Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಸತಿ, ಕಾರ್ಮಿಕ ನಿಯಮ ಉಲ್ಲಂಘನೆ ಸಮಸ್ಯೆ...

ವಸತಿ, ಕಾರ್ಮಿಕ ನಿಯಮ ಉಲ್ಲಂಘನೆ ಸಮಸ್ಯೆ ಎದುರಿಸುವವರಿಗೆ ಸೌದಿ ಸರ್ಕಾರದಿಂದ ಮಹತ್ವದ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ20 March 2017 12:53 PM IST
share
ವಸತಿ, ಕಾರ್ಮಿಕ ನಿಯಮ ಉಲ್ಲಂಘನೆ ಸಮಸ್ಯೆ ಎದುರಿಸುವವರಿಗೆ ಸೌದಿ ಸರ್ಕಾರದಿಂದ ಮಹತ್ವದ ಘೋಷಣೆ

ಜಿದ್ದಾ,ಮಾ.20 : ಇಲ್ಲಿನ ಆಂತರಿಕ ಸಚಿವಾಲಯವು ರವಿವಾರದಂದು ‘‘ಎ ನೇಶನ್ ವಿದೌಟ್ ವಾಯ್ಲೇಶನ್ಸ್’’ (ನಿಯಮಗಳ ಉಲ್ಲಂಘನೆಯಿಲ್ಲದ ದೇಶ) ಎಂಬ ಅಭಿಯಾನ ಆರಂಭಿಸಿದ್ದು ದೇಶದ ವಸತಿ ಮತ್ತು ಕಾರ್ಮಿಕ ಕಾನೂನುಗಳ ಉಲ್ಲಂಘನೆ ಮಾಡುವವರಿಗೆ ದಂಡವಿಲ್ಲದೆಯೇ ದೇಶ ಬಿಡಲು 90 ದಿನಗಳ ಕಾಲಾವಕಾಶ ನೀಡಲಾಗಿದೆ.

ಮಾರ್ಚ್ 29ರಿಂದ ಊರ್ಜಿತವಾಗುವ ಈ 90 ದಿನಗಳ ಗ್ರೇಸ್ ಅವಧಿಯನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ನಿಯಮಗಳ ಉಲ್ಲಂಘಕರಿಗೆ ರಾಜಕುಮಾರ ಮೊಹಮ್ಮದ್ ಬಿನ್ ನೈಫ್, ಉಪ ಪ್ರಧಾನಿ ಹಾಗೂ ಆಂತರಿಕ ಸಚಿವರು ಆಗ್ರಹಿಸಿದ್ದಾರೆ.

ನಿಗದಿತ ಅವಧಿಯೊಳಗಾಗಿ ದೇಶ ಬಿಡಲು ಬಯಸುವವರಿಗೆ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ನೆರವಾಗಿ ಎಲ್ಲಾ ರೀತಿಯ ನಿರ್ಬಂಧಗಳಿಂದ ಅವರನ್ನು ಮುಕ್ತರನ್ನಾಗಿಸಬೇಕೆಂದು ರಾಜಕುಮಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಮೇಲೆ ತಿಳಿಸಲಾದ ಹೊಸ ಅಭಿಯಾನವನ್ನು 19 ಸರಕಾರಿ ಏಜನ್ಸಿಗಳು ಕೈಗೊಳ್ಳಲಿವೆ ಎಂದು ಆಂತರಿಕ ಸಚಿವಾಲಯದ ವಕ್ತಾರ ಮೇ. ಜ. ಮನ್ಸೂರ್ ಅಲ್-ತುರ್ಕಿ ಹೇಳಿದ್ದಾರೆ. ಹಜ್ ಹಾಗೂ ಉಮ್ರಾಹ್ ಯಾತ್ರೆಗಾಗಿ ಆಗಮಿಸಿ ಅವಧಿ ಮೀರಿ ಇಲ್ಲಿ ವಾಸಿಸುವವರಿಗೆ ಹಾಗೂ ಇನ್ನಿತರ ಯಾವುದೇ ವಿಧದ ವೀಸಾ ಉಲ್ಲಂಘನೆ ಮಾಡಿದವರು ಈ ಸೌಲಭ್ಯದ ಪ್ರಯೋಜನ ಪಡೆಯಬಹುದಾಗಿದೆ.

ಗಡಿಯನ್ನು ಅಕ್ರಮವಾಗಿ ಯಾವುದೇ ವಸತಿ ಯಾ ಉದ್ಯೋಗ ವೀಸಾ ಪಡೆಯದೇ ಪ್ರವೇಶಿಸಿದವರೂ ಈ ಅಭಿಯಾನದಂಗವಾಗಿ ಪ್ರಯೋಜನ ಪಡೆದು ದೇಶ ತೊರೆಯಬಹುದಾಗಿದೆ ಹಾಗೂ ಅವರಿಗೆ ಪ್ರಯಾಣ ಪರವಾನಿಗೆಗಳನ್ನು ನೀಡಲಾಗುವುದು.

ನಿಯಮ ಉಲ್ಲಂಘಕರಿಗೆ ದೇಶ ತ್ಯಜಿಸಲು ಅನುಕೂಲವಾಗುವಂತೆ ಎಲ್ಲಾ ತಯಾರಿಯನ್ನೂ ಪಾಸ್ ಪೋರ್ಟ್ ಇಲಾಖೆಯ ಮಹಾ ನಿರ್ದೇಶನಾಲಯ ಹಾಗೂ ಇಮಿಗ್ರೇಶನ್ ಇಲಾಖೆ ಕೈಗೊಂಡಿದೆ.

ಗುರುತು ಪತ್ರವಿಲ್ಲದ ನಿವಾಸಿಗಳು ಹಾಗೂ ಹಜ್ ವೀಸಾ ಅವಧಿ ಮುಗಿದ ನಂತರವೂ ದೇಶದಲ್ಲಿ ವಾಸಿಸುತ್ತಿರುವವರು ತಮ್ಮ ಹತ್ತಿರದ ಪಾಸ್ ಪೋರ್ಟ್ ಇಲಾಖೆ ಕಚೇರಿಗೆ ಭೇಟಿ ನೀಡುವಂತೆಯೂ ಅಲ್-ತುಕ್ರಿ ಸಲಹೆ ನೀಡಿದ್ದಾರೆ. ಉದ್ಯೋಗ ಯಾ ವಸತಿ ವೀಸಾ ಇಲ್ಲದವರನ್ನು ಉದ್ಯೋಗಕ್ಕೆ ನೇಮಿಸಿಕೊಳ್ಳದಂತೆಯೂ ವ್ಯಕ್ತಿಗಳು ಹಾಗೂ ಸಂಸ್ಥೆಗಳಿಗೆ ಅವರು ಸಲಹೆ ನೀಡಿದ್ದಾರಲ್ಲದೆ ಈ ಆದೇಶ ಪಾಲಿಸದವರ ಬಗ್ಗೆ ಮಾಹಿತಿಯನ್ನು 999 ಸಂಖ್ಯೆಗೆ ಕರೆ ಮಾಡಿ ತಿಳಿಸುವಂತೆಯೂ ಹೇಳಿದ್ದಾರೆ.

ಗ್ರೇಸ್ ಅವಧಿ ಮುಗಿದ ನಂತರ ನಿಯಮ ಉಲ್ಲಂಘಕರಿಗೆ ದಂಢ ವಿಧಿಸಲಾಗುವುದು. ಇಂತಹುದೇ ಒಂದು ಅಭಿಯಾನ ಮೂರು ವರ್ಷಗಳ ಹಿಂದೆ ಆರಂಭವಾದಾಗ 2.5 ಮಿಲಿಯನ್ ನಿಯಮ ಉಲ್ಲಂಘಕರು ದೇಶ ತೊರೆದಿದ್ದರು.

ಅವರ ಇಲಾಖೆ ಈಗಾಗಲೇ ಜಲ ಹಾಗೂ ರಸ್ತೆ ಮಾರ್ಗವಾಗಿ ದೇಶವನ್ನು ಅಕ್ರಮವಾಗಿ ಪ್ರವೇಶಿಸಲೆತ್ನಿಸಿದ ಸಾವಿರಾರು ಮಂದಿಯನ್ನು ಹಿಂದಿರುಗುವಂತೆ ಮಾಡಿದೆ ಎಂದು ಗಡಿ ರಕ್ಷಣಾ ಪಡೆಯ ವಕ್ತಾರ ಕರ್ನಲ್ ಸಹರ್ ಅಲ್-ಹರ್ಬಿ ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X