Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ​ಡ್ರೋಣ್ ಮೂಲಕ ಮೋಡ ಬಿತ್ತನೆ...

ಉಡುಪಿ: ​ಡ್ರೋಣ್ ಮೂಲಕ ಮೋಡ ಬಿತ್ತನೆ ಪ್ರಾತ್ಯಕ್ಷಿಕೆ

ಅವಿಷ್ಕಾರ ಯಶಸ್ವಿಯಾದರೆ ಸರಕಾರಕ್ಕೆ ವರದಾನ: ಸಚಿವ ಪ್ರಮೋದ್

ವಾರ್ತಾಭಾರತಿವಾರ್ತಾಭಾರತಿ19 March 2017 10:26 PM IST
share
ಉಡುಪಿ: ​ಡ್ರೋಣ್ ಮೂಲಕ ಮೋಡ ಬಿತ್ತನೆ ಪ್ರಾತ್ಯಕ್ಷಿಕೆ

 ಉಡುಪಿ, ಮಾ.19: ಕಾರ್ಕಳ ಸ್ಕೈ ವೀವ್ ಸಿಸ್ಟಮ್‌ನ ರತ್ನಾಕರ್ ನಾಯಕ್ ಅಭಿವೃದ್ಧಿ ಪಡಿಸಿದ ಸ್ವಯಂ ಚಾಲಿತ ಡ್ರೋಣ್ ಮೂಲಕ ಮೋಡ ಬಿತ್ತನೆ ಕಾರ್ಯದ ಪ್ರಾತ್ಯಕ್ಷಿಕೆಯು ರವಿವಾರ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲಾಯಿತು.

 ರಾಜ್ಯ ಮೀನುಗಾರಿಕೆ, ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಸಮ್ಮುಖದಲ್ಲಿ ಪೈಲಟ್ ನೆರವಿಲ್ಲದೆ, ಮಾನವ ರಿಮೋಟ್ ಕಂಟ್ರೋಲ್ ರಹಿತವಾಗಿ ಸ್ವಯಂ ಚಾಲಿತ ಡ್ರೋಣ್ ಮೂಲಕ ಮೋಡ ಬಿತ್ತನೆಯ ಪ್ರಾತ್ಯಕ್ಷಿಕೆಯನ್ನು ತೋರಿಸಲಾಯಿತು.

1.5ಕೆ.ಜಿ. ತೂಕದ ಸಣ್ಣ ಡ್ರೋಣ್‌ನಲ್ಲಿ ಪೈರೋಪ್ಲೆರ್ ಮಿಶ್ರಣವನ್ನು ಅಳವಡಿಸಿ ಸುಮಾರು 200 ಮೀಟರ್ ಎತ್ತರದಲ್ಲಿ ಸಿಡಿಸುವ ಮೂಲಕ ಮೋಡ ಬಿತ್ತನೆಯ ಮಾದರಿ ಯನ್ನು ಸಚಿವರಿಗೆ ವಿವರಿಸಲಾಯಿತು. ಸರಕಾರ ಮುಂದೆ ಇವರಿಗೆ ಅನುಮತಿ ನೀಡಿದರೆ ಪ್ರಾತ್ಯಕ್ಷಿಕೆಯಲ್ಲಿ ಪ್ರದರ್ಶನಕ್ಕೆ ಇಡ ಲಾಗಿದ್ದ 15 ಕೆ.ಜಿ.ತೂಕದ ಡ್ರೋಣ್‌ನಲ್ಲಿ ಮೋಡ ಬಿತ್ತನೆ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ರತ್ನಾಕರ್ ನಾಯಕ್, ಈಗಿನ ತಂತ್ರ ಜ್ಞಾನದಂತೆ ವಿಮಾನದಲ್ಲಿ ಎರಡು ಪೈಲೆಟ್ ಸಹಿತ ವಿಜ್ಞಾನಿಗಳು ಏರ್ ಪೋರ್ಟ್‌ನಿಂದ ಮೋಡ ಇದ್ದಲ್ಲಿಗೆ ಹೋಗಿ ಮೋಡ ಬಿತ್ತನೆ ಮಾಡುತ್ತಿದ್ದರು. ಅವರು ಇಷ್ಟು ದೊಡ್ಡ ವಿಮಾನದಲ್ಲಿ ಕೇವಲ 5ರಿಂದ 10 ಕೆ.ಜಿ. ಸಿಲ್ವರ್ ಅಯೋಡೈಡ್ ಮಿಶ್ರಣವನ್ನು ಮಾತ್ರ ತೆಗೆದುಕೊಂಡು ಹೋಗಿ ಬಿತ್ತನೆ ಮಾಡುತ್ತಾರೆ. ಇಷ್ಟು ಕಡಿಮೆ ಪ್ರಮಾಣದ ಮಿಶ್ರಣ ಕೊಂಡೊಯ್ಯಲು ವಿಮಾನವನ್ನು ಅವಲಂಬಿಸಬೇಕಾಗುತ್ತದೆ. ಇದರಿಂದ ಈ ತಂತ್ರಜ್ಞಾನದ ನಿರ್ವಹಣಾ ಖರ್ಚು ಬಹಳ ದುಬಾರಿ ಎಂದರು.

 ಇದೀಗ ನಾವು ಇದೇ ರೀತಿಯಲ್ಲಿ ಮೋಡ ಬಿತ್ತನೆ ಮಾಡಲು ಡ್ರೋಣ್ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಿದ್ದು, ಇದರಲ್ಲಿಯೂ 10ಕೆ.ಜಿ.ಯಷ್ಟು ಮಿಶ್ರಣವನ್ನು ತೆಗೆದುಕೊಂಡು ಹೋಗಿ ಮೋಡ ಬಿತ್ತನೆ ಮಾಡಬಹುದಾಗಿದೆ. ಇದು ಬಹಳಷ್ಟು ಕಡಿಮೆ ಖರ್ಚಿನಲ್ಲಿ ಆಗುತ್ತದೆ. ಈಗಾಗಲೇ ಇದರ ಪ್ರಾಯೋಗಿಕ ಹಾರಾಟ ಮಾಡಿ ಯಶಸ್ವಿಯಾಗಿದ್ದೇವೆ. ಮುಂದೆ ಇದಕ್ಕೆ ಸರಕಾರದ ಸಹಕಾರ ಅಗತ್ಯ ಎಂದು ಅವರು ತಿಳಿಸಿದರು.

ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಡ್ರೋಣ್ ಮೂಲಕ ಮೋಡ ಬಿತ್ತನೆ ಮಾಡುವ ಅವಿಷ್ಕಾರವು ಯಶಸ್ವಿ ಯಾದರೆ ಸರಕಾರಕ್ಕೆ ವರದಾನವಾಗಲಿದೆ. ಈವರೆಗೆ ವಿಮಾನದ ಮೂಲಕ ಮೋಡ ಬಿತ್ತನೆ ಮಾಡಲಾಗುತ್ತಿತ್ತು. ಇದೀಗ ಅದೇ ಕಾರ್ಯವನ್ನು ಸಣ್ಣ ಡ್ರೋಣ್‌ನಲ್ಲೂ ಮಾಡಬಹುದು ಎಂಬುದನ್ನು ರತ್ನಾಕರ್ ತೋರಿಸಿದ್ದಾರೆ ಎಂದು ಹೇಳಿದರು.

ಈ ಹೊಸ ತಂತ್ರಜ್ಞಾನದ ಪ್ರಯೋಗ ಮಾಡಲು ಇವರಿಗೆ ಸರಕಾರದ ಅನುಮತಿ ಮತ್ತು ಹಣಕಾಸು ನೆರವು ಬೇಕಾಗುತ್ತದೆ. ಈ ನಿಟ್ಟಿನಲ್ಲಿ ರತ್ನಾಕರ್ ನಾಯಕ್‌ರನ್ನು ಬೆಂಗಳೂರಿನಲ್ಲಿ ಕೃಷಿ ಸಚಿವರೊಂದಿಗೆ ಭೇಟಿ ಮಾಡಿಸಿ, ಅಗತ್ಯ ಬಿದ್ದರೆ ಮುಖ್ಯಮಂತ್ರಿಯನ್ನು ಕೂಡ ಭೇಟಿ ಮಾಡಿಸಿ ಮಾತುಕತೆ ನಡೆಸಲಾಗುವುದು. ಅದಕ್ಕಾಗಿ ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಸದಸ್ಯ ಜನಾರ್ದನ ಭಂಡಾರ್ಕರ್, ಉಡುಪಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ಆ್ಯರೋನಾಟಿಕಲ್ ಇಂಜಿನಿಯರ್ ಪ್ರಜ್ವಲ್ ಹೆಗ್ಡೆ ಬೈಲೂರು ಉಪಸ್ಥಿತರಿದ್ದರು. ದಿವಾಕರ್ ಕಾರ್ಕಳ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X