Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿಯನ್ನು ಹೋಲುವ ಈ ವ್ಯಕ್ತಿ...

ಪ್ರಧಾನಿ ಮೋದಿಯನ್ನು ಹೋಲುವ ಈ ವ್ಯಕ್ತಿ ಆಗಲಿದ್ದಾರೆಯೇ ಉತ್ತರ ಪ್ರದೇಶದ ಹೊಸ ಸಿಎಂ ?

ವಾರ್ತಾಭಾರತಿವಾರ್ತಾಭಾರತಿ17 March 2017 10:10 PM IST
share
ಪ್ರಧಾನಿ ಮೋದಿಯನ್ನು ಹೋಲುವ ಈ ವ್ಯಕ್ತಿ ಆಗಲಿದ್ದಾರೆಯೇ ಉತ್ತರ ಪ್ರದೇಶದ ಹೊಸ ಸಿಎಂ ?

ಹೊಸದಿಲ್ಲಿ, ಮಾ. 17 : ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆಗೆ ದಿನ, ಸಮಯ, ಸ್ಥಳ ಎಲ್ಲವೂ ನಿಗದಿಯಾಗಿದೆ. ಆದರೆ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದು ಮಾತ್ರ ಇನ್ನೂ ತಿಳಿದುಬಂದಿಲ್ಲ. ಲಕ್ನೋದ ಸ್ಮೃತಿ ಉಪವನದಲ್ಲಿ ರವಿವಾರ ಸಂಜೆ ಐದು ಗಂಟೆಗೆ ನೂತನ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಹಾಗು ಸಚಿವರು ಪ್ರಮಾಣ ವಚನ ಸ್ವೀಕರಿಸಲು ತಯಾರಿ ನಡೆಯುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಹಾಗು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮಾತ್ರ ಇನ್ನೂ ಹೊಸ ಮುಖ್ಯಮಂತ್ರಿ ಯಾರು ಎಂಬುದನ್ನೂ ರಹಸ್ಯವಾಗಿಟ್ಟಿದ್ದಾರೆ. 


ಈ ನಡುವೆ ಮುಖ್ಯಮಂತ್ರಿಯಾಗಿ ಅಚ್ಚರಿಯ ಅಭ್ಯರ್ಥಿಯನ್ನು ನರೇಂದ್ರ ಮೋದಿ ಹಾಗು ಅಮಿತ್ ಷಾ ಅವರು ನೀಡಲಿದ್ದಾರೆ ಎಂದು ವರದಿಯೊಂದು ತಿಳಿಸಿದೆ. http://postcard.news ಎಂಬ ಬಲಪಂಥೀಯ ನಿಲುವಿನ, ಕಟ್ಟಾ ಬಿಜೆಪಿ ಬೆಂಬಲಿಗ ವೆಬ್ ಸೈಟ್ ನಲ್ಲಿ ಪ್ರಕಟವಾಗಿರುವ ವರದಿಯ ಪ್ರಕಾರ ಉತ್ತರ ಪ್ರದೇಶದಲ್ಲಿ  ಕಟ್ಟಾ ಆರೆಸ್ಸೆಸ್ಸಿಗ ಹಾಗು ಪ್ರಸ್ತುತ ರಾಜ್ಯ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿರುವ ಸ್ವತಂತ್ರ ದೇವ್ ಸಿಂಗ್ ಅವರನ್ನು ಮೋದಿ ಹಾಗು ಷಾ ಅವರು ಈ ಮಹತ್ವದ ಹುದ್ದೆಗೆ  ಆಯ್ಕೆ ಮಾಡುವ ಸಾಧ್ಯತೆ ಇದೆ. 

