Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶೀಘ್ರವೇ ಪಡುಕೆರೆಗೆ ನರ್ಮ್ ಬಸ್ ಸಂಚಾರ:...

ಶೀಘ್ರವೇ ಪಡುಕೆರೆಗೆ ನರ್ಮ್ ಬಸ್ ಸಂಚಾರ: ಪ್ರಮೋದ್

ಮಲ್ಪೆ-ಪಡುಕೆರೆ ಸೇತುವೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ18 March 2017 9:30 PM IST
share
ಶೀಘ್ರವೇ ಪಡುಕೆರೆಗೆ ನರ್ಮ್ ಬಸ್ ಸಂಚಾರ: ಪ್ರಮೋದ್

ಮಲ್ಪೆ, ಮಾ.18: ನದಿ ಹಾಗೂ ಸಮುದ್ರದ ಮಧ್ಯೆ ದ್ವೀಪದಂತಿದ್ದ ಪಡುಕೆರೆ ಜನತೆಯ ಹಲವು ದಶಕಗಳ ಸೇತುವೆ ಕನಸು ಇಂದು ನನಸಾಗಿದೆ. ಈ ಸೇತುವೆಯಿಂದ ಈ ಭಾಗದ ಜನರ ಭಾಗ್ಯದ ಬಾಗಿಲು ತೆರೆದಂತಾಗಿದೆ. ಶೀಘ್ರವೇ ಇಲ್ಲಿಗೆ ಮಲ್ಪೆಯಿಂದ ನರ್ಮ್ ಬಸ್‌ಗಳ ಓಡಾಟಕ್ಕೆ ಅನುಮತಿ ದೊರಕಿಸಿ ಕೊಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಉಡುಪಿ ನಗರಸಭೆ ವತಿಯಿಂದ, ಮಲ್ಪೆ ಪಡುಕೆರೆ ನಿವಾಸಿಗಳ ದಶಕಗಳ ಕಾಲದ ಕನಸಾದ ಮಲ್ಪೆ-ಪಡುಕೆರೆ ನಡುವೆ ಸಂಪರ್ಕ ಕಲ್ಪಿಸುವ 16.91 ಕೋಟಿ ರೂ.ವೆಚ್ಚದ ಸೇತುವೆ ಹಾಗೂ ಮಲ್ಪೆ ಮತ್ತು ಪಡುಕೆರೆ ಕಡೆಯಿಂದ ಸಂಪರ್ಕ ರಸ್ತೆ ಅಲ್ಲದೇ ದಾರಿದೀಪದ ವ್ಯವಸ್ಥೆಯನ್ನು ಇಂದು ಸಂಜೆ ಉದ್ಘಾಟಿಸಿ ಅವರು ಮಾತನಾಡುತಿದ್ದರು.

 ಈ ಸೇತುವೆಯ ನಿರ್ಮಾಣದೊಂದಿಗೆ ಪಡುಕೆರೆಯ ಪ್ರಾಕೃತಿಕ ಸೌಂದರ್ಯ ಹೊರಜಗತ್ತಿಗೆ ತಿಳಿಯಲಿದೆ. ಇಲ್ಲಿನ ಪ್ರವಾಸೋದ್ಯಮ ಚಟುವಟಿಕೆಗಳು ಹೆಚ್ಚಾಗಲಿದೆ. ಪಡುಕೆರೆ ಬೀಚ್‌ನ್ನು ದೇಶದ ಅತ್ಯಂತ ಸುಂದರ ಬೀಚ್ ಆಗಿ ಪರಿವರ್ತಿಸಲಾಗುವುದು. ಮಲ್ಪೆ ಬೀಚ್ ಅಭಿವೃದ್ದಿ ಸಮಿತಿ ಸುಪರ್ದಿಗೆ ಈ ಬೀಚ್‌ನ್ನು ಸೇರ್ಪಡೆಗೊಳಿಸಿ ಅಭಿವೃದ್ದಿಪಡಿಸಲಾಗುವುದು ಎಂದವರು ಭರವಸೆ ನೀಡಿದರು.

ಈ ಬಾರಿಯ ಬಜೆಟ್‌ನಲ್ಲಿ ಮೀನುಗಾರರ ಡೀಸೆಲ್ ಸಬ್ಸಿಡಿಗಾಗಿ 157 ಕೋಟಿ ರೂ. ಮಂಜೂರಾಗಿದೆ. ಎ.1ರಿಂದ ಮೀನುಗಾರಿಕಾ ಬೋಟ್‌ಗಳಿಗೆ ಹೊಸದಾಗಿ ಸಾಧ್ಯತಾ ಪತ್ರ ಪಡೆದ ಮೀನುಗಾರರಿಗೂ ಡೀಸೆಲ್ ಸಬ್ಸಿಡಿ ನೀಡಲಾಗುವುದು ಎಂದ ಮೀನುಗಾರಿಕಾ, ಯುವಸಬಲೀಕರಣ ಹಾಗೂ ಕ್ರೀಡಾ ಸಚಿವ ಪ್ರಮೋದ್, ಮೀನುಗಾರಿಕಾ ಇಲಾಖೆಗೆ ಈ ಬಾರಿಯ ಬಜೆಟ್ ನಲ್ಲಿ 337 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ ಎಂದರು.

ತಮ್ಮ ಅಧಿಕಾರಾವಧಿಯಲ್ಲಿ ಜಿಲ್ಲೆಯಲ್ಲಿ ಇದುವರೆವಿಗೆ ಸೇತುವೆಗಳ ನಿರ್ಮಾಣಕ್ಕಾಗಿ 77.50 ಕೋಟಿ ರೂ. ಅನುದಾನ ಮಂಜೂರಾಗಿದೆ. ಮಲ್ಪೆಯಲ್ಲಿ ಒಳಚರಂಡಿ ಹಾಗೂ 24 ಗಂಟೆ ಕುಡಿಯುವ ನೀರು ವ್ಯವಸ್ಥೆಗಾಗಿ ಕುಡ್ಸೆಂಪ್‌ನಿಂದ 320 ಕೋಟಿ ರೂ.ಮಂಜೂರಾಗಿದೆ. ಅಲ್ಲದೇ ಮಲ್ಪೆಯಲ್ಲಿ ಅತ್ಯಾಧುನಿಕ ಹೈಟೆಕ್ ಬಸ್‌ನಿಲ್ದಾಣ ನಿರ್ಮಣಕ್ಕಾಗಿ 4.60 ಕೋಟಿ ರೂ. ಮಂಜೂರಾಗಿದೆ ಸಚಿವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಡುಕೆರೆ ಜನತೆಯ ಪರವಾಗಿ ಸಚಿವ ಪ್ರಮೋದ್ ಮಧ್ವರಾಜ್ ಹಾಗೂ ಸೇತುವೆಯನ್ನು ನಿರ್ಮಿಸಿಕೊಟ್ಟ ಮಂಗಳೂರಿನ ಯೋಜಕಾ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಜಗದೀಶ್ ಬೋಳೂರು ಅವರನ್ನು ಸನ್ಮಾನಿಸಲಾಯಿತು.

ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಸಂಧ್ಯಾ ತಿಲಕರಾಜ್, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹಮೂರ್ತಿ, ಜಿಪಂ ಸದಸ್ಯ ಜನಾರ್ಧನ ತೋನ್ಸೆ, ಮೀನುಗಾರರ ಮುಖಂಡರಾದ ಆನಂದ್ ಸಿ. ಕುಂದರ್, ಹಿರಿಯಣ್ಣ ಟಿ. ಕಿದಿಯೂರು, ತಹಶೀಲ್ದಾರ್ ಮಹೇಶ್ಚಂದ್ರ ಹಾಗೂ ನಗರಸಭೆಯ ಸದಸ್ಯರುಗಳು ಉಪಸ್ಥಿತ ರಿದ್ದರು.

ಉಡುಪಿ ನಗರಸಭೆಯ ಪೌರಾಯುಕ್ತ ಡಿ.ಮಂಜುನಾಥಯ್ಯ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.ಮಲ್ಪೆ-ಪಡುಕೆರೆ ಸೇತುವೆ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X