Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಡಾವಳಿಗಾಗಿ ಧರಣಿ ಕುಳಿತ ಕೊರಗ ಸಮುದಾಯ

ನಡಾವಳಿಗಾಗಿ ಧರಣಿ ಕುಳಿತ ಕೊರಗ ಸಮುದಾಯ

ಚಿತ್ರಾಪುರ ಮಹಾಂಕಾಳಿ ದೈವಸ್ಥಾನದ ನೇಮೋತ್ಸವ ವಿವಾದ

ವಾರ್ತಾಭಾರತಿವಾರ್ತಾಭಾರತಿ18 March 2017 1:33 PM IST
share
ನಡಾವಳಿಗಾಗಿ ಧರಣಿ ಕುಳಿತ ಕೊರಗ ಸಮುದಾಯ

ಮಂಗಳೂರು, ಮಾ.18: ಚಿತ್ರಾಪುರ ಮಹಾಂಕಾಳಿ ದೈವಸ್ಥಾನದಲ್ಲಿ ಇಂದು ರಾತ್ರಿ ನಡೆಯಲಿರುವ ವಿವಾದಿತ ನೇಮೋತ್ಸವದ ಕುರಿತಂತೆ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮಾತುಕತೆ ನಡೆದು ಷರತ್ತುಬದ್ಧ ನೇಮೋತ್ಸವಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಆದರೆ ಈ ಕುರಿತು ನಡೆದ ಮಾತುಕತೆಯ ನಡಾವಳಿಯನ್ನು ಅಧಿಕಾರಿಗಳು ಇನ್ನೂ ನೀಡದಿರುವುದನ್ನು ಆಕ್ಷೇಪಿಸಿ ಕೊರಗ ಸಮುದಾಯದ ಸದಸ್ಯರು ಮಿನಿ ವಿಧಾನಸೌಧದೆದುರು ಧರಣಿ ನಡೆಸುತ್ತಿದ್ದಾರೆ.

ದೈವಸ್ಥಾನದಲ್ಲಿ ಕೊರಗ ತನಿಯ ಹಾಗೂ ಏಳು ಕೊರಪೊಲು ಎಂಬ ಹೆಸರಿನಲ್ಲಿ ನಡೆಸಲು ಉದ್ದೇಶಿಸಿದ ನೇಮೋತ್ಸವಕ್ಕೆ ಕೊರಗ ಸಮುದಾಯ ಆಕ್ಷೇಪ ವ್ಯಕ್ತಪಡಿಸಿ ಸ್ಥಳೀಯ ಪೊಲೀಸ್ ಠಾಣೆ ಸೇರಿದಂತೆ ತಹಶೀಲ್ದಾರರಿಗೆ ದೂರು ನೀಡಿತ್ತು. ಮಾತ್ರವಲ್ಲದೆ, ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟವು ಮಂಗಳವಾರ ಪತ್ರಿಕಾಗೋಷ್ಠಿಯನ್ನು ನಡೆಸಿ ಅಸಮಾಧಾನವನ್ನೂ ವ್ಯಕ್ತಪಡಿಸಿ, ಅಹೋರಾತ್ರಿ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ಸುರತ್ಕಲ್ ಠಾಣೆಯಲ್ಲಿ ಎಸಿಪಿ ಹಾಗೂ ತಹಶೀಲ್ದಾರ್ ಉಪಸ್ಥಿತಿಯಲ್ಲಿ ಕೊರಗ ಸಮುದಾಯದ ಮುಖಂಡರು ಹಾಗೂ ದೈವಸ್ಥಾನದ ಮುಖ್ಯಸ್ಥರ ನಡುವೆ ಮಾತುಕತೆ ನಡೆಸಲಾಗಿತ್ತು.

