Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೃಷಿಯಲ್ಲಿ ಹೊಸತನದ ಪ್ರಯೋಗಶೀಲತೆಗಳು...

ಕೃಷಿಯಲ್ಲಿ ಹೊಸತನದ ಪ್ರಯೋಗಶೀಲತೆಗಳು ನಡೆಯಬೇಕು: ಸಂಸದ ನಳಿನ್

​ ‘ಸಸ್ಯ ತಳಿ ಸಂರಕ್ಷಣೆ ಹಾಗೂ ಕೃಷಿಕರ ಹಕ್ಕುಗಳು ತರಬೇತಿ ಮತ್ತು ಅರಿವು' ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ18 March 2017 11:02 PM IST
share
ಕೃಷಿಯಲ್ಲಿ ಹೊಸತನದ ಪ್ರಯೋಗಶೀಲತೆಗಳು ನಡೆಯಬೇಕು: ಸಂಸದ ನಳಿನ್

ಪುತ್ತೂರು, ಮಾ.18: ಪ್ರಸ್ತುತ ಕೃಷಿಕರು ಕಾರ್ಮಿಕರ, ನೀರಿನ ಹಾಗೂ ಮಾರುಕಟ್ಟೆ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇವೆಲ್ಲಕ್ಕೂ ಪರಿಹಾರವಾಗಿ ಗೇರು ಕೃಷಿ ರೈತರನ್ನು ಕಾಪಾಡುವ ಕೆಲಸ ಮಾಡುತ್ತಿದೆ. ಗೇರು ಕೃಷಿಯಲ್ಲಿ ಹೊಸ ಪ್ರಯೋಗಶೀಲತೆಗಳು ನಡೆಯಬೇಕಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

 ಅವರು ಶನಿವಾರ ಪುತ್ತೂರಿನ ಗೇರು ಸಂಶೋಧನಾ ನಿರ್ದೇಶನಾಲಯ ಹಾಗೂ ನವದೆಹಲಿಯ ಸಸ್ಯ ತಳಿ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕಡಮಜಲು ಎಂಬಲ್ಲಿನ ಪ್ರಗತಿಪರ ಗೇರು ಕೃಷಿಕ ಕಡಮಜಲು ಸುಭಾಸ್ ರೈ ಅವರ ಗೇರು ತೋಟದಲ್ಲಿ ನಡೆದ ‘ಸಸ್ಯ ತಳಿ ಸಂರಕ್ಷಣೆ ಹಾಗೂ ಕೃಷಿಕರ ಹಕ್ಕುಗಳುತರಬೇತಿ ಮತ್ತು ಅರಿವು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ದೇಶದ ವಿವಿಧ ರಾಜ್ಯಗಳಲ್ಲಿ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಕಷ್ಟು ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೂ ನಮ್ಮ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ತೀರಾ ಕಡಿಮೆ. ಇದಕ್ಕೆ ಇಲ್ಲಿನ ಕೃಷಿಕರ ಪ್ರಯೋಗ ಶೀಲತೆಗಳೇ ಕಾರಣ ಎಂದ ಅವರು ಕೃಷಿ ಮತ್ತು ಋಷಿ ಸಂಸ್ಕೃತಿ ನಮ್ಮದ್ದಾಗಿದ್ದು, ದೇಶದ ಕೃಷಿ ಸಂಸ್ಕೃತಿಗೆ ಸೊಗಡಿದೆ. ಪೂಜನೀಯ ಭಾವನೆಯಿದೆ ಎಂದರು. ದೇಶದಲ್ಲಿ 80 ಲಕ್ಷ ಟನ್ ಗೇರು ಬೇಡಿಕೆಯಿದ್ದು, ಕೇವಲ 1 ಲಕ್ಷ ಟನ್ ಮಾತ್ರ ಉತ್ಪಾದನೆಯಾಗುತ್ತಿದೆ. ಉಳಿದ 79 ಲಕ್ಷ ಟನ್ ಗೇರನ್ನು ಆಮದು ಮಾಡಿಕೊಳ್ಳಲಾಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ರೈತರು ಗೇರು ಕೃಷಿಯತ್ತ ಮನ ಮಾಡಬೇಕೆಂದು ಅವರು ತಿಳಿಸಿದರು.

  ನವಹೆದಲಿ ಸಸ್ಯ ತಳಿ ಸಮರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರದ ಚೇರ್‌ಮೆನ್ ಡಾ.ಆರ್.ಆರ್.ಹಂಚಿನಾಲ್ ಅವರು ಮಾತನಾಡಿ ಕೃಷಿ ಸಂಪತ್ತು ಇಲ್ಲದೆ ಬದುಕಲು ಸಾಧ್ಯವಿಲ್ಲ. ಆದರೆ ಇಂದಿನ ದಿನಗಳಲ್ಲಿ ಸಸ್ಯ ರಾಶಿಯನ್ನು ನಾಶಮಾಡಿ ಕಾಂಕ್ರೀಟ್ ಪಾರಸ್ಟ್ ಮಾಡಲಾಗುತ್ತಿದ್ದು, ಇದು ದೇಶಕ್ಕೆ ಮಾತ್ರವಲ್ಲದೆ ಇಡೀ ಪ್ರಪಂಚಕ್ಕೆ ವಿನಾಶಕಾಲವನ್ನು ತಂದೊಡ್ಡಲಿದೆ ಎಂದು ಎಚ್ಚರಿಸಿದರು.

