Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೊದಲ ದಿನದ ಕಾರ್ಯಭಾರ ನಿರ್ವಹಿಸಿದ...

ಮೊದಲ ದಿನದ ಕಾರ್ಯಭಾರ ನಿರ್ವಹಿಸಿದ ಆದಿತ್ಯನಾಥ

ಅಪರಾಧ,ಕಸಾಯಿಖಾನೆಗಳತ್ತ ಗಮನ

ವಾರ್ತಾಭಾರತಿವಾರ್ತಾಭಾರತಿ20 March 2017 3:52 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮೊದಲ ದಿನದ ಕಾರ್ಯಭಾರ ನಿರ್ವಹಿಸಿದ ಆದಿತ್ಯನಾಥ

ಲಕ್ನೋ,ಮಾ.20: ಬಿಎಸ್‌ಪಿ ನಾಯಕನೋರ್ವನ ಹತ್ಯೆ ಹಿನ್ನೆಲೆಯಲ್ಲಿ ಸೋಮವಾರ ರಾಜ್ಯ ಪೊಲೀಸ್ ಮುಖ್ಯಸ್ಥರನ್ನು ಭೇಟಿಯಾಗುವುದರೊಂದಿಗೆ ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿ ಆದಿತ್ಯನಾಥ ಅವರು ಕಚೇರಿಯಲ್ಲಿ ತನ್ನ ಮೊದಲ ದಿನವನ್ನು ಆರಂಭಿಸಿದರು. ‘ಎಚ್ಚರಿಕೆಯಿಂದಿರಿ ’ಎಂದು ಡಿಜಿಪಿ ಜಾವೇದ್ ಅಹ್ಮದ್ ಅವರಿಗೆ ಸೂಚಿಸಿದ ಅವರು, ರಾಜ್ಯದಲ್ಲಿ ಅಪರಾಧಗಳನ್ನು ಹತ್ತಿಕ್ಕಲು ಯೋಜನೆಯೊಂದರ ಕುರಿತು ಕೇಳಿದರೆನ್ನಲಾಗಿದೆ. ಆದಿತ್ಯನಾಥ ಅವರು ಇಬ್ಬರು ಉಪಮುಖ್ಯಮಂತ್ರಿಗಳಾದ ಕೇಶವ ಪ್ರಸಾದ ಮೌರ್ಯ ಮತ್ತು ದಿನೇಶ ಶರ್ಮಾ ಅವರೊಂದಿಗೆ ರಾಜ್ಯದ ಹಿರಿಯ ಅಧಿಕಾರಿಗಳನ್ನೂ ಭೇಟಿಯಾದರು.

ಡಿಜಿಪಿಯೊಂದಿಗೆ ಭೇಟಿ ಸಂದರ್ಭದಲ್ಲಿ ರವಿವಾರ ರಾತ್ರಿ ಅಲಹಾಬಾದ್‌ನಲ್ಲಿ ಬಿಎಸ್‌ಪಿ ನಾಯಕನ ಹತ್ಯೆ ಬಗ್ಗೆ ಕಳವಳ ವ್ಯಕ್ತಪಡಿಸಿದರಲ್ಲದೆ, 15 ದಿನಗಳಲ್ಲಿ ಉತ್ತಮ ಪೊಲೀಸ್ ಕಾರ್ಯ ನಿರ್ವಹಣೆಗೆ ಅಗತ್ಯ ನೀಲಿನಕ್ಷೆಯನ್ನು ಸಿದ್ಧಗೊಳಿಸುವಂತೆ ಆದೇಶಿಸಿದರು ಎಂದು ಮೂಲಗಳು ತಿಳಿಸಿದವು.

 ಕಸಾಯಿಖಾನೆಗಳನ್ನು ಮುಚ್ಚುವ ಬಿಜೆಪಿ ಭರವಸೆಯನ್ನು ನೂತನ ಸರಕಾರವು ಈಡೇರಿಸಲಿದೆ ಎಂದು ಸುಳಿವು ನೀಡಿದ ಮೌರ್ಯ, ಸಂಪುಟದ ಪ್ರಥಮ ಸಭೆಯಲ್ಲಿ ಈ ಕುರಿತು ನಿರ್ಧಾರವೊಂದನ್ನು ತೆಗೆದುಕೊಳ್ಳಲಾಗುವುದು ಎಂದರು. ಆದರೆ ಪರವಾನಿಗೆ ಹೊಂದಿರುವ ಕಸಾಯಿಖಾನೆಗಳ ವಿರುದ್ಧವೂ ಕ್ರಮವನ್ನು ಜರುಗಿಸಲಾಗುವುದೇ ಎನ್ನುವುದು ಸ್ಪಷ್ಟವಾಗಿಲ್ಲ.

ಅಲಹಾಬಾದ್‌ನಲ್ಲಿ ರವಿವಾರ ರಾತ್ರಿ ಮುಚ್ಚಿಸಲಾದ ಎರಡು ಕಸಾಯಿಖಾನೆಗಳು ಅಕ್ರಮವಾಗಿ ನಡೆಯುತ್ತಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದಿತ್ಯನಾಥ ಅವರು ಸದಾ ಕಸಾಯಿಖಾನೆಗಳನ್ನು ಮುಚ್ಚಿಸಬೇಕು ಎಂದು ಪ್ರತಿಪಾದಿಸಿಕೊಂಡು ಬಂದಿದ್ದಾರೆ. ಆದರೆ ಇಂತಹ ಕ್ರಮ ಸಾವಿರಾರು ಜನರ ಆದಾಯ ಮತ್ತು ಜೀವನೋಪಾಯಕ್ಕೆ ಕಲ್ಲು ಹಾಕಲಿದೆ ಎಂದು ಮಾಂಸ ವ್ಯಾಪಾರಿಗಳು ಹೇಳಿದ್ದಾರೆ.

ಆದಿತ್ಯನಾಥ ಅವರು ಬೆಳಿಗ್ಗೆ ಮುಖ್ಯ ಕಾರ್ಯದರ್ಶಿ ರಾಹುಲ್ ಭಟ್ನಾಗರ್ ಅವರನ್ನೂ ಭೇಟಿಯಾಗಿ ಮಾತುಕತೆ ನಡೆಸಿದರು. ರವಿವಾರ ಪ್ರಮಾಣ ವಚನ ಸ್ವೀಕಾರದ ಬೆನ್ನಿಗೇ ತನ್ನ ಸಂಪುಟ ಸದಸ್ಯರೊಂದಿಗೆ ಅನೌಪಚಾರಿಕ ಸಭೆಯನ್ನು ನಡೆಸಿದ್ದ ಆದಿತ್ಯನಾಥ, 15 ದಿನಗಳಲ್ಲಿ ತಮ್ಮ ಆಸ್ತಿ-ಸಂಪತ್ತು ವಿವರಗಳನು ಸಲ್ಲಿಸುವಂತೆ ಎಲ್ಲ ಸಚಿವರಿಗೆ ತಾಕೀತು ಮಾಡಿದ್ದಾರೆ.

ಉ.ಪ್ರ.ಸರಕಾರದ ಅಧಿಕೃತ ವಕ್ತಾರರಾಗಿ ನಿಯೋಜಿತ ಶ್ರೀಕಾಂತ ಶರ್ಮಾ ಮತ್ತು ಸಿದ್ಧಾರ್ಥನಾಥ ಸಿಂಗ್ ಅವರ ಮೂಲಕ ಹೊರತುಪಡಿಸಿ ಮಾಧ್ಯಮಗಳೊಂದಿಗೆ ಮಾತನಾಡದಂತೆ ಸಚಿವರಿಗೆ ಎಚ್ಚರಿಕೆ ನೀಡಲಾಗಿದೆ.

ಆದಿತ್ಯನಾಥ ಸೋಮವಾರ ಲಕ್ನೋದ 5,ಕಾಳಿದಾಸ ಮಾರ್ಗದ ಅಧಿಕೃತ ನಿವಾಸವನ್ನು ಪ್ರವೇಶಿಸಿದರು. ಗೋರಖಪುರದಿಂದ ಆಗಮಿಸಿದ್ದ ಏಳು ಪುರೋಹಿತರ ತಂಡವು ಗೃಹಪ್ರವೇಶ ವಿಧಿಗಳನ್ನು ನಡೆಸಿತು.

 ಗೋರಖಪುರದಿಂದ ಐದು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಆದಿತ್ಯನಾಥ ಅಲ್ಲಿಯ ಗೋರಖನಾಥ ದೇವಸ್ಥಾನದ ಮಹಂತರಾಗಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X