Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟ್ರಂಪ್ ಸಂಪುಟ ಸದಸ್ಯನ ವಿರುದ್ಧ...

ಟ್ರಂಪ್ ಸಂಪುಟ ಸದಸ್ಯನ ವಿರುದ್ಧ ತನಿಖೆಯಲ್ಲಿ ತೊಡಗಿದ್ದಾಗ ಪ್ರೀತ್ ಭರಾರ ಉಚ್ಚಾಟನೆ

ತನಿಖಾ ವರದಿ

ವಾರ್ತಾಭಾರತಿವಾರ್ತಾಭಾರತಿ18 March 2017 7:09 PM IST
share
ಟ್ರಂಪ್ ಸಂಪುಟ ಸದಸ್ಯನ ವಿರುದ್ಧ ತನಿಖೆಯಲ್ಲಿ ತೊಡಗಿದ್ದಾಗ ಪ್ರೀತ್ ಭರಾರ ಉಚ್ಚಾಟನೆ

ವಾಶಿಂಗ್ಟನ್, ಮಾ. 18: ಅಮೆರಿಕದ ಆರೋಗ್ಯ ಮತ್ತು ಮಾನವೀಯ ಸೇವೆಗಳ ಇಲಾಖೆಯ ಕಾರ್ಯದರ್ಶಿ ಟಾಮ್ ಪ್ರೈಸ್, ಆರೋಗ್ಯ ಸಂಬಂಧಿ ಶೇರುಗಳ ವಿಕ್ರಯ ನಡೆಸಿದ್ದಾರೆ ಎಂಬ ಆರೋಪಗಳ ಬಗ್ಗೆ ಭಾರತೀಯ ಅಮೆರಿಕನ್ ಅಟಾರ್ನಿ ಪ್ರೀತ್ ಭರಾರ ತನಿಖೆ ನಡೆಸುತ್ತಿದ್ದರು ಎಂದು ತನಿಖಾ ಸುದ್ದಿ ಸಂಸ್ಥೆ ‘ಪ್ರೊಪಬ್ಲಿಕಾ’ ವರದಿ ಮಾಡಿದೆ.

ಇತ್ತೀಚೆಗೆ ಭರಾರ ಅವರನ್ನು ಟ್ರಂಪ್ ಆಡಳಿತವು ಸೇವೆಯಿಂದ ವಜಾಗೊಳಿಸಿದೆ.ಉಚ್ಚಾಟನೆಗೊಳ್ಳುವ ಸಮಯದಲ್ಲಿ ಭರಾರ, ಟಾಮ್ ಪ್ರೈಸ್ ನಡೆಸಿರುವ ಆರೋಗ್ಯ ಸಂಬಂಧಿ ಶೇರುಗಳ ವಿಕ್ರಯ ಕುರಿತ ತನಿಖೆಯ ಉಸ್ತುವಾರಿಯನ್ನು ಹೊತ್ತಿದ್ದರು ಎಂದು ನ್ಯೂಯಾರ್ಕ್‌ನ ಸ್ವತಂತ್ರ ಹಾಗೂ ಲಾಭರಹಿತ ಪತ್ರಿಕೆ ಹೇಳಿದೆ.

ಹಿಂದಿನ ಬರಾಕ್ ಒಬಾಮ ಆಡಳಿತದಿಂದ ನೇಮಿಸಲ್ಪಟ್ಟಿರುವ ಭರಾರ ಮತ್ತು ಅಮೆರಿಕದ ಇತರ 45 ಅಟಾರ್ನಿಗಳು ರಾಜೀನಾಮೆ ನೀಡುವಂತೆ ಕಾನೂನು ಇಲಾಖೆ ಸೂಚಿಸಿತ್ತು. ಆದರೆ, ಭರಾರ ರಾಜೀನಾಮೆ ಸಲ್ಲಿಸಲು ನಿರಾಕರಿಸಿದ್ದರು. ಬಳಿಕ, ಟ್ರಂಪ್ ಆಡಳಿತವು ಅವರನ್ನು ಸೇವೆಯಿಂದ ವಜಾಗೊಳಿಸಿರುವುದನ್ನು ಸ್ಮರಿಸಬಹುದಾಗಿದೆ.

ಆದಾಗ್ಯೂ, ಪ್ರೈಸ್ ವಿರುದ್ಧ ತನಿಖೆ ನಡೆಸಿರುವುದಕ್ಕಾಗಿ ಭರಾರ ಅವರನ್ನು ಉಚ್ಚಾಟಿಸಲಾಗಿದೆ ಎಂಬ ನಿರ್ಧಾರಕ್ಕೆ ಪ್ರೊಪಬ್ಲಿಕಾ ಬಂದಿಲ್ಲ.

ಪ್ರೈಸ್ ಆರೋಗ್ಯ ಸಂಬಂಧಿ ಶೇರುಗಳನ್ನು ವಿಕ್ರಯಿಸಿದ ಆರೋಪಗಳು, ಆರೋಗ್ಯ ಮತ್ತು ಮಾನವೀಯ ಸೇವೆಗಳ ಕಾರ್ಯದರ್ಶಿ ಹುದ್ದೆಗೆ ಅವರ ಸಂದರ್ಶನದ ವೇಳೆ ಕೇಳಿಬಂದಿದ್ದವು.

‘‘ಭರಾರ ಉಚ್ಚಾಟನೆಯ ವೇಳೆ, ಸದರ್ನ್ ಡಿಸ್ಟ್ರಿಕ್ಟ್ ಆಫ್ ನ್ಯೂಯಾರ್ಕ್‌ನ ಅಟಾರ್ನಿ ಕಚೇರಿಯು ಪ್ರೈಸ್‌ರ ಶೇರು ವಿಕ್ರಯಗಳ ಬಗ್ಗೆ ತನಿಖೆ ನಡೆಸುತ್ತಿತ್ತು ಎಂಬುದಾಗಿ ವ್ಯಕ್ತಿಯೊಬ್ಬರು ಹೇಳಿದ್ದಾರೆ’’ ಎಂದು ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X