನ ದಿಕ್ಕುಗಳಲ್ಲಿ ಸಾಗುತ್ತವೆಂಬುದಕ್ಕೆ ಗುರುವಾರ ಮತ್ತೊಂದು ನಿದರ್ಶನ ದೊರೆತಿದೆ. ಸಂವಿಧಾನಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ 125ನೇ ಜನ್ಮದಿನಾಚರಣೆಯ ಹಿನ್ನೆಲೆಯಲ್ಲಿ ದಲಿತ ಸಮುದಾಯವನ್ನು ಸಮೀಪಿಸುವ ವಿನೂತನ ಯೋಜನೆಯೊಂದ್ನು ಪ್ರಕಟಿಸಿರುವ ಜೊತೆಗೆ, ಅವರ ಸರಕಾರವು ದೇಶಾದ್ಯಂತದ ಹಲವಾರು ವಿಶ್ವವಿದ್ಯಾನಿಲಯಗಳಲ್ಲಿ ಸಾಮಾಜಿಕ ತಾರತಮ್ಯವನ್ನು ಅಧ್ಯಯನಕ್ಕಾಗಿನ ಸಂಶೋಧನಾ ಕೇಂದ್ರಳಿಗೆ ನೀಡುತ್ತಿರುವ ಅನುದಾನವನ್ನು ಕಡಿತಗೊಳಿಸಿದೆ.

    ಟೆಲಿಗ್ರಾಫ್ ಪತ್ರಿಕೆಯಲ್ಲಿ ಪ್ರಕಟವಾದ ವರದಿಯ ಪ್ರಕಾರ ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ)ವು 11ನೇ ಪಂಚವಾರ್ಷಿಕ ಯೋಜನೆಯಡಿ ಸ್ಥಾಪಿಸಲಾದ ಹಾಗೂ 12ನೆ ಪಂಚವಾರ್ಷಿಕ ಯೋಜನೆಯಲ್ಲಿ ನವೀಕರಿಸಲಾದ ಹಲವಾರು ಸಂಶೋಧನಾ ಕೇಂದ್ರಗಳಿಗೆ ಅರ್ಥಿಕ ನೆರವನ್ನು ಕಡಿತಗೊಳಿಸಿದೆ. ಇಂತಹ ಕೇಂದ್ರಗಳನ್ನು ಹೊಂದಿರುವ ವಿಶ್ವವಿದ್ಯಾನಿಲಯಗಳಿಗೆ ಯುಜಿಸಿಯು ಇತ್ತೀಚೆಗೆ ಸುತ್ತೋಲೆಯನ್ನು ಕಳುಹಿಸಿ, ಈ ಯೋಜನೆಗಾಗಿ ನೀಡುತ್ತಿರುವ ಆರ್ಥಿಕ ನೆರವನ್ನು ಮಾರ್ಚ್ 31ರಿಂದ ಕಡಿತಗೊಳಿಸುವುದಾಗಿ ಹೇಳಿದೆ.

 ‘‘ಕೇಂದ್ರ ಮಾನವಸಂಪನ್ಮೂಲ ಅಭಿವೃದ್ಧಿ ಇಲಾಖೆಯಿಂದ ಬಂದಿರುವ ಆದೇಶದ ಪ್ರಕಾರ 12ನೆ ಪಂಚವಾರ್ಷಿಕ ಯೋಜನೆಯ ಮುಕ್ತಾಯದ ಬಳಿಕ ಯುಜಿಸಿಯು, ಸಂಬಂಧಪಟ್ಟ ಕೇಂದ್ರಕ್ಕೆ ಅರ್ಥಿಕ ನೆರವನ್ನು ಒದಗಿಸುವುದಿಲ್ಲವೆಂದು ನಿಮಗೆ ತಿಳಿಸಲು ನನಗೆ ಆದೇಶ ಬಂದಿದೆ’’ ಎಂದು ಯುಜಿಸಿಯ ಅಧೀನಕಾರ್ಯದರ್ಶಿ ಸುಷ್ಮಾ ರಾಥೋರ್ ಆದೇಶದಲ್ಲಿ ತಿಳಿಸಿದ್ದು, ಅದರ ಪ್ರತಿಯೊಂದು ದಿ ಟೆಲಿಗ್ರಾಫ್ ಪತ್ರಿಕೆಗೆ ದೊರೆತಿದೆ.

