Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗದಲ್ಲಿ ಕುಡಿಯುವ ನೀರಿಗೆ ತೀವ್ರ...

ಶಿವಮೊಗ್ಗದಲ್ಲಿ ಕುಡಿಯುವ ನೀರಿಗೆ ತೀವ್ರ ಹಾಹಾಕಾರ!

ವಾರ್ತಾಭಾರತಿವಾರ್ತಾಭಾರತಿ17 March 2017 10:51 PM IST
share

ಶಿವಮೊಗ್ಗ, ಮಾ. 17: ಶಿವಮೊಗ್ಗ ನಗರಕ್ಕೆ ನೀರು ಪೂರೈಕೆಯಾಗುವ ಗಾಜನೂರಿನ ತುಂಗಾ ಜಲಾಶಯದಲ್ಲಿ ನೀರಿನ ಕೊರತೆಯಾಗಿಲ್ಲ. ಆದರೆ, ಇತ್ತೀಚೆಗೆ ನಾನಾ ಕಾರಣಗಳಿಂದ ನಗರದ ಕೆಲ ಬಡಾವಣೆಗಳಲ್ಲಿ ಕುಡಿಯುವ ನೀರಿಗೆ ತೀವ್ರ ಹಾಹಾಕಾರ ಉಂಟಾಗಿದೆ. ಈ ನಡುವೆ ದುರಸ್ತಿಯ ಹಿನ್ನೆಲೆಯಲ್ಲಿ ಗುರುವಾರ ಹಾಗೂ ಶುಕ್ರವಾರ ನಗರಾದ್ಯಂತ ಕುಡಿಯುವ ನೀರು ಪೂರೈಕೆ ಸ್ಥಗಿತಗೊಳಿಸಿದ್ದರಿಂದ ನಾಗರಿಕರು ನೀರಿಗಾಗಿ ಪರಿತಪಿಸುವಂತಹ ಸ್ಥಿತಿ ನಿರ್ಮಾಣವಾಗಿದೆ.

ನಗರಕ್ಕೆ ಗಾಜನೂರಿನಿಂದ ನೀರು ಪೂರೈಕೆಯಾಗುವ 1,000 ಮಿ.ಮೀ. ವ್ಯಾಸದ ಗ್ರಾವಿಟಿ ಕೊಳವೆ ಮಾರ್ಗ ಮತ್ತು ಕೆ.ಆರ್. ವಾಟರ್ ವರ್ಕ್ಸ್ ನಿಂದ ಮೇಲ್ಮಟ್ಟದ ಜಲ ಸಂಗ್ರಹಗಾರಗಳಿಗೆ ನೀರು ಪೂರೈಕೆ ಮಾಡುವ ರೈಸಿಂಗ್ ಕೊಳವೆ ಮಾರ್ಗದಲ್ಲಿ ಉಂಟಾಗುವ ನೀರು ಸೋರಿಕೆಯನ್ನು ದುರಸ್ತಿ ಪಡಿಸುವ ಕಾರ್ಯವನ್ನು ಕರ್ನಾಟಕ ನಗರ ನೀರು ಮತ್ತು ಒಳಚರಂಡಿ ಮಂಡಳಿ ಕೈಗೆತ್ತಿಕೊಂಡಿದೆ. ನೀರು ಪೂರೈಕೆಗೆ ಸಂಬಂಧಿಸಿದ ವಿದ್ಯುತ್ ಸ್ಥಾವರಗನಿರ್ವಹಣೆ ಕಾರ್ಯವನ್ನು ಮಾ. 16 ಮತ್ತು 17 ರಂದು ಮಾಡುತ್ತಿದ್ದು, ಇದರಿಂದ ಗಾಜನೂರು ತುಂಗಾ ಜಲಾಶಯದಿಂದ ನಗರಕ್ಕೆ ನೀರು ಪೂರೈಕೆ ಸ್ಥಗಿತಗೊಳಿಸಿತ್ತು. ತೊಂದರೆ: ಪ್ರಸ್ತುತ ನಗರಾದ್ಯಂತ ಸುಡು ಬಿಸಿಲು ಆವರಿಸಿದೆ.

ಕುಡಿಯುವ ನೀರಿಗೆ ಸಾಕಷ್ಟು ಬೇಡಿಕೆ ಕಂಡುಬರುತ್ತಿದೆ. ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಲ ಬಡಾವಣೆಗಳಿಗೆ ಪೂರೈಕೆಯಾಗುತ್ತಿರುವ ನೀರಿನ ಪ್ರಮಾಣ ಕಡಿಮೆಯಾಗಿದೆ. ಈ ನಡುವೆ ಸತತ ಎರಡು ದಿನಗಳ ಕಾಲ ನೀರು ಸ್ಥಗಿತಗೊಳಿಸುವ ನಿರ್ಧಾರದಿಂದ ನಗರದ ಬಹುತೇಕ ನಾಗರಿಕರು ಕುಡಿಯುವ ನೀರಿಗೆ ಪರಿತಪಿಸುವಂತಾಗಿದೆ. ಪರ್ಯಾಯ ವ್ಯವಸ್ಥೆಯಿಲ್ಲ: ಸತತ ಎರಡು ದಿನಗಳ ಕಾಲ ನೀರು ಪೂರೈಕೆ ಸ್ಥಗಿತಗೊಳಿಸಿದ್ದರೂ ನೀರಿಗೆ ತೀವ್ರ ಹಾಹಾಕಾರ ಕಂಡುಬರುವ ಸ್ಥಳಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವ ವ್ಯವಸ್ಥೆಯನ್ನು ನೀರು ಸರಬರಾಜು ಮಂಡಳಿ ಮಾಡಿಕೊಂಡಿಲ್ಲ.

ಇದಕ್ಕೆ ನಾಗರಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಪೂರೈಸುವ ವ್ಯವಸ್ಥೆಯನ್ನು ಅಧಿಕಾರಿಗಳು ಮಾಡಿಕೊಳ್ಳದಿರುವುದಕ್ಕೆ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ಬೊಮ್ಮನಕಟ್ಟೆಯ ಕೆಲ ಪ್ರದೇಶಗಳಿಗೆ 2-3ದಿನಗಳಿಗೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ಇದರಿಂದ ನೀರಿಗೆ ಪರಿತಪಿಸುವಂತಹ ಸ್ಥಿತಿ ಯಿದೆ. ಇದೀಗ ಎರಡು ದಿನಗಳ ಕಾಲ ನಿರಂತರವಾಗಿ ನೀರು ಪೂರೈಕೆ ಸ್ಥಗಿತಗೊಳಿಸುವುದರಿಂದ ಸಮಸ್ಯೆ ಹೆಚ್ಚಾಗಿದೆ. ವಿಜಯ್, ಬೊಮ್ಮನಕಟ್ಟೆಯ ನಿವಾಸಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X