ರಾಜ್ ನಾಥ್ ಸಿಂಗ್, ಮನೋಜ್ ಸಿನ್ಹ , ಕೇಶವ್ ಪ್ರಸಾದ್ ಮೌರ್ಯ , ಯೋಗಿ ಆದಿತ್ಯನಾಥ್ ಮತ್ತಿತರರ ಹೆಸರುಗಳು ಸಿಎಂ ಹುದ್ದೆಗೆ ಕೇಳಿಬಂದಿದ್ದರೂ ಈವರೆಗೆ ಯಾವುದೇ ಮಾಧ್ಯಮಗಳು ಅಥವಾ ರಾಜಕೀಯ ವಿಶ್ಲೇಷಕರು ಸ್ವತಂತ್ರ ದೇವ್ ಸಿಂಗ್ ಅವರ ಹೆಸರನ್ನು ಉಲ್ಲೇಖ ಕೂಡ ಮಾಡಿಲ್ಲ. ಹೆಚ್ಚಿನವರಿಗೆ ಈ ಹೆಸರೇ ಹೊಸತು. 

ಆದರೆ postcard.news ಪ್ರಕಾರ ಕಳೆದ ಮೂರು ದಶಕಗಳಿಂದ ಆರೆಸ್ಸೆಸ್, ಎಬಿವಿಪಿ, ಬಿಜೆಪಿ ಯುವಮೋರ್ಚಾಗಳಲ್ಲಿ ಅತ್ಯಂತ ಸಕ್ರಿಯ ಹಾಗು ಮುಂಚೂಣಿಯ ಪದಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಸ್ವತಂತ್ರ ದೇವ್ ಮೋದಿ ಹಾಗು ಷಾ ಅವರ ಅತ್ಯಂತ ನಂಬಿಕಸ್ತ ನಾಯಕ. ಹೆಚ್ಚು ಪ್ರಚಾರದಲ್ಲಿಲ್ಲದ ಆದರೆ ಪಕ್ಷ ಹಾಗು ಸಂಘದ ಕೆಲಸಕ್ಕೆ ಸದಾ ಆದ್ಯತೆ ನೀಡುತ್ತಾ ಬಂದಿರುವ ವ್ಯಕ್ತಿ. ಬೂತ್ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಪಕ್ಷದ ಕೆಲಸ ಮಾಡಿ ಪಳಗಿರುವ , ಪಕ್ಷದ ಸಿದ್ಧಾಂತಗಳಿಗೆ ಬದ್ಧವಾಗಿರುವ ಸ್ವತಂತ್ರ ದೇವ್ ಅವರಿಗೆ ಈ ಬಾರಿ ಮೋದಿ ದೊಡ್ಡ ಬಹುಮಾನ ನೀಡಲಿದ್ದಾರೆ ಎಂದು ಈ ವೆಬ್ ಸೈಟ್ ವರದಿ ಮಾಡಿದೆ. 

ಕಳೆದ ಲೋಕಸಭಾ ಚುನಾವಣೆ ಹಾಗು ಉತ್ತರ ಪ್ರದೇಶ ವಿಧಾನ ಸಭಾ ಚುನಾವಣೆಗಳಲ್ಲೂ ತೆರೆಮರೆಯಲ್ಲಿ ಅತ್ಯಂತ ನಿರ್ಣಾಯಕ ಕೆಲಸವನ್ನು ಸ್ವತಂತ್ರ ದೇವ್ ಮಾಡಿದ್ದಾರೆ ಎಂದು ವೆಬ್ ಸೈಟ್ ಹೇಳಿದೆ.

ಶನಿವಾರ ಉತ್ತರ ಪ್ರದೇಶದ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದೆ. ಅಲ್ಲಿ ಈಗ ಹೆಚ್ಚಿನ ವರದಿಗಳಲ್ಲಿ ಬಂದಿರುವಂತೆ ಮನೋಜ್ ಸಿನ್ಹ ಅವರು ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಾರೆಯೇ ಅಥವಾ ರಾಜ್ಯಕ್ಕೆ ಮೋದಿ , ಷಾ ಅವರು  ಸ್ವತಂತ್ರ ದೇವ್ ರೂಪದಲ್ಲಿ ದೊಡ್ಡ ಅಚ್ಚರಿ ನೀಡುತ್ತಾರೆಯೇ ಎಂದು ನೋಡಬೇಕು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X