ಮಾತುಕತೆಯ ವೇಳೆ ನೇಮೋತ್ಸದ ಹೆಸರಿನಲ್ಲಿ ಬದಲಾವಣೆ ಮಾಡಿ ಕೊರಗ ತನಿಯ ಹಾಗೂ ಏಳು ಸೀ ಶಕ್ತಿ ಸ್ವರೂಪಿಣಿ ದೈವಗಳ ಹೆಸರಿನಲ್ಲಿ ನೇಮೋತ್ಸವ ನಡೆಸಲು ದೈವಸ್ಥಾನದ ಆಡಳಿತ ಮಂಡಳಿ ಸಮ್ಮತಿ ಸೂಚಿಸಿತ್ತು. ಇದೇ ವೇಳೆ ಕೊರಗ ಸಮುದಾಯದ ಮುಖಂಡರು, ನೇಮೋತ್ಸವದಲ್ಲಿ ಪಾತ್ರಿಯ ಬಣ್ಣಗಾರಿಕೆ, ಕುಣಿತ ಹಾಗೂ ಸಂಭಾಷಣೆಯಲ್ಲಿಯೂ ಕೆಲವೊಂದು ನಿರ್ದಿಷ್ಟ ನಿಯಮಗಳನ್ನು ಪಾಲಿಸುವ ಮೂಲಕ ಕೊರಗ ಸಮುದಾಯಕ್ಕೆ ಯಾವುದೇ ರೀತಿಯ ಅವಮಾನ ಆಗದ ರೀತಿಯಲ್ಲಿ ನೇಮೋತ್ಸವ ನಡೆಸಬೇಕೆಂದು ಆಗ್ರಹಿಸಿತ್ತು. ಈ ಬಗ್ಗೆ ಸಭೆಯ ನಡಾವಳಿಯನ್ನು ತಮಗೆ ನೀಡುವಂತೆ ಕೋರಿತ್ತು. ಆದರೆ ತಹಶೀಲ್ದಾರರಿಂದ ಸಭೆಯ ಲಿಖಿತ ನಡಾವಳಿಯನ್ನು ತಮಗೆ ಕಳೆದೆರಡು ದಿನಗಳಿಂದ ನೀಡದೆ ಸತಾಯಿಸಲಾಗುತ್ತಿದೆ. ಈ ಬಗ್ಗೆ ತಹಶೀಲ್ದಾರ್, ಉಪ ತಹಶೀಲ್ದಾರ್‌ರವರಲ್ಲಿ ಕೇಳಿದಾಗ ಇಂದು ನಾಳೆ ಎಂದು ಹೇಳುತ್ತಿದ್ದಾರೆಯೇ ಹೊರತು ನಡಾವಳಿ ನೀಡುತ್ತಿಲ್ಲ. ಇಂದು ನೇಮೋತ್ಸವ ನಡೆಯಲಿದೆ ಎಂದು ಧರಣಿ ಕುಳಿತಿರುವ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಸದಸ್ಯ ಅಣ್ಣಿಯವರು ‘ವಾರ್ತಾಭಾರತಿ’ಗೆ ಮಾಹಿತಿ ನೀಡಿದರು.

ಕೊರಗ ಸಮುದಾಯದ ಸುಮಾರು 50ಕ್ಕೂ ಅಧಿಕ ಸದಸ್ಯರು ಪ್ರಸ್ತುತ ಮಿನಿ ವಿಧಾನಸೌಧದೆದುರು ಧರಣಿನಿರತರಾಗಿದ್ದಾರೆ. ಈ ನಡುವೆ, ಕೊರಗ ಸಮುದಾಯದ ಆಕ್ಷೇಪಕ್ಕೆ ಮಣಿದು ದೈವಸ್ಥಾನ ಆಡಳಿತ ಮಂಡಳಿಯು ನೇಮೋತ್ಸವ ಹೆಸರಿನಲ್ಲಿ ಬದಲಾವಣೆ ಮಾಡಿರುವುದಲ್ಲದೆ, ಕೊರಪಲು ಎಂಬ ಪದ ಕೊರಗ ಜನಾಂಗದ ಸೀಯರಿಗೆ ಅವಮಾನವಾಗುವುದೆಂದು ಕೊರಗ ಸಮುದಾಯದವರು ತಿಳಿಸಿದ ಪರಿಣಾಮ ಕೊರಪಲು ಪದ ಬಳಕೆಗೆ ತಮ್ಮ ಸಮಿತಿ ಕ್ಷಮೆಯಾಚಿಸುವುದಾಗಿಯೂ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ತಿಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X