Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗ್ರಾಪಂ ನೌಕರರ ವಿವಿಧ ಬೇಡಿಕೆಗೆ...

ಗ್ರಾಪಂ ನೌಕರರ ವಿವಿಧ ಬೇಡಿಕೆಗೆ ಈಡೇರಿಕೆಗೆ ಆಗ್ರಹ: ಪಿಡಿಓ, ವಿಎ, ನೌಕರರಿಂದ ಅನಿರ್ಧಿಷ್ಟಾವಧಿ ಮುಷ್ಕರ

ವಾರ್ತಾಭಾರತಿವಾರ್ತಾಭಾರತಿ20 March 2017 6:25 PM IST
share
ಗ್ರಾಪಂ ನೌಕರರ ವಿವಿಧ ಬೇಡಿಕೆಗೆ ಈಡೇರಿಕೆಗೆ ಆಗ್ರಹ: ಪಿಡಿಓ, ವಿಎ, ನೌಕರರಿಂದ ಅನಿರ್ಧಿಷ್ಟಾವಧಿ ಮುಷ್ಕರ

ಉಡುಪಿ, ಮಾ.20: ಗ್ರಾಪಂ ಹಂತದಲ್ಲಿನ ಅವೈಜ್ಞಾನಿಕ ಒತ್ತಡ, ನೌಕರರ ಭಡ್ತಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಂಘ, ಕಾರ್ಯದರ್ಶಿಯವರ ಸಂಘ, ದ್ವಿತೀಯ ದರ್ಜೆ ಲೆಕ್ಕಸಹಾಯಕರ ಸಂಘ ಮತ್ತು ಪಂಚಾಯತ್ ನೌಕರರ ಸಂಘವು ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಂಡಿದೆ.

ಧರಣಿಯನ್ನುದ್ದೇಶಿಸಿ ಮಾತನಾಡಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಸಿದ್ದೇಶ್, ಗ್ರಾಪಂನಲ್ಲಿ ಕಾರ್ಯನಿರ್ವಹಿಸುತ್ತಿರುವ ಬಾಪೂಜಿ ಸೇವಾ ಕೇಂದ್ರಗಳಿಗೆ ಮಾನವ ಸಂಪನ್ಮೂಲ ಹಾಗೂ ತಾಂತ್ರಿಕ ಪರಿಕರಗಳನ್ನು ಕಾಲಮಿತಿಯೊಳಗೆ ಒದಗಿಸಬೇಕು. ಕಾರ್ಯದರ್ಶಿ, ಲೆಕ್ಕ ಸಹಾಯಕರ ಭಡ್ತಿಗೆ ಸಂಬಂಧಿಸಿದಂತೆ ಕೂಡಲೇ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಪಂಚಾಯತ್ ಸಿಬ್ಬಂದಿಗಳ ಭಡ್ತಿ ಪ್ರಕ್ರಿಯೆಯನ್ನು ಅತಿ ಶೀಘ್ರವಾಗಿ ಮಾಡಬೇಕು. ಸಿಬ್ಬಂದಿಗಳಿಗೆ ಪಿಎಫ್ ಮತ್ತು ಇಎಸ್‌ಐ ಮತ್ತಿತ್ತರ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಿವಿಧ ಯೋಜನೆಗಳ ಅನುಷ್ಠಾನ, ವಸತಿ ಯೋಜನೆಯ ಅವೈಜ್ಞಾನಿಕ ಅನುಷ್ಠಾನ, ನೋಟೀಸ್ ನೀಡಿಕೆೆ, ಇಲಾಖೆ ವಿಚಾರಣೆಯನ್ನು ನಿಲ್ಲಿಸಬೇಕು. ಇಲಾಖಾ ವಿಚಾರಣೆಯನ್ನು ಹಿಂದಕ್ಕೆ ಪಡೆಯಬೇಕು. ಗ್ರಾಪಂ ನೌಕರರ ವಿರುದ್ಧ ಇರುವ ಪ್ರಕರಣಗಳನ್ನು ಇಲಾಖಾ ತನಿಖೆ ನಡೆಸದೆ ಲೋಕಾಯುಕ್ತಕ್ಕೆ ವಹಿಸುವುದನ್ನು ತಕ್ಷಣೆ ನಿಲ್ಲಿಸಬೇಕು. ಕಂಪ್ಯೂಟರ್ ನಿರ್ವಾಹಕರ ಹುದ್ದೆಯನ್ನು ಸೃಜಿಸಿ ಅನುಮೋದನೆ ನೀಡಬೇಕು. ಗ್ರಾಪಂ ಎಲ್ಲ ನೌಕರರನ್ನು ಸರಕಾರಿ ನೌಕರರನ್ನಾಗಿಸಲು ಕ್ರಮ ತೆಗೆದುಕೊಳ್ಳಬೇಕು. ನೌಕರರ ವೇತನ ಭತ್ಯೆ ಮತ್ತು ಇತರ ಸೌಲಭ್ಯಗಳನ್ನು ಸಕಾಲ ಯೋಜನೆಯಡಿ ನಿಗದಿತ ಕಾಲಾವಧಿಯಲ್ಲಿ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಂಘದ ಜಿಲ್ಲಾ ಕಾರ್ಯದರ್ಶಿ ಮಹೇಶ್, ಉಪಾಧ್ಯಕ್ಷೆ ಪ್ರಮೀಳಾ ನಾಯಕ್, ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಸಂಘದ ಅಧ್ಯಕ್ಷ ಶಿವರಾಜ್, ಕಾರ್ಯದರ್ಶಿ ಬೆಟ್ಟ ಸ್ವಾಮಿ, ಪಂಚಾಯತ್ ನೌಕರರ ಸಂಘದ ಅಧ್ಯಕ್ಷ ನಾರಾಯಣ, ಕಾರ್ಯ ದರ್ಶಿ ರಮೇಶ್ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X