Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೂರನೆ ಟೆಸ್ಟ್‌ನಲ್ಲಿ ನಗೆಪಾಟಲಿಗೀಡಾದ...

ಮೂರನೆ ಟೆಸ್ಟ್‌ನಲ್ಲಿ ನಗೆಪಾಟಲಿಗೀಡಾದ ಅಂಪೈರ್!

ವಾರ್ತಾಭಾರತಿವಾರ್ತಾಭಾರತಿ19 March 2017 6:12 PM IST
share
ಮೂರನೆ ಟೆಸ್ಟ್‌ನಲ್ಲಿ ನಗೆಪಾಟಲಿಗೀಡಾದ ಅಂಪೈರ್!

 ರಾಂಚಿ, ಮಾ.19: ಭಾರತ ಹಾಗೂ ಆಸ್ಟ್ರೇಲಿಯ ನಡುವೆ ಇಲ್ಲಿ ನಡೆಯುತ್ತಿರುವ ಮೂರನೆ ಟೆಸ್ಟ್ ಡ್ರಾನತ್ತ ಮುಖ ಮಾಡಿದೆ. ಚೇತೇಶ್ವರ ಪೂಜಾರರ ಮ್ಯಾರಥಾನ್ ಬ್ಯಾಟಿಂಗ್ ಪ್ರೇಕ್ಷಕರಿಗೆ ಮಾತ್ರವಲ್ಲ ಅಂಪೈರ್‌ಗಳಿಗೂ ಬೋರ್ ಹೊಡೆಸಿದಂತೆ ಕಾಣುತ್ತಿದೆ. ಇದಕ್ಕೆ ತಾಜಾ ಉದಾಹರಣೆ ನಾಲ್ಕನೆ ದಿನದಾಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಿವೀಸ್ ಅಂಪೈರ್ ಕ್ರಿಸ್ ಗಫೆನಿ.

ಭಾರತದ ಇನಿಂಗ್ಸ್‌ನ 140ನೆ ಓವರ್‌ನಲ್ಲಿ ಜೋಶ್ ಹೇಝಲ್‌ವುಡ್ ಎಸೆದ ಚೆಂಡನ್ನು ಚೇತೇಶ್ವರ ಪೂಜಾರ ಹೂಕ್ ಮಾಡಲು ಯತ್ನಿಸಿದರು. ಪೂಜಾರ ಬ್ಯಾಟ್‌ಗೆ ಸಿಗದ ಚೆಂಡು ವಿಕೆಟ್‌ಕೀಪರ್ ವೇಡ್ ಕೈ ಸೇರಿತು. ಆಗ ಸ್ಲಿಪ್‌ನಲ್ಲಿ ಫೀಲ್ಡಿಂಗ್‌ನಲ್ಲಿದ್ದ ಆಸ್ಟ್ರೇಲಿಯದ ನಾಯಕ ಸ್ಟೀವ್ ಸ್ಮಿತ್ ಅರ್ಧಮನಸ್ಸಿನಲ್ಲಿ ಔಟ್‌ಗಾಗಿ ಮನವಿ ಮಾಡಿದರು. ಇದನ್ನು ಗಮನಿಸಿದ ಗಫೆನಿ ಹಿಂದೆ-ಮುಂದೆ ನೋಡದೇ ಕೈಬೆರಳನ್ನು ಎತ್ತಿ ತಕ್ಷಣವೇ ತನ್ನ ಹ್ಯಾಟ್‌ನ್ನು ಮುಟ್ಟಿಕೊಂಡರು.

ಈ ದೃಶ್ಯ ನೋಡಿ ಎಲ್ಲರ ಮುಖದಲ್ಲೂ ನಗುಬಂತು. ಟಿವಿ ವೀಕ್ಷಕವಿವರಣೆಗಾರರು ಹಾಗೂ ಸಾಮಾಜಿಕ ಜಾಲತಾಣಗಳಲ್ಲೂ ಈ ಬಗ್ಗೆ ಚರ್ಚೆಯಾಯಿತು.

ಮಾಜಿ ಕ್ರಿಕೆಟಿಗ ಹಾಗೂ ವೀಕ್ಷಕವಿವರಣೆಗಾರ ಆಕಾಶ್ ಚೋಪ್ರಾ ಅವರು ತನ್ನ ಟ್ವಿಟ್ಟರ್ ಖಾತೆಯಲ್ಲಿ ಘಟನೆಯ ವಿಡಿಯೋವನ್ನು ಹಾಕಿದ್ದಾರೆ.

ಗಫೆನಿ ನ್ಯೂಝಿಲೆಂಡ್‌ನ ಮಾಜಿ ಕ್ರಿಕೆಟಿಗನಾಗಿದ್ದು 83 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ಪ್ರಸ್ತುತ ಐಸಿಸಿ ಎಲೈಟ್ ಅಂಪೈರ್ ಸಮಿತಿಯ ಸದಸ್ಯರಾಗಿದ್ದಾರೆ. ಎಲ್ಲ ಮೂರು ಮಾದರಿ ಪಂದ್ಯಗಳಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಪೊಲೀಸ್ ಆಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

2010ರ ಸೆಪ್ಟಂಬರ್‌ನಲ್ಲಿ ಟೊರೊಂಟೊದಲ್ಲಿ ಕೆನಡಾ ಹಾಗೂ ಐರ್ಲೆಂಡ್ ನಡುವಿನ ಏಕದಿನ ಪಂದ್ಯದಲ್ಲಿ ಮೊದಲ ಬಾರಿ ಅಂಪೈರ್ ಆಗಿದ್ದರು. 2014ರಲ್ಲಿ ಹರಾರೆಯಲ್ಲಿ ಝಿಂಬಾಬ್ವೆ ಹಾಗೂ ದ.ಆಫ್ರಿಕ ತಂಡಗಳ ನಡುವೆ ಟೆಸ್ಟ್ ಪಂದ್ಯದಲ್ಲಿ ಮೊದಲ ಬಾರಿ ಅಂಪೈರ್ ಆಗಿ ಕಾರ್ಯನಿರ್ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X