       ವಿಶ್ವವಿದ್ಯಾನಿಲಯಗಳಿಂದ ಸುಸಜ್ಜಿತವಾದ ವಿಭಾಗಗಳಾಗಿ ಅಭಿವೃದ್ಧಿಪಡಿಸಿರದಂತಹ ಎಲ್ಲಾ ಕೇಂದ್ರಗಳಿಗೂ ಈ ಆದೇಶವನ್ನು ಕಳುಹಿಸಲಾಗಿದೆಯೆಂದು ಮಾನವಸಂಪನ್ಮೂಲಾಭಿವೃದ್ಧಿ ಸಚಿವಾಲಯ ಹಾಗೂ ಯುಜಿಸಿಯ ಮೂಲಗಳು ತಿಳಿಸಿವೆ. ಆದರೆ ಸಾಮಾಜಿಕ ತಾರತಮ್ಯದ ಕುರಿತ ಸಂಶೋಧನಾ ಕೇಂದ್ರಗಳಿಗೆ ಅನುದಾನ ಕಡಿತಗೊಳಿಸುವ ಕೇಂದ್ರ ಸರಕಾರ ಹಾಗೂ ಯುಜಿಸಿಯ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ‘‘ ಯುಜಿಸಿಯು ವೇದ ಅಧ್ಯಯನ ಕುರಿತ ಕೋರ್ಸ್‌ಗಳಿಗೆ ಆರ್ಥಿಕ ನೆರವನ್ನು ನೀಡುತ್ತಿರುವಾಗ, ದಲಿತರು, ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವಗಳು, ಸಾಮಾಜಿಕ ಬೇರ್ಪಡುಸುವಿಕೆ ಹಾಗೂ ಮೀಸಲಾತಿಯಂತಹ ಒಳಪಡಿಸುವಿಕೆಯ ನೀತಿಗಳ ಬಗ್ಗೆ ಅಧ್ಯಯವ ನಡೆಸುತ್ತಿರುವ ಈ ಕೇಂದ್ರಗಳನ್ನು ಮುಚ್ಚುತ್ತಿರುವುದು ವಿಷಾದಕರವಾಗಿದೆ’’ ಎಂದು ದಿಲ್ಲಿ ವಿವಿಯಲ್ಲಿ ರಾಜಕೀಯಶಾಸ್ತ್ರದ ಉಪನ್ಯಾಸಕ ಹಾಗೂ ಅಂಬೇಡ್ಕರ್ ಅಧ್ಯಯನ ಕೇಂದ್ರದ ವಿಧ್ವಾಂಸ ಎನ್.ಸಕುಮಾರ್ ಹೇಳುತ್ತಾರೆ.

 ಕೇಂದ್ರ ಹಾಗೂ ಯುಜಿಸಿಯ ಈ ಕ್ರಮದಿಂದಾಗಿ ಅಂಬೇಡ್ಕರ್ ಅಧ್ಯಯನ ಕೇಂದ್ರದಲ್ಲಿ ಅಧ್ಯಯನ ನಡೆಸುತ್ತಿರುವ ಎಂಫಿಲ್ ಹಾಗೂ ಪಿಎಚ್‌ಡಿ ಇದ್ಯಾರ್ಥಿಗಳು ಇತರ ವಿಭಾಗಗಳಿಗೆ ವರ್ಗಾವಣೆಗೊಳ್ಳಲಿದ್ದರೆ, ಬೋಧಕವರ್ಗವು ತಮ್ಮ ಉದ್ಯೋಗಗಳನ್ನು ಕಳೆದುಕೊಳ್ಳುವ ಭೀತಿಯಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X