Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶಾಲಾ ಶೂಟೌಟ್‌ನ ‘ಗನ್‌ಮ್ಯಾನ್’ ಬಲಪಂಥೀಯ...

ಶಾಲಾ ಶೂಟೌಟ್‌ನ ‘ಗನ್‌ಮ್ಯಾನ್’ ಬಲಪಂಥೀಯ ರಾಜಕಾರಣಿಯ ಪುತ್ರ

ಬ್ಯಾಟ್‌ಮನ್‌ನ ಜೋಕರ್ ಪಾತ್ರವೇ ಆತನ ದುಷ್ಕೃತ್ಯಕ್ಕೆ ಪ್ರೇರಣೆ

ವಾರ್ತಾಭಾರತಿವಾರ್ತಾಭಾರತಿ19 March 2017 7:45 PM IST
share
ಶಾಲಾ ಶೂಟೌಟ್‌ನ ‘ಗನ್‌ಮ್ಯಾನ್’ ಬಲಪಂಥೀಯ ರಾಜಕಾರಣಿಯ ಪುತ್ರ

  ಪ್ಯಾರಿಸ್,ಮಾ.19: ತಾನು ಕಲಿಯುತ್ತಿದ್ದ ಶಾಲೆಯಲ್ಲಿ ಮನಬಂದಂತೆ ಗುಂಡುಹಾರಿಸಿ, ಶಾಲೆಯ ಪ್ರಾಂಶುಪಾಲ ಹಾಗೂ ಇಬ್ಬರು ವಿದ್ಯಾರ್ಥಿಗಳನ್ನು ಗಾಯಗೊಳಿಸಿದ್ದನೆನ್ನಲಾದ ಬಲಪಂಥೀಯ ಫ್ರೆಂಚ್ ರಾಜಕಾರಣಿ ಫ್ರಾಂಕ್ ಬಾರ್ಬೆಯಿ ಅವರ ಹದಿಹರೆಯದ ಪುತ್ರ, ಬಾರ್ಬಿ ಕಿಲಿಯಾನ್, ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದ ಅಮೆರಿಕನ್ ಶಾಲಾ ಶೂಟಿಂಗ್ ಘಟನೆಗಳು ಹಾಗೂ ಬ್ಯಾಟ್‌ಮ್ಯಾನ್ ಕಾಮಿಕ್ಸ್‌ನ ಖಳನಾಯಕ ಜೋಕರ್ ಪಾತ್ರದಿಂದ ಪ್ರಭಾವಿತನಾಗಿದ್ದನೆಂದು ಆತನ ವಿಚಾರಣೆ ನಡೆಸಿರುವ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

  17 ವರ್ಷದ ಬಾರ್ಬಿ ಕಿಲಿಯಾನ್, ಮಾರ್ಚ್ 16ರಂದು ರೈಫಲ್, ಎರಡು ಹ್ಯಾಂಡ್‌ಗನ್‌ಗಳು ಹಾಗೂ ಎರಡು ಗ್ರೆನೇಡ್‌ಗಳೊಂದಿಗೆ ಪ್ಯಾರಿಸ್ ಸಮೀಪದ ಶಾಲಾ ಕಟ್ಟಡಕ್ಕೆ ನುಗ್ಗಿ,ಯದ್ವಾತದ್ವಾ ಗುಂಡುಹಾರಿಸಿದ್ದನು.

ಅಮೆರಿಕನ್ ಶೈಲಿಯ ಸಾಮೂಹಿಕ ಗುಂಡೆಸತದ ವಿಡಿಯೋಗಳನಋ್ನ ವೀಕ್ಷಿಸಿದ ಬಳಿಕ ಆತ ಈ ದುಷ್ಕೃತ್ಯವನ್ನು ನಡೆಸಿರುವುದಾಗಿ ಫ್ರಾನ್ಸ್‌ನ ಆಂತರಿಕ ಸಚಿವಾಲಯ ತಿಳಿಸಿದೆ. ಘಟನೆಯಲ್ಲಿ 16 ವರ್ಷದ ವಿದ್ಯಾರ್ಥಿ ಜೂಲಿ ಹಾಗೂ 17 ವರ್ಷದ ವಿದ್ಯಾರ್ಥಿ ಆಕ್ರಂ ಎಂಬಾತ ಗಾಯಗೊಂಡಿದ್ದು, ಇತರ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು.

ಬಾರ್ಬಿಕಿಲಿಯಾನ್‌ನ ತಂದೆ ಫ್ರಾಂಕ್ ಅವರು ಫ್ರಾನ್ಸ್‌ನ ಬಲಪಂಥೀಯ ಆರ್‌ಪಿಎಫ್ ಪಕ್ಷದವರಾಗಿದ್ದು, ಮುನ್ಸಿಪಲ್ ಮಂಡಳಿಯ ಸದಸ್ಯರಾಗಿದ್ದಾರೆ. ಆರ್‌ಪಿಎಫ್ ಪಕ್ಷವು ಜಾಗದೀಕರಣ, ಯುರೋಪಿಯನ್ ಒಕ್ಕೂಟವಾದ ಹಾಗೂ ವಲಸೆ ನೀತಿಯ ವಿರುದ್ಧ ಹೋರಾಡುತ್ತಿದೆ.

ಬಾರ್ಬೆ ಗುಂಡಿನ ದಾಳಿ ನಡೆಸುವ ಮುನ್ನ ಆತ ತನ್ನ ಫೇಸ್‌ಬುಕ್ ಪುಟದಲ್ಲಿ ಕಪ್ಪು ಕೋಟ್ ಧರಿಸಿದ್ದು, ಒಂದು ಕೈಯಲ್ಲಿ ಪಿಸ್ತೂಲ್ ಹಾಗೂ ಇನ್ನೊಂದು ಕೈಯಲ್ಲಿ ರೈಫಲ್ ಹಿಡಿದಿರುವ ಮಾನವಅಸ್ಥಿಪಂಜರದ ಚಿತ್ರವೊಂದನ್ನು ಪೋಸ್ಟ್ ಮಾಡಿದ್ದ.

 ಬಾರ್ಬೆ ಶೂಟೌಟ್ ನಡೆಸುವುದಕ್ಕೆ ಪೂರ್ವಭಾವಿ ಸಿದ್ಧತೆಯಾಗಿ, 1999ರಲ್ಲಿ ಅಮೆರಿಕದ ಕೊಲಂಬಿಯನ್ ಹೈಸ್ಕೂಲ್‌ನಲ್ಲಿ 12 ಮಂದಿ ಹತ್ಯಾಕಾಂಡಕ್ಕೆ ಕಾರಣವಾದ ಶೂಟೌಟ್ ಘಟನೆಯ ಬಗ್ಗೆ ಅಧ್ಯಯನ ನಡೆಸಿದ್ದನೆನ್ನಲಾಗಿದೆ.

ಪ್ಯಾರಿಸ್ ಸಮೀಪದ ಗ್ರಾಸೆಯಲ್ಲಿ ನಡೆದ ಶೂಟೌಟ್ ಘಟನೆಗೆ ಸಂಬಂಧಿಸಿ ಫ್ರಾನ್ಸ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬಾರ್ಬೆಯಿ ಪ್ರಸ್ತುತ ಪೊಲೀಸ್ ಕಸ್ಟಡಿಯಲ್ಲಿರಿಸಲಾಗಿದ್ದು, ಆತನ ವಿಚಾರಣೆ ನಡೆಯುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X