Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ತಮಿಳುನಾಡಿಗೆ ವಿಜಯ್ ಹಝಾರೆ ಟ್ರೋಫಿ

ತಮಿಳುನಾಡಿಗೆ ವಿಜಯ್ ಹಝಾರೆ ಟ್ರೋಫಿ

ದಿನೇಶ್ ಕಾರ್ತಿಕ್ ಆಕರ್ಷಕ ಶತಕ

ವಾರ್ತಾಭಾರತಿವಾರ್ತಾಭಾರತಿ20 March 2017 11:38 PM IST
share
ತಮಿಳುನಾಡಿಗೆ ವಿಜಯ್ ಹಝಾರೆ ಟ್ರೋಫಿ

ಹೊಸದಿಲ್ಲಿ, ಮಾ.20: ಹಿರಿಯ ಆಟಗಾರ ದಿನೇಶ್ ಕಾರ್ತಿಕ್ ಸಿಡಿಸಿದ ಆಕರ್ಷಕ ಶತಕ(112 ರನ್, 120 ಎಸೆತ) ಹಾಗೂ ಬೌಲರ್‌ಗಳ ಸಂಘಟಿತ ದಾಳಿಯ ಬೆಂಬಲದಿಂದ ತಮಿಳುನಾಡು ತಂಡ ಬಂಗಾಳ ತಂಡವನ್ನು 37 ರನ್‌ಗಳ ಅಂತರದಿಂದ ಸೋಲಿಸಿ ವಿಜಯ್ ಹಝಾರೆ ಟ್ರೋಫಿ ಏಕದಿನ ಟೂರ್ನಮೆಂಟ್‌ನಲ್ಲಿ ಪ್ರಶಸ್ತಿಯನ್ನು ಬಾಚಿಕೊಂಡಿದೆ.

ವಿಜಯ್ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಮೂರನೆ ಬಾರಿ ತಮಿಳುನಾಡು ತಂಡ ಬಂಗಾಳ ತಂಡವನ್ನು ಮಣಿಸಿ ಪ್ರಶಸ್ತಿ ಗೆದ್ದುಕೊಂಡಿದೆ. ಈ ಹಿಂದೆ 2008-09 ಹಾಗೂ 2009-10ರಲ್ಲಿ ಬಂಗಾಳವನ್ನು ಸೋಲಿಸಿತ್ತು.

 ಸೋಮವಾರ ಇಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ತಮಿಳುನಾಡು ತಂಡದ ಪರ ಕಾರ್ತಿಕ್ ಶತಕದ ಕೊಡುಗೆ(112 ರನ್, 120 ಎಸೆತ. 14 ಬೌಂಡರಿ) ನೀಡಿದರು. ಕಾರ್ತಿಕ್ ಏಕಾಂಗಿ ಹೋರಾಟದ ಹೊರತಾಗಿಯೂ ತಮಿಳುನಾಡು 47.2 ಓವರ್‌ಗಳಲ್ಲಿ 217 ರನ್‌ಗೆ ಆಲೌಟಾಗಿದೆ. ಮುಹಮ್ಮದ್ ಶಮಿ(4-26) ಹಾಗೂ ಅಶೋಕ್ ದಿಂಡ(3-36) ತಮಿಳುನಾಡಿನ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಿಗೆ ಸವಾಲಾದರು.

ಒಂದೆಡೆ ವಿಕೆಟ್ ಬೀಳುತ್ತಿದ್ದರೂ ದೃತಿಗೆಡದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಕಾರ್ತಿಕ್ ಅವರು ಆಮಿರ್ ಗನಿ(0/40, 10 ಓವರ್) ಹಾಗೂ ಪ್ರಗ್ಯಾನ್ ಓಜಾ(0/49, 10 ಓವರ್) ಅವರ 20 ಓವರ್‌ಗಳ ಬೌಲಿಂಗ್‌ನಲ್ಲಿ 91 ರನ್ ಕಲೆಹಾಕಿದ ಕಾರ್ತಿಕ್ ತಮಿಳುನಾಡು ಪರ ನಿರ್ಣಾಯಕ ಸ್ಕೋರ್ ದಾಖಲಿಸಿದರು.

ಬಂಗಾಳ 180 ರನ್‌ಗೆ ಆಲೌಟ್: ಗೆಲ್ಲಲು 218 ರನ್ ಗುರಿ ಪಡೆದಿದ್ದ ಬಂಗಾಳದ ಬ್ಯಾಟ್ಸ್‌ಮನ್‌ಗಳು ತಮಿಳುನಾಡಿನ ಬೌಲರ್‌ಗಳ ಶಿಸ್ತುಬದ್ಧ ಬೌಲಿಂಗ್‌ಗೆ ತತ್ತರಿಸಿ ಕೇವಲ 180 ರನ್‌ಗೆ ಸರ್ವಪತನಗೊಂಡರು. ಆಫ್-ಸ್ಪಿನ್ನರ್ ವಾಷಿಂಗ್ಟನ್ ಸುಂದರ್(0/17) ವಿಕೆಟ್ ಪಡೆಯಲು ವಿಫಲರಾದರು ತನ್ನ 8 ಓವರ್‌ಗಳ ಸ್ಪೆಲ್‌ನಲ್ಲಿ ಬಂಗಾಳದ ಬ್ಯಾಟ್ಸ್‌ಮನ್‌ಗಳಿಗೆ ರನ್ ಗಳಿಸದಂತೆ ಕಡಿವಾಣ ಹಾಕಿದರು.

ರಾಹಿಲ್ ಶಾ(2-38), ಅಶ್ವಿನ್ ಕ್ರಿಸ್ಟ್(2-23)ಹಾಗೂ ಎಂ.ಮುಹಮ್ಮದ್(2-30) ತಲಾ ಎರಡು ವಿಕೆಟ್‌ಗಳನ್ನು ಕಬಳಿಸಿ ತಮಿಳುನಾಡಿಗೆ 37 ರನ್ ಗೆಲುವು ತಂದರು.

ಬಂಗಾಳದ ನಾಯಕ ಮನೋಜ್ ತಿವಾರಿ(32) ತಮಿಳುನಾಡು ತಂಡದ ನಾಯಕ ವಿಜಯ್ ಶಂಕರ್‌ಗೆ(1-20)ವಿಕೆಟ್ ಒಪ್ಪಿಸಿದರು. ಬಂಗಾಳ ಒಂದು ಹಂತದಲ್ಲಿ 68 ರನ್‌ಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಆಗ 5ನೆ ವಿಕೆಟ್‌ಗೆ 65 ರನ್ ಜೊತೆಯಾಟ ನಡೆಸಿದ ಸುದೀಪ್ ಚಟರ್ಜಿ(58 ರನ್, 79 ಎಸೆತ, 5 ಬೌಂಡರಿ) ಹಾಗೂ ಅನುಶ್‌ತುಪ್ ಮಜುಂದಾರ್(24 ರನ್, 30 ಎಸೆತ,2 ಬೌಂಡರಿ) ತಂಡವನ್ನು ಆಧರಿಸಿದರು. ಆದರೆ ಈ ಜೋಡಿಯನ್ನು ಅಪರಾಜಿತ್(1-22) ಬೇರ್ಪಡಿಸಿದರು. ಅಗ್ರ ಸ್ಕೋರರ್ ಚಟರ್ಜಿ ಎಡಗೈ ಸ್ಪಿನ್ನರ್ ಸಾಯಿ ಕಿಶೋರ್‌ಗೆ ವಿಕೆಟ್ ಒಪ್ಪಿಸಿದ ಬಳಿಕ ಬಂಗಾಳದ ಗೆಲುವಿನ ಕನಸು ಕಮರಿಹೋಯಿತು.

ಸಂಕ್ಷಿಪ್ತ ಸ್ಕೋರ್

ತಮಿಳುನಾಡು: 47.2 ಓವರ್‌ಗಳಲ್ಲಿ 217 ರನ್‌ಗೆ ಆಲೌಟ್

(ದಿನೇಶ್ ಕಾರ್ತಿಕ್ 112, ಇಂದ್ರಜಿತ್ 32, ಮುಹಮ್ಮದ್ ಶಮಿ 4-26, ಅಶೋಕ್ ದಿಂಡ 3-36)

ಬಂಗಾಳ: 45.5 ಓವರ್‌ಗಳಲ್ಲಿ 180 ರನ್‌ಗೆ ಆಲೌಟ್

(ಸುದೀಪ್ ಚಟರ್ಜಿ 58, ಮನೋಜ್ ತಿವಾರಿ 32, ಅಶ್ವಿನ್ ಕ್ರಿಸ್ಟ್ 2-23, ಮುಹಮ್ಮದ್ 2-30, ಶಾ 2-38)

ಪಂದ್ಯಶ್ರೇಷ್ಠ: ದಿನೇಶ್ ಕಾರ್ತಿಕ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X