Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆದ...

ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆದ ಕಾಪು ಈಗ ತಾಲೂಕು ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ18 March 2017 12:09 AM IST
share
ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆದ ಕಾಪು ಈಗ ತಾಲೂಕು ಕೇಂದ್ರ

ಕಾಪು, ಮಾ.17: ಕಾಪು ಲೈಟ್‌ಹೌಸ್, ಶಂಕರಪುರ ಮಲ್ಲಿಗೆ, ಮಟ್ಟು ಗುಳ್ಳ ಹೀಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಗಮನಸೆಳೆದ ಕಾಪು ಇದೀಗ ತಾಲೂಕು ಕೇಂದ್ರವಾಗಿ ಘೋಷಣೆಯಾಗುವ ಮೂಲಕ ಜನರಲ್ಲಿ ಸಂತಸ ಮನೆಮಾಡಿದೆ. ಐತಿಹಾಸಿಕ ಹಿನ್ನೆಲೆಯುಳ್ಳ ಕಾಪು ಬ್ರಿಟಿಷರ ಕಾಲದಲ್ಲಿಯೇ ಭೂ ಕಂದಾಯ ಕಚೇರಿಯನ್ನು ಹೊಂದಿತ್ತು. ಕಾಪು ತಾಲೂಕು ಪ್ರಸ್ತಾವಿತ 30ಕಂದಾಯ ಗ್ರಾಮಗಳನ್ನೊಳಗೊಂಡಿದೆ. 54,135.34 ಎಕರೆ ವಿಸ್ತೀರ್ಣ ಹೊಂದಿದ್ದು, 2011ರ ಜನಗಣತಿಯಂತೆ 1,36,074 ಜನಸಂಖ್ಯೆ ಹೊಂದಿದೆ. ನೂತನವಾಗಿ ಅಸ್ತಿತ್ವಕ್ಕೆ ಬಂದ ಕಾಪು ಪುರಸಭೆ, ಪಡುಬಿದ್ರೆ, ಎಲ್ಲೂರು, ಶಿರ್ವ, ಕುರ್ಕಾಲು ಸೇರಿದಂತೆ ನಾಲ್ಕು ಜಿಪಂ ಕ್ಷೇತ್ರ, 12 ತಾಪಂ ಹಾಗೂ 16 ಗ್ರಾಪಂಗಳನ್ನೊಳಗೊಂಡಿದೆ.

ಏಣಗುಡ್ಡೆ, ಕುರ್ಕಾಲು, ಬೆಳ್ಳೆ, ಕಟ್ಟಿಂಗೇರಿ, ಶಿರ್ವ, ಹೇರೂರು, ಮಜೂರು, ಇನ್ನಂಜೆ, ಪಾಂಗಾಳ, ಮೂಡುಬೆಟ್ಟು, ಕೋಟೆ, ಮಟ್ಟು, ಉಳಿಯಾರಗೋಳಿ, ಪಡು, ಮೂಳೂರು, ಬಡಾ, ತೆಂಕ, ಎಲ್ಲೂರು, ಬೆಳಪು, ಮಲ್ಲಾರು, ಪಾದೂರು, ಕಳತ್ತೂರು, ಕುತ್ಯಾರು, ಪಿಲಾರು, ಸಾಂತೂರು, ನಂದಿಕೂರು, ಪಾದೆಬೆಟ್ಟು, ನಡ್ಸಾಲು, ಪಲಿಮಾರು, ಹೆಜಮಾಡಿ ಕಂದಾಯ ಗ್ರಾಮಗಳು ತಾಲೂಕು ವ್ಯಾಪ್ತಿಗೆ ಬರಲಿವೆ. ಅಲ್ಲದೆ ಪಕ್ಕದ ತಾಲೂಕಿನ ಗ್ರಾಮಗಳು ಕಾಪು ತಾಲೂಕಿಗೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ.

ಪ್ರಸ್ತಾವನೆ ಇತ್ತು:

ಸಂತ ವಿ.ಸಾಲ್ಯಾನ್ ಸಚಿವರಾಗಿದ್ದಾಗ ಕಾಪು ತಾಲೂಕು ರಚನೆಯ ಕೂಗು ಕೇಳಿಬಂದಿತ್ತು. ಇದೇ ವೇಳೆ ಕಾಪು ತಾಲೂಕು ರಚನೆಗೆ ಎಂ.ಪಿ.ಪ್ರಕಾಶ್ ಕಂದಾಯ ಸಚಿವರಾಗಿದ್ದಾಗ ಕಾಪುವಿನಲ್ಲಿ ವಿಶೇಷ ತಹಶೀಲ್ದಾರ್ ಕಚೇರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಕಳೆದ ಒಂದು ವರ್ಷದ ಹಿಂದೆ ಕಾಪು ಶಾಸಕ ವಿನಯಕುಮಾರ್ ಸೊರಕೆ ತಾಲೂಕು ರಚನೆಗೆ ಹೆಚ್ಚಿನ ಮುತುವರ್ಜಿ ವಹಿಸಿ ಹೋರಾಟವನ್ನೂ ರೂಪಿಸಿದ್ದರು. ಸಾಮಾಜಿಕ ಕಾರ್ಯಕರ್ತ ಲೀಲಾಧರ ಶೆಟ್ಟಿ ಅವರ ನೇತೃತ್ವದಲ್ಲಿ ಹೋರಾಟ ಸಮಿತಿ ರಚಿಸಿ ಕಾಲ್ನಡಿಗೆ ಜಾಥಾ, ಬೈಕ್ ರ್ಯಾಲಿ, ಗ್ರಾಪಂಗಳಿಗೆ ಭೇಟಿ ನೀಡಿ ಜನಜಾಗೃತಿ ಮೂಡಿಸಿ ಜನಾಭಿಪ್ರಾಯವನ್ನು ಕ್ರೋಡೀಕರಿಸಿ ಸರಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದರು ಹಾಗೂ ಇದೀಗ ತಾಲೂಕು ಘೋಷಣೆ ಮಾಡುವಲ್ಲಿ ಸಫಲರಾದರು ಎನ್ನಬಹುದು.

ಇಲಾಖೆಗಳು:

ಲೂಕು ಕಾರ್ಯಗತವಾದರೆ ಪ್ರತ್ಯೇಕ ತಾಪಂ, ಎಪಿಎಂಸಿಗಳು ರಚನೆಯಾಗಲಿವೆ. ಕಾಪು, ಶಿರ್ವ ಹಾಗೂ ಪಡುಬಿದ್ರೆ ಹೋಬಳಿ ಕೇಂದ್ರಗಳಾಗಲಿವೆ. ಕಾಪು ಬಂಗ್ಲೆ ಪ್ರದೇಶದಲ್ಲಿ ಈಗಿರುವ ನಾಡ ಕಚೇರಿ ಸಮೀಪದಲ್ಲಿ ಸಾಕಷ್ಟು ಸ್ಥಳವಿದ್ದು ತಾಲೂಕು ಕಚೇರಿ ನಿರ್ಮಾಣಕ್ಕೆ ಅನುಕೂಲಕರವಾಗಿದೆ. ಪುರಸಭೆ, ನಗರ ಯೋಜನಾ ಪ್ರಾಧಿಕಾರ ಈಗಾಗಲೇ ಅಸ್ತಿತ್ವಕ್ಕೆ ಬಂದಿದೆ. ಕೃಷಿ, ಪಶು ಸಂಗೋಪನಾ ಇಲಾಖೆಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ. ಕಂದಾಯ, ಉಪನೋಂದಣಿ ಕಚೇರಿ, ಶಿಕ್ಷಣ, ಸಮಾಜ ಕಲ್ಯಾಣ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ, ನ್ಯಾಯಾಲಯ, ತೋಟಗಾರಿಕೆ ಪ್ರಮುಖವಾಗಿ ಆಗಬೇಕಿದ್ದು, ರಾಜ್ಯಪತ್ರದಲ್ಲಿ ಶೀಘ್ರ ಅನುಷ್ಠಾನಗೊಂಡಲ್ಲಿ ಆರು ತಿಂಗಳಲ್ಲಿ ತಾಲೂಕು ಕಾರ್ಯಗತವಾಗಲಿದೆ.

ಶೈಕ್ಷಣಿಕ ಸಂಸ್ಥೆಗಳು:

ಬಂಟಕಲ್‌ನಲ್ಲಿ ಸೋದೆ ವಾದಿರಾಜ ಮಠಕ್ಕೆ ಸೇರಿದ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಕಾಪು ವಿದ್ಯಾನಿಕೇತನದ ವಿದ್ಯಾ ನರ್ಸಿಂಗ್ ಹಾಗೂ ಪ್ರಶಾಂತ್ ಆಸ್ಪತ್ರೆಯ ನರ್ಸಿಂಗ್ ಕಾಲೇಜುಗಳಿವೆ. ಕಾಪುವಿನಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಅಲ್ಲದೆ ಸ್ನಾತಕೋತ್ತರ ಅಧ್ಯಯನ ಕೇಂದ್ರವಿದೆ. ಶಿರ್ವದಲ್ಲಿ ಸೈಂಟ್ ಮೇರಿ ಹಾಗೂ ಮೂಲ್ಕಿ ಸುಂದರಾಮ್ ಶೆಟ್ಟಿ ಪ್ರಥಮ ದರ್ಜೆ ಕಾಲೇಜು, ಬೆಳಪುವಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವಿಜ್ಞಾನ ಸಂಶೋಧನಾ ಕೇಂದ್ರ ಸ್ಥಾಪನೆ ಕಾರ್ಯ ನಡೆಯುತ್ತಿದೆ. ಎಲ್ಲೂರಿನಲ್ಲಿ ಐಟಿಐ ಸ್ಥಾಪನೆಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೈಕ್ಷಣಿಕವಾಗಿ ವಿಶೇಷ ಗಮನಸೆಳೆದಿದೆ.

ಉದ್ದಿಮೆಗಳು:

ಕಾಪು ತಾಲೂಕು ವ್ಯಾಪ್ತಿಯಲ್ಲಿ ಕೇಂದ್ರ ಸರಕಾರ ಅಧೀನದ ಪಾದೂರು ಕಚ್ಚಾ ತೈಲ ಶೇಖರಣ ಘಟಕ (ಐಎಸ್‌ಪಿಆರ್‌ಎಲ್), ಎಲ್ಲೂರಿನಲ್ಲಿ ಅದಾನಿ-ಯುಪಿಸಿಎಲ್ ಕಲ್ಲಿದ್ದಲು ಆಧಾರಿತ ಉಷ್ಣವಿದ್ಯುತ್ ಸ್ಥಾವರ ಹಾಗೂ ಪಡುಬಿದ್ರೆಯಲ್ಲಿ ಗಾಳಿಯಂತ್ರದ ಮೂಲಕ ವಿದ್ಯುತ್ ಉತ್ಪಾದನೆಯ ಬಿಡಿಭಾಗ ತಯಾರಿಕಾ ಘಟಕ ಸುಜ್ಲಾನ್ ಇನ್‌ಫ್ರಾಸ್ಟ್ರಕ್ಚರ್ ಕಂಪೆನಿ ಹಾಗೂ ನಂದಿಕೂರು ಹಾಗೂ ಬೆಳಪುವಿನಲ್ಲಿ ಕೈಗಾರಿಕಾ ಪ್ರದೇಶಗಳ ನಿರ್ಮಾಣದಿಂದ ಸಣ್ಣ ಕೈಗಾರಿಕಾ ಘಟಕಗಳ ಸ್ಥಾಪನೆಗೆ ಅನೂಕೂಲಕರವಾಗಿದೆ.

ಕೃಷಿ: 

ಶಂಕರಪುರ ಮಲ್ಲಿಗೆ, ಮಟ್ಟುಗುಳ್ಳ ಈ ಎರಡು ಪ್ರಮುಖ ಬೆಳೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಛಾಪನ್ನು ಮೂಡಿಸಿವೆ. ಹೆಜಮಾಡಿಯ ಕೋಡಿಯಲ್ಲಿ ನನೆಗುದಿಗೆ ಬಿದ್ದಿರುವ್ದ ಮೀನುಗಾರಿಕಾ ಬಂದರು ತಾಲೂಕು ರಚನೆಯಿಂದ ಬಂದರು ನಿರ್ಮಾಣಕ್ಕೆ ಇನ್ನಷ್ಟು ವೇಗ ಸಿಗುವ ಬಗ್ಗೆ ಮೀನುಗಾರರು ನಿರೀಕ್ಷೆಯಲ್ಲಿದ್ದಾರೆ. ಅಲ್ಲದೆ ಮೀನುಗಾರಿಕೆ, ಭತ್ತ, ತೆಂಗು, ಅಡಿಕೆ ಪ್ರಮುಖ ಕೃಷಿ ಉತ್ಪನ್ನಗಳಾಗಿವೆ.

ಕೈಬೀಸಿ ಕರೆಯುವ ಲೈಟ್‌ಹೌಸ್:

ಕಾಪುವಿನಲ್ಲಿ ಬ್ರಿಟಿಷರ ಕಾಲದಲ್ಲಿ ನಿಮಾರ್ಣಗೊಂಡ ಲೈಟ್‌ಹೌಸ್ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ಇದಲ್ಲದೆ ಪಡುಬಿದ್ರೆ ಬೀಚ್, ಸಸಿಹಿತ್ಲು-ಹೆಜಮಾಡಿ ಸರ್ಫಿಂಗ್ ತಾಣ, ಉಡುಪಿಯ ಕೃಷ್ಣಮಠಕ್ಕೆ ಸಂಬಂಧ ಹೊಂದಿರುವ ದಂಡತೀರ್ಥ ಮಠ, ಕುಂಜಾರುವಿನಲ್ಲಿರುವ ಮಧ್ವಚಾರ್ಯರ ಜನ್ಮಸ್ಥಾನ ಪಾಜಕ ಕ್ಷೇತ್ರ, ಕಾಪುವಿನಲ್ಲಿ ಮೂರು ಮಾರಿಗುಡಿಗಳು, ಪಡುಬಿದ್ರೆಯ ಬ್ರಹ್ಮಸ್ಥಾನ, ಕನ್ನಂಗಾರ್ ಜುಮಾ ಮಸೀದಿ ಹಾಗೂ ದರ್ಗಾ, ಕಟಪಾಡಿ ದರ್ಗಾ, ಶಿರ್ವ ಚರ್ಚ್ ಸೇರಿದಂತೆ ಪ್ರಮುಖ ಪ್ರವಾಸಿ ಕೇಂದ್ರಗಳು ಇಲ್ಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X