Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೆನ್‌ಲಾಕ್ ಆಸ್ಪತ್ರೆಯಲ್ಲಿ ‘ನೇತ್ರ...

ವೆನ್‌ಲಾಕ್ ಆಸ್ಪತ್ರೆಯಲ್ಲಿ ‘ನೇತ್ರ ಬ್ಯಾಂಕ್’ ಸ್ಥಾಪನೆ: ಡಾ.ಎಂ.ಆರ್. ರವಿ

ವಾರ್ತಾಭಾರತಿವಾರ್ತಾಭಾರತಿ20 March 2017 2:04 PM IST
share
ವೆನ್‌ಲಾಕ್ ಆಸ್ಪತ್ರೆಯಲ್ಲಿ ‘ನೇತ್ರ ಬ್ಯಾಂಕ್’ ಸ್ಥಾಪನೆ: ಡಾ.ಎಂ.ಆರ್. ರವಿ

ಮಂಗಳೂರು, ಮಾ.20: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೇತ್ರದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವೆನ್‌ಲಾಕ್ ಆಸ್ಪತ್ರೆಯಲ್ಲಿ ‘ನೇತ್ರಬ್ಯಾಂಕ್’ ತೆರೆಯಲು ಸರಕಾರಕ್ಕೆ ಜಿಲ್ಲಾ ಪಂಚಾಯತ್ ವತಿಯಿಂದ ಪ್ರಸ್ತಾವನೆಯನ್ನು ಸಲ್ಲಿಸುವುದಾಗಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ ತಿಳಿಸಿದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ವಿಭಾಗದ ವತಿಯಿಂದ ಜಿಲ್ಲಾ ಪಂಚಾಯತ್‌ನ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನೇತ್ರದಾನ ಮತ್ತು ಕಣ್ಣಿನ ಅರಿವು ಕಾರ್ಯಕ್ರಮದ ಅಧ್ಯ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 150 ವರ್ಷಗಳಿಗೂ ಅಧಿಕ ಹಳೆಯದಾದ ಸರಕಾರಿ ಆಸ್ಪತ್ರೆಯಿದ್ದರೂ ಅಲ್ಲಿ ಈವರೆಗೂ ನೇತ್ರ ಬ್ಯಾಂಕ್ ಇಲ್ಲದಿರುವುದು ಖೇದಕರ ಸಂಗತಿ. ಹಾಗಾಗಿ ಜಿಲ್ಲಾಸ್ಪತ್ರೆಯಲ್ಲಿ ಸರಕಾರದ ನೆರವಿನಲ್ಲಿ ನೇತ್ರಬ್ಯಾಂಕ್ ತೆರೆದು ಈ ವರ್ಷದಲ್ಲಿ 10,000 ನೇತ್ರದಾನಿಗಳನ್ನು ನೋಂದಣಿ ಮಾಡುವ ಗುರಿಯನ್ನು ಜಿಲ್ಲಾ ಪಂಚಾಯತ್ ಹೊಂದಿದೆ ಎಂದು ಅವರು ಹೇಳಿದರು.

ನಮ್ಮ ಮರಣದ ಬಳಿಕ ಮಣ್ಣು ಪಾಲಾಗುವ ನೇತ್ರಗಳು ಸೇರಿದಂತೆ ದೇಹದ ಇತರ ಅಗತ್ಯ ಅಂಗಾಂಗಗಳನ್ನು ಇನ್ನೊಬ್ಬರಿಗೆ ಮರುಜೀವ ನೀಡಲು ದಾನ ಮಾಡುವುದು ಪುಣ್ಯದ ಕೆಲಸ. ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ. ಅದಕ್ಕಾಗಿ ಶಾಲಾ ಕಾಲೇಜುಳಲ್ಲಿ ಎಲ್ಲಾ ಇಲಾಖೆಗಳಲ್ಲೂ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ನೇತ್ರದಾನ ಸೇರಿದಂತೆ ಅಂಗಾಂಗ ದಾನಗಳ ಮೂಲಕ ಸರಕಾರಿ ನೌಕರರು ತಮ್ಮ ಜೀವನಕ್ಕೆ ಮಹತ್ವವನ್ನು ನೀಡಬಹುದು ಎಂದು ಸಲಹೆ ನೀಡಿದ ಅವರು, ನಮ್ಮ ಕೆಲಸದಲ್ಲಿ ಸಮಯವನ್ನು ಸಮರ್ಪಕವಾಗಿ ಹೊಂದಿಸಿಕೊಳ್ಳಲು ಸಮರ್ಥರಾದಾಗ ಒತ್ತಡದ ಜೀವನದಿಂದ ಪಾರಾಗಲು ಸಾಧ್ಯವಾಗುತ್ತದೆ ಎಂದರು.

ನಾವು ಮಾಡುವ ಕೆಲಸಗಳನ್ನು ಆದ್ಯತೆಯ ನೆಲೆಯಲ್ಲಿ ನಿರ್ವಹಿಸಿದಾಗ ಯಾವುದೇ ರೀತಿಯ ಒತ್ತಡಗಳಿಲ್ಲದೆ ಕಾರ್ಯ ನಿರ್ವಹಿಸುವ ಜತೆಗೆ ಆರೋಗ್ಯಭರಿತ ಜೀವನ ಸಾಗಿಸಲು ಸಾಧ್ಯ ಎಂದು ಸರಕಾರಿ ಅಧಿಕಾರಿಗಳಿಗೆ ಅವರು ಈ ಸಂದರ್ಭ ಕಿವಿಮಾತನ್ನೂ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ನೇತ್ರದಾನ ಮಹತ್ವವಾದ ದಾನ ಎಂದರು.

ವೇದಿಕೆಯಲ್ಲಿ ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ರಾವ್, ಮಾನಸಿಕ ತಜ್ಞ ಜಯಂತ್, ಡಾ. ಶ್ರೀನಿವಾಸ್ ಭಟ್ ಉಪಸ್ಥಿತರಿದ್ದು. ಡಾ. ರತ್ನಾಕರ್ ಸ್ವಾಗತಿಸಿದರು.

25ನೆ ವಿವಾಹ ವಾರ್ಷಿಕೋತ್ಸವಕ್ಕೆ ಸಿಇಒ ದಂಪತಿಯಿಂದ ನೇತ್ರದಾನ:

ತಮ್ಮ ವಿವಾಹದ 25ನೆ ವರ್ಷದ ವಾರ್ಷಿಕೋತ್ಸವದ ಸಂಭ್ರಮವನ್ನು ತಮ್ಮ ಪತ್ನಿಯ ಸಮ್ಮತಿಯ ಮೇರೆಗೆ ನೇತ್ರದಾನಕ್ಕೆ ಮುಂದಾಗುವ ಮೂಲಕ ವಿಶಿಷ್ಠವಾಗಿ ಆಚರಿಸಿಕೊಂಡಿದ್ದಾಗಿ ಸಿಇಒ ಡಾ. ಎಂ.ಆರ್. ರವಿ ಕಾರ್ಯಕ್ರಮದಲ್ಲಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X