ಪ್ರತಿಯೊಬ್ಬ ರೈತ ತಮ್ಮ ಪೂರ್ವಜರಿಂದ ಬಳುವಳಿಯಾಗಿ ಬಂದ ತಳಿಗಳನ್ನು ಹಾಗೂ ಸ್ವತಹಃ ಆವಿಷ್ಕರಿಸಿದ ತಳಿಗಳನ್ನು ಸಂರಕ್ಷಿಸಿಕೊಂಡು ಬರಬೇಕು. ಸಸ್ಯ ತಳಿಗಳ ನೋಂದಣಿ ಮಾಡಿಕೊಂಡು ಅದರ ಹಕ್ಕುಗಳನ್ನು ಕಾಯ್ದಿರಿಸಿಕೊಂಡು ಬರಬೇಕು ಎಂದು ತಿಳಿಸಿದ ಅವರು ರೈತ ತಳಿಗಳ ಸಂರಕ್ಷಣೆಯ ಉದ್ದೇಶದಿಂದಲೇ 2005ರಲ್ಲಿ ಕಾಯಿದೆ ಜಾರಿಗೊಂಡಿದೆ ಎಂದರು. ನಾವು ಆಧುನಿಕವಾಗಿ ಮುಂದುವರಿದುಕೊಂಡು ಬಂದಿದ್ದರೂ ಇಂದಿಗೂ ಕೆಲವೊಂದು ರೋಗಗಳ ಸಂದರ್ಭದಲ್ಲಿ ಆಯುರ್ವೇದ ಔಷಧಿಯ ಕಡೆಗೆ ಹೋಗುತ್ತಿದ್ದೇವೆ ಎಂಬುವುದು ಸಸ್ಯ ರಾಶಿಯ ಮಹತ್ವವನ್ನು ಸಾರುತ್ತಿದ್ದು, ಸಸ್ಯ ರಾಶಿಯನ್ನು ಉಳಿಸಿ ಬೆಳೆಸುವುದು ಬಹಳ ಮುಖ್ಯವೂ ಇಂದಿನ ಅನಿವಾರ್ಯತೆಯೂ ಆಗಿದೆ ಎಂದು ತಿಳಿಸಿದರು.

ಅಂತರ್‌ರಾಷ್ಟ್ರೀಯ ಜೀವ ವೈವಿಧ್ಯ ಸಂಸ್ಥೆಯ ವಿಭಾಗೀಯ ಮುಖ್ಯಸ್ಥ ಡಾ.ಎನ್.ಕೆ.ಕೃಷ್ಣಕುಮಾರ್ ಅವರು ಮಾತನಾಡಿ, ಮುಂದಿನ ದಿನಗಳಲ್ಲಿ ಗೇರು ಬೆಲೆ ಬಹಳಷ್ಟು ಏರಲಿದೆ. ಕೋಕೋ ಬೆಳೆಗೂ ಊಹಿಸಲಾಗದಷ್ಟು ಬೇಡಿಕೆ ಬರಲಿದೆ ಎಂದರು. ಜೀವ ವೈವಿಧ್ಯವನ್ನು ಕಾಪಾಡಿಕೊಂಡು ಬರುವುದು ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ಅವರು ತಿಳಿಸಿದರು.

ಶಾಸಕಿ ಶಕುಂತಳಾ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಸ್ಯ ತಳಿ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರದ ಪ್ರಾದೇಶಿಕ ಮುಖ್ಯಸ್ಥ ಡಾ.ಆರ್.ಸಿ.ಅಗರ್‌ವಾಲ್ ಅವರು ಮಾಹಿತಿ ನೀಡಿದರು.

ಪ್ರಗತಿಪರ ಕೃಷಿಕ ಕಡಮಜಲು ಸುಭಾಸ್ ರೈ ಅವರು ತಮ್ಮ ಕೃಷಿ ಅನುಭವವನ್ನು ತಿಳಿಸಿದರು. ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕ ಡಾ.ಎಂ.ಜಿ.ನಾಯಕ್ ಅವರು ಸ್ವಾಗತಿಸಿದರು. ನಿರ್ದೇಶನಾಲಯದ ಹಿರಿಯ ವಿಜ್ಞಾನಿ ಡಾ.ಮೋಹನ್ ಜಿ.ಎಸ್